ಐಎಂಡಿ ಎಚ್ಚರಿಕೆ: ಮುಂದಿನ 4 ದಿನಗಳವರೆಗೆ ಈ ರಾಜ್ಯಗಳಲ್ಲಿ ದಟ್ಟ ಮಂಜು
ಮುಂದಿನ 4 ದಿನಗಳ ಕಾಲ ಭಾರತದ ವಾಯುವ್ಯ ಭಾಗಗಳಲ್ಲಿ ತೀವ್ರತರವಾದ ಶೀತ ಅಲೆಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಭಾರತೀಯ ಮಾಪನಶಾಸ್ತ್ರ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದೆ. ಇದರಲ್ಲಿ ದೆಹಲಿ, ರಾಜಸ್ಥಾನ, ಹರಿಯಾಣ, ಚಂಡೀಗಢ, ಹಿಮಾಚಲ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳು ಸೇರಿವೆ. ಮುಂದಿನ 4 ದಿನಗಳಲ್ಲಿ ವಾಯುವ್ಯ ಭಾರತದ ಬಯಲು ಪ್ರದೇಶದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಈಗಾಗಲೇ ಪಂಜಾಬ್ನ ಬಹುತೇಕ ಭಾಗಗಳು, ಹರಿಯಾಣ, ಚಂಡೀಗಢ, ಯುಪಿ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ದಟ್ಟ ಮಂಜು ಮತ್ತು ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. IMD ದೆಹಲಿಯ ಕೆಲವು ಪ್ರದೇಶಗಳಲ್ಲಿ ಮತ್ತು ರಾಜಸ್ಥಾನ ಮತ್ತು ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಶೀತ ದಿನದ ಪರಿಸ್ಥಿತಿಗಳನ್ನು ಗಮನಿಸಿದೆ.

ಈ ರಾಜ್ಯಗಳಲ್ಲಿ ಶೀತ ಅಲೆಯ ಸಾಧ್ಯತೆ
ಹವಾಮಾನ ಇಲಾಖೆ ಪ್ರಕಾರ ಮುಂದಿನ 4 ದಿನಗಳ ಕಾಲ ವಾಯುವ್ಯ ಭಾರತದ ಬಯಲು ಸೀಮೆಯಲ್ಲಿ ದಟ್ಟ ಮಂಜು ಕವಿದಿರುವ ಸಾಧ್ಯತೆ ಇದೆ. ಮುಂದಿನ 4 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ದಟ್ಟವಾದ ಮಂಜು ಮತ್ತು ಶೀತ ಅಲೆಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 3-7 ಡಿಗ್ರಿ ಸೆಲ್ಸಿಯಸ್ನಷ್ಟಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. IMD ಪ್ರಕಾರ, ಭಾನುವಾರದಂದು ರಾಜಸ್ಥಾನದ ಉತ್ತರ ಭಾಗಗಳಲ್ಲಿ ಮತ್ತು ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಶೀತ ಅಲೆಗಳ ಪರಿಸ್ಥಿತಿಗಳನ್ನು ಗಮನಿಸಲಾಗಿದೆ. ಜನವರಿ 4-6ರ ಅವಧಿಯಲ್ಲಿ ರಾಜಸ್ಥಾನದ ಉತ್ತರ ಭಾಗಗಳಲ್ಲಿ ಮತ್ತು ಜನವರಿ 3-4 ರಂದು ಪಂಜಾಬ್ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ, ಜನವರಿ 4-6 ರ ಅವಧಿಯಲ್ಲಿ ಹಿಮಾಚಲ ಪ್ರದೇಶದ ಮೇಲೆ ಮತ್ತು ಜನವರಿ 3-7 ರ ಅವಧಿಯಲ್ಲಿ ಹರಿಯಾಣ, ಚಂಡೀಗಢದಲ್ಲಿ ತೀವ್ರ ಶೀತ ಅಲೆಯ ಪರಿಸ್ಥಿತಿಗಳು ಮತ್ತು ಶೀತ ಅಲೆಗಳ ಮುನ್ಸೂಚನೆ ನೀಡಲಾಗಿದೆ.












Click it and Unblock the Notifications