Get Updates
Get notified of breaking news, exclusive insights, and must-see stories!

IMD Weather Forecast: ಈ ಭಾಗಗಳಲ್ಲಿ ಮುಂದಿನ ಮೂರು ದಿನ ರಣಭೀಕರ ಮಳೆ ಮುಂದುವರೆಯುವ ಮುನ್ಸೂಚನೆ

IMD Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಹಲವೆಡೆ ಮಳೆಯೂ ಆಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಉತ್ತರ ಭಾರತದ ರಾಜ್ಯಗಳಲ್ಲಿ ತಾಪಮಾನದಲ್ಲಿ ಗಮನಾರ್ಹವಾಗಿ ಇಳಿಕೆ ಆಗುತ್ತಲಿದ್ದು, ಚಳಿ ಪ್ರಮಾಣ ಹೆಚ್ಚಾಗುತ್ತಲಿದೆ. ಪರಿಣಾಮ ಈ ಭಾಗಗಳ ಜನರು ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಶೀತಗಾಳಿ ಪ್ರಮಾಣ ಮತ್ತಷ್ಟು ಹೆಚ್ಚಳ ಆಗುವ ಸಾಧ್ಯತೆಯಿದೆ. ಅದರಲ್ಲೂ ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟ ಮಂಜು ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆಯೇ ಹಲವೆಡೆ ಮುಂದಿನ ಹಲವು ದಿನಗಳ ಕಾಲ ಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

IMD Weather Forecast Heavy Rainfall Forecast In These States for Next 3 Days from December 7

ತಾಪಮಾನದಲ್ಲಿ ಭಾರೀ ಇಳಿಕೆ: ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಮುಂಬರುವ ದಿನಗಳಲ್ಲಿ ತಾಪಮಾನದಲ್ಲಿ ತೀವ್ರವಾಗಿ ಕುಸಿತ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ರಾಜ್ಯಗಳಲ್ಲಿ ರಾತ್ರಿ ವೇಳೆ ಕನಿಷ್ಠ ತಾಪಮಾನವು ಈಗಾಗಲೇ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದ್ದು, ಇದರಿಂದ ಇಲ್ಲಿನ ನಿವಾಸಿಗಳು ಈಗಲೇ ಹಿಂದೆ ಮುಂದಿನ ದಿನಗಳಲ್ಲಿ ಇನ್ನೇನು ಕಾದಿದೆಯೋ ಎನ್ನುವ ಆತಂಕದಲ್ಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಹಿಮಪಾತ ಆಗುತ್ತಿದೆ. ಇದರೊಂದಿಗೆ ಬಿಸಿಲು ಕೂಡ ಇರುವುದರಿಂದ ಈ ಭಾಗಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಲಿದ್ದಾರೆ. ಮುಂದಿನ ದಿನಗಳಲ್ಲೂ ಈ ಪ್ರದೇಶಗಳಲ್ಲಿ ಹಿಮಪಾತ ಮುಂದುವರಿಯುವ ಸಾಧ್ಯತೆಯಿದೆ. ಆದ್ದರಿಂದ ಪ್ರವಾಸಿಗರು ಎಚ್ಚರದರಿಂದ ಇರುವುದು ಒಳಿತು ಎಂದು ಸಲಹೆ ನೀಡಿದೆ.

ದಕ್ಷಿಣ ಭಾರತದ ಹವಾಮಾನ: ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಹಲವೆಡೆ ಹಾಗೂ ಇನ್ನೂ ಕೆಲವು ದಕ್ಷಿಣ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಮುಂದಿನ ಕೆಲವು ದಿನಗಳವರೆಗೆ ಮೀನುಗಾರರು ಸಮುದ್ರ ತೀರಗಳಿಂದ ದೂರವಿರುವಂತೆ ಐಎಂಡಿ ಸೂಚನೆ ನೀಡಿದೆ. ಮತ್ತೊಂದೆಡೆ ಚಳಿ ಪ್ರಮಾಣವೂ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಮುಂದಿನ ದಿನಗಳಲ್ಲಿ ತಾಪಮಾನದಲ್ಲಿ ಗಮನಾರ್ಹವಾಗಿ ಕುಸಿತ ಆಗಲಿದೆ ಅಂತಲೂ ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಕೆಲವು ದಿನಗಳವರೆಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾದ ಪರಿಣಾಮ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಅದರಲ್ಲೂ ತಮಿಳುನಾಡಿನ ಚೆನ್ನೈ ಭಾಗದಲ್ಲೇ ಹೆಚ್ಚು ಮಳೆಯಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಅಲ್ಲದೆ, ಭಾರೀ ಮಳೆ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನ ಹಲವೆಡೆ ಶಾಲೆಗಳಿಗೆ ರಜೆಯನ್ನು ಸಹ ಘೋಷಣೆ ಮಾಡಲಾಗಿತ್ತು. ಇದೀಗ ಸದ್ಯ ಮಳೆರಾಯನ ಆರ್ಭಟ ತಗ್ಗಿದ್ದು, ಅಲ್ಲಲ್ಲಿ ಮಾತ್ರ ಮಳೆಯಾಗುತ್ತಿದೆ. ಜೊತೆಗೆ ಬಹುತೇಕ ಕಡೆಗಳಲ್ಲಿ ದಟ್ಟ ಮಂಜು ಸಹಿತ ಭೀಕರ ಚಳಿ ಮುಂದುವರೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+