IMD Weather: ಕರ್ನಾಟಕ, ದೇಹಲಿ ಸೇರಿ ಈ ಭಾಗಗಳಲ್ಲಿ ಅಧಿಕ ಚಳಿ, ಶೀತ ಅಲೆ ಮುನ್ಸೂಚನೆ
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಚಳಿಗಾಲ ತೀವ್ರಗೊಂಡಿದೆ. ಉತ್ತರ ಮತ್ತು ಪೂರ್ವ ಭಾರತದ ಹಲವು ರಾಜ್ಯಗಳಲ್ಲಿ ಶೀತ ಅಲೆಗೆ ಜನರು ನಡುಗಿದ್ದಾರೆ. ಕಡಿಮೆ ತಾಪಮಾನದ ದಿನಗಳು ಇನ್ನೂ ಐದು ದಿನ ಮುಂದುವರಿಯುವ ಸಾಧ್ಯತೆ ಇದೆ. ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹತ್ವದ ಮುನ್ಸೂಚನೆ ನೀಡಿದೆ.
ಸಮುದ್ರದ ಮೇಲ್ಭಾಗದಲ್ಲಿ ಒಂದಷ್ಟು ಬದಲಾವಣೆಗಳು, ಬಿರುಗಾಳಿ ವಾತಾವರಣ ನಿರ್ಮಾಣವಾಗಿವೆ. ಛತ್ತೀಸ್ಗಢ, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಂಜಾಬ್, ಜಾರ್ಖಂಡ್ ಮತ್ತು ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ಶೀತ ಅಲೆಗಳ ಪ್ರಭಾವ ಹೆಚ್ಚಾಗಿರಲಿದೆ. ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದ ಕೆಲ ಪ್ರತ್ಯೇಕ ಕಡೆಗಳಲ್ಲಿ ತೀವ್ರ ಚಳಿ ಕಂಡು ಬರುವ ನಿರೀಕ್ಷೆ ಇದೆ. ಇದರಿಂದ ದಿನದ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನೂ ಅಸ್ಸಾಂ ಮತ್ತು ಮೇಘಾಲಯ, ಬಿಹಾರ, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಪೂರ್ವ ಮಧ್ಯಪ್ರದೇಶ, ನಾಗಾಲ್ಯಾಂಡ್, ಒಡಿಶಾ ಹಾಗೂ ಉಪ ಹಿಮಾಲಯ ವ್ಯಾಪ್ತಿಯಲ್ಲಿ ದಟ್ಟ ಮಂಜಿನ ವಾತಾವರಣ ಉಂಟಾಗಲಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿ, ಹಿಮಾಚಲ ಪ್ರದೇಶ, ಜಮ್ಮು–ಕಾಶ್ಮೀರ, ಪಂಜಾಬ್ ಹಾಗೂ ಉತ್ತರಾಖಂಡ ರಾಜ್ಯದಲ್ಲಿ ಮುಂದಿನ ಒಂದು ವಾರ ದಟ್ಟ ಮಂಜು ಬೀಳಲಿದೆ. ಅದರ ಪರಿಣಾಮ ರೈಲು ಹಾಗೂ ವಿಮಾನಗಳ ಸಂಚಾರದ ಮೇಲೆ ಆಗುವ ಸಂಭವವಿದೆ.
ಕೊಮೊರಿನ್ ಪ್ರದೇಶ ಮತ್ತು ಮನ್ನಾರ್ ಕೊಲ್ಲಿಯ ಪಕ್ಕದ ಸಮುದ್ರ ಪ್ರದೇಶಗಳಲ್ಲಿ ಗಂಟೆಗೆ 45 ರಿಂದ 55 ಕಿಲೋಮೀಟರ್ ವೇಗದಲ್ಲಿ, ಕೆಲವೆಡೆ 65 ಕಿಲೋಮೀಟರ್ ವೇಗದವರೆಗೆ ಗಾಳಿ ಬೀಸುವ ಸಾಧ್ಯತೆ ಇದೆ. ಸದ್ಯ ಮೀನುಗಾರರಿಗೆ ಯಾವುದೇ ವಿಶೇಷ ಎಚ್ಚರಿಕೆ ನೀಡಿಲ್ಲ ಎಂದು ತಿಳಿಸಲಾಗಿದೆ.
ಚಂಡಮಾರುತ ಪರಿಚಲನೆ ನಿರ್ಮಾಣ
ಈಶಾನ್ಯ ಭಾರತದ ಭೂಮಿ ಮೇಲ್ಮೈನಲ್ಲಿ ಸುಳಿಗಾಳಿ ಎದ್ದಿದೆ. ಅದು ಸಮುದ್ರ ಮಟ್ಟದಿಂದ ಸರಾಸರಿ 12.6 ಕಿಲೋಮೀಟರ್ ಎತ್ತರದಲ್ಲಿ ನೆಲೆಗೊಂಡಿದೆ. ಮುಂದಿನ 24 ಗಂಟೆಗಳಲ್ಲಿ ಅದು ಈಶಾನ್ಯ ಭಾರತದ ಮೇಲೆ ಮುಂದುವರಿಯುತ್ತದೆ. ಜೊತೆಗೆ ದಕ್ಷಿಣ ಕೇರಳಕ್ಕೆ ಹೊಂದಿಕೊಂಡಿರುವ ಆಗ್ನೇಯ ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸಮುದ್ರ ಮಟ್ಟದಿಂದ ಸರಾಸರಿ 1.5 ಕಿಲೋಮೀಟರ್ ವರೆಗೆ ವಾಯು ಚಂಡಮಾರುತ ಪರಿಚಲನೆ ಮುಂದುವರಿದಿದೆ. ಇದು ಸದ್ಯಕ್ಕೆ ಅಷ್ಟೇನು ತಿವ್ರಗೊಳ್ಳುವ ಲಕ್ಷಣಗಳು ಇಲ್ಲ ಎನ್ನಲಾಗಿದೆ.
ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ
ಈ ಸಣ್ಣಪುಟ್ಟ ಹವಾಮಾನ ವೈಪರೀತ್ಯಗಳಿಂದ ಡಿಸೆಂಬರ್ 28ರ ವರೆಗೆ ಪಶ್ಚಿಮ ಹಿಮಾಲಯ, ತಮಿಳುನಾಡು, ಕೇರಳ, ಕರ್ನಾಟಕ ಹಾಗೂ ದ್ವೀಪ ಪ್ರದೇಶಗಳಲ್ಲಿ ಪ್ರತ್ಯೇಕ ಮಳೆ ಚಟುವಟಿಕೆ ಕಂಡುಬರುವ ಸಾಧ್ಯತೆ ಇದೆ. ಮಬ್ಬು ವಾತಾವರಣ ಜೊತೆಗೆ ಜೊತೆಗೆ ಹೆಚ್ಚಿನ ಚಳಿ ಅನುಭವವಾಗಲಿದೆ. ದಟ್ಟ ಮಂಜು ಸಹ ಬೀಳಲಿದೆ ಎಂದು ಹವಾಮಾನ ಇಲಾಖೆಯ ಗುರುವಾರದ ವರದಿ ತಿಳಿಸಿದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications