Cyclone Asani : ಅಂಡಮಾನ್ ಬಳಿಕ ಮ್ಯಾನ್ಮಾರ್ನತ್ತ ಅಸನಿ ಚಂಡಮಾರುತ: IMD
ನವದೆಹಲಿ, ಮಾರ್ಚ್ 21: ಅಂಡಮಾನ್ ದ್ವೀಪಗಳ ನಿವಾಸಿಗಳಿಗೆ ದೊಡ್ಡ ನೆಮ್ಮದಿ ಸುದ್ದಿಯನ್ನು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ನೀಡಿದ್ದಾರೆ. ಚಂಡಮಾರುತ ಅಸನಿ ಅಂಡಮಾನ್ ದ್ವೀಪದಲ್ಲಿ ಅಪ್ಪಳಿಸುವುದಿಲ್ಲ(Landfall), ಭಾರಿ ಹಾನಿಗೊಳಿಸುವ ಮುನ್ಸೂಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಂಡಮಾರುತವು ಅಂಡಮಾನ್ ದ್ವೀಪಗಳ ಉದ್ದಕ್ಕೂ ಸಾಗಿ, ಮ್ಯಾನ್ಮಾರ್ ಮತ್ತು ದಕ್ಷಿಣ ಬಾಂಗ್ಲಾದೇಶದ ಕರಾವಳಿಯ ಕಡೆಗೆ ಚಲಿಸುವ ನಿರೀಕ್ಷೆಯಿದೆ ಎಂದು ಮೊಹಾಪಾತ್ರ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಆದರೆ, ಚಂಡಮಾರುತ ಈಗಾಗಲೇ ತನ್ನ ಪ್ರಭಾವ ಬೀರಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿರುವ ಪ್ರಬಲ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದಲ್ಲಿ ಮಾರ್ಚ್ 24ರ ತನಕ ಮಳೆ ಸುರಿಯಲಿದೆ. ದಕ್ಷಿಣ ಅಂಡಮಾನ್ ದ್ವೀಪದಲ್ಲಿ ಸೋಮವಾರ ಭಾರಿ ಮಳೆ ನಿರೀಕ್ಷಿಸಬಹುದು ಎಂದು ಮೊಹಾಪಾತ್ರ ತಿಳಿಸಿದ್ದಾರೆ.
Depression over southeast Bay of Bengal and adjoining south Andaman Sea lay centered at 0830 hrs IST of today, about 110 km north-northwest of Car Nicobar (Nicobar Islands) .To intensify into a DD by 0530 hrs IST of 21st and into a cyclonic storm by 0530 hrs IST of 21st. pic.twitter.com/RQTn9qdx90
— India Meteorological Department (@Indiametdept) March 20, 2022
ಆಗ್ನೇಯ ಮತ್ತು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಉತ್ತರದ ಕಡೆಗೆ ಚಲಿಸಿದೆ. ಸೋಮವಾರ ಸಂಜೆ ವೇಳೆಗೆ ವಾಯುಭಾರ ಕುಸಿತವು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಗಳಿವೆ. ಈ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ: IMD ವಿಜ್ಞಾನಿ ಆರ್ಕೆ ಜೆನಮಣಿ ಹೇಳಿದ್ದಾರೆ.

ಅಂಡಮಾನ್ ಹಾಗೂ ನಿಕೋಬಾರ್ ದ್ವೀಪದಲ್ಲಿ ಸೋಮವಾರದಂದು ಭಾರಿ ಗಾಳಿ ಮಳೆ ಮುನ್ಸೂಚನೆ ಸಿಕ್ಕಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಅಂಡಮಾನ್ ನಿಕೋಬಾರ್ ದ್ವೀಪದ ಕೆಲ ಭಾಗಗಳಲ್ಲಿ ಪ್ರಭಾವ ಬೀರಲಿದ್ದು, ದೇಶದ ಇತರೆ ಪ್ರದೇಶಗಳಲ್ಲಿ ಹೆಚ್ಚಿನ ಪರಿಣಾಮ ಇರುವುದಿಲ್ಲ, ಆದರೆ, ನಾಲ್ಕೈದು ದಿನ ಗಾಳಿ ಮಳೆ ಇರಲಿದೆ.
ತಮಿಳುನಾಡು, ಆಂಧ್ರಪ್ರದೇಶ ಕರಾವಳಿ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ಇಳಿದಂತೆ ಎಚ್ಚರಿಕೆ ನೀಡಲಾಗಿದೆ. ಅಂಡಮಾನ್ ಸೇರಿದಂತೆ ಕರಾವಳಿ ಭಾಗದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ 150 ಸಿಬ್ಬಂದಿ ನಿಯೋಜಿಸಲಾಗಿದೆ. ಅಂಡಮಾನ್ ದ್ವೀಪದಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಮಾರ್ಚ್ 22ರ ವೇಳೆಗೆ ಮ್ಯಾನ್ಮಾರ್ ಹಾಗೂ ಬಾಂಗ್ಲಾದೇಶದ ಕಡೆಗೆ ಚಂಡಮಾರುತ ತೆರಳಿ ತನ್ನ ಪ್ರಭಾವ ತಗ್ಗಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications