ಡೈವೋರ್ಸ್: ಐತಿಹಾಸಿಕ ತೀರ್ಪು ನೀಡಿದ ಸರ್ವೋಚ್ಚ ನ್ಯಾಯಾಲಯ
ನವದೆಹಲಿ, ಅ 11: ಆಂಧ್ರಪ್ರದೇಶದ ದಂಪತಿಗಳ ವಿವಾಹ ವಿಚ್ಚೇದನ ಅರ್ಜಿಯನ್ನು ವಿಲೇವಾರಿ ಮಾಡುವ ವೇಳೆ, ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪೊಂದನ್ನು ನೀಡಿದೆ.
"ದಂಪತಿಗಳ ನಡುವೆ ಕಾರ್ಯಸಾಧುವಲ್ಲದ, ಸರಿಪಡಿಸಲಾಗದ ಮತ್ತು ಭಾವನಾತ್ಮಕ ಸಂಬಂಧಗಳು ಸತ್ತು ಹೋದಂತಹ ಸಂದರ್ಭದಲ್ಲಿ ಡೈವೋರ್ಸ್ ನೀಡಬಹುದು" ಎನ್ನುವ ರೂಲಿಂಗ್ ಅನ್ನು ಸುಪ್ರೀಂಕೋರ್ಟ್ ನೀಡಿದೆ.
"ಹಿಂದೂ ವಿವಾಹ ಕಾಯ್ದೆಯ ಪ್ರಕಾರ, ಸರಿಪಡಿಸಲಾಗದ ಸಂಬಂಧ ಡೈವೋರ್ಸಿಗೆ ಕಾರಣವಾಗುವುದಿಲ್ಲ" ಎನ್ನುವ ತೀರ್ಪನ್ನು ಸುಪ್ರೀಂಕೋರ್ಟ್ ಈ ಹಿಂದೆ ನೀಡಿತ್ತು.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಆರ್ ಷಾ ಅವರ ನ್ಯಾಯಪೀಠ, "ಭಾರತದ ಸಂವಿಧಾನದ 142 ಆರ್ಟಿಕಲ್ ಅಡಿಯಲ್ಲಿ, ನಮ್ಮ ಅಧಿಕಾರವನ್ನು ಚಲಾಯಿಸಲು ಇದು ಸೂಕ್ತ ಪ್ರಕರಣವಾಗಿದೆ" ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
1993ರಲ್ಲಿ ಮದುವೆಯಾದ ಆಂಧ್ರಪ್ರದೇಶ ಮೂಲದ ದಂಪತಿಗಳ ನಡುವೆ ಆರಂಭದಲ್ಲೇ ಭಿನ್ನಾಭಿಪ್ರಾಯ ಉಂಟಾಗಿತ್ತು. ಪತಿ ತನ್ನ ಮೇಲೆ ದೌರ್ಜನ್ಯ ನಡೆಸುತ್ತಾನೆ ಎಂದು ಪತ್ನಿ ತವರು ಮನೆಯಲ್ಲಿ ನೆಲೆಸಿದ್ದಳು.
1999ರಲ್ಲಿ ಹೈದರಾಬಾದ್ನ ಕುಟುಂಬ ನ್ಯಾಯಾಲಯಕ್ಕೆ ವಿಚ್ಚೇದನ ಅರ್ಜಿಯನ್ನು ಪತಿ ಸಲ್ಲಿಸಿದ್ದರು. ಆದರೆ, ಪತಿಯಿಂದ ಡೈವೋರ್ಸ್ ಪಡೆಯಲು ಪತ್ನಿ ನಿರಾಕರಿಸಿದ್ದರಿಂದ, ನ್ಯಾಯಾಲಯ ಡೈವೋರ್ಸ್ ಗೆ ಒಪ್ಪಿಗೆ ನೀಡಲು ನಿರಾಕರಿಸಿತ್ತು.
ಇದನ್ನು ಪ್ರಶ್ನಿಸಿ ಆಂಧ್ರಪ್ರದೇಶದ ಹೈಕೋರ್ಟ್ ನಲ್ಲಿ ಪತಿ ಮನವಿಯನ್ನು ಸಲ್ಲಿಸಿದ್ದ. ಹೈಕೋರ್ಟ್, ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದ್ದರಿಂದ, ಪತಿ, ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
"22ವರ್ಷಗಳಿಂದ ದಂಪತಿಗಳು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಇವರಿಬ್ಬರ ನಡುವೆ, ವೈವಾಹಿಕ ಸಂಬಂಧ ಸರಿಪಡಿಸಲಾಗದ ಹಂತಕ್ಕೆ ಹೋಗಿರುವುದರಿಂದ, ಡೈವೋರ್ಸ್ ನೀಡಲು ಒಪ್ಪಿಗೆ ನೀಡಲಾಗಿದೆ" ಎಂದು ಎರಡು ದಶಕಗಳ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ವಿಲೇವಾರಿ ಮಾಡಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications