ಮದುವೆ ನಿರಾಕರಿಸಿದ್ದಕ್ಕೆ ಯುವತಿಯ ಅತ್ಯಾಚಾರ ಬರ್ಬರ ಕೊಲೆ
ಯುವತಿಯನ್ನು ಹತ್ಯೆಗೈಯಲು ಮೂಲಕ ಕಾರಣ ಆಕೆ ಯುವಕನೊಂದಿಗೆ ಮದುವೆ ನಿರಾಕರಿಸಿದ್ದು. ಮದುವೆಯಾಗಲೇಬೇಕೆಂದು ದುಂಬಾಲು ಬಿದ್ದಿದ್ದ ಯುವಕ ಆಕೆಯ ಮನೆಗೆ ಬಂದಾಗ ಆತನ ಕಪಾಳಕ್ಕೆ ಯುವತಿ ಬಿಗಿದಿದ್ದಳು.
ಹರ್ಯಾಣ, ಮೇ 13: 2012 ರ ಡಿಸೆಂಬರ್ 16 ರಂದು ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚರ ಪ್ರಕರಣಕ್ಕಿಂತ ಘೋರ ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ಹರ್ಯಾಣದ ರೋಹ್ಟಕ್ ನಲ್ಲಿ ನಡೆದಿದೆ.
ಏಳು ಜನ ಕಾಮುಕರ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅತ್ಯಾಚಾರದ ನಂತರ ಬದುಕಿದ್ದ ಸಂತ್ರಸ್ಥೆಯ ತಲೆಯ ಮೇಲೆ ವಿಕೃತ ಅತ್ಯಾಚಾರಿಗಳು ವಾಹನ ಚಲಾಯಿಸಿದ್ದಾರೆ ಮಾಹಿತಿ ಲಭ್ಯವಾಗಿದೆ.[ಈ ಮೃಗಗಳು ಮಾಡಿದ್ದು ಕ್ಷಮಿಸಲು ಅರ್ಹವಲ್ಲದ ಅಪರಾಧ, ಬದುಕಲು ಅರ್ಹರಲ್ಲ!]
ಯುವತಿಯನ್ನು ಹತ್ಯೆಗೈಯಲು ಮೂಲಕ ಕಾರಣ ಆಕೆ ಯುವಕನೊಂದಿಗೆ ಮದುವೆ ನಿರಾಕರಿಸಿದ್ದು. ಮದುವೆಯಾಗಲೇಬೇಕೆಂದು ದುಂಬಾಲು ಬಿದ್ದಿದ್ದ ಯುವಕ ಆಕೆಯ ಮನೆಗೆ ಬಂದಾಗ ಆತನ ಕಪಾಳಕ್ಕೆ ಯುವತಿ ಬಿಗಿದಿದ್ದಳು. ಸೇಡು ತೀರಿಸಿಕೊಳ್ಳಲು ತಹತಹಿಸುತ್ತಿದ್ದ ಯುವಕ, ಆಕೆ ಕೆಲಸ ಮಾಡುತ್ತಿದ್ದ ಫ್ಯಾಕ್ಟರಿ ಗೇಟಿನ ಬಳಿಯಿಂದ ಅಪಹರಿಸಿ, ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆಗೈದಿದ್ದಾರೆ.

ಒಟ್ಟು ಏಳು ಜನ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪ್ರಥಮ ಮಾಹಿತಿಯಿಂದ ತಿಳಿದುಬಂದಿದೆ. ನಂತರ ಆಕೆಯ ದೇಹವನ್ನು ಚೂಪಾದ ಆಯುಧಗಳಿಂದ ಚುಚ್ಚಿದ್ದಾರೆ. ಸಾಲದೆಂಬಂತೆ, ಆಕೆಯ ತಲೆ ಮೇಲೆ ವಾಹನ ಹಾಯಿಸಿ ತಲೆಬುರುಡೆ ಒಡೆದುಹಾಕಿದ್ದಾರೆ.
ಅತ್ಯಾಚಾರಿಗಳ ಬಂಧನಕ್ಕೆ ರೋಹ್ಟಕ್ ಪೊಲೀಸರು ಬಲೆ ಬೀಸಿದ್ದಾರೆ. ಹರ್ಯಾಣದಲ್ಲಿ ಈ ಹೇಯ ಕೃತ್ಯದ ವಿರುದ್ಧ ಭಾರೀ ಪ್ರತಿಭಟನೆ ನಡೆಯುತ್ತಿದೆ. ಭಾರತದಲ್ಲಿ ಹುಟ್ಟಿದ್ದು ನಮಗೆ ಹೆಮ್ಮೆ, ಆದರೆ, ಭಾರತದಲ್ಲಿ ಹೆಣ್ಣಾಗಿ ಹುಟ್ಟಿದ್ದು ನಿಜಕ್ಕೂ ಭಯಾಕನ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ನಿರ್ಭಯಾ ಹಂತಕರಿಗೇನೋ ಗಲ್ಲಾಯಿತು. ಆದರೆ, ಭಾರತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಎಳ್ಳಷ್ಟೂ ಕಡಿಮೆಯಾಗಿಲ್ಲ. ಈ ಕೃತ್ಯ ಎಸಗಿದವರನ್ನು ಗಲ್ಲಿಗೇರಿಸಬೇಕೆಂದು ಯುವತಿಯ ಪೋಷಕರು ಆಗ್ರಹಿಸುತ್ತಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications