INDIA: ಚುನಾವಣೆ ಹೊತ್ತಲ್ಲೇ 'ಇಂಡಿಯಾ' ಮೈತ್ರಿಯಲ್ಲಿ ಕಿತ್ತಾಟ: ಒಮರ್ ಅಬ್ದುಲ್ಲಾ
ಬೆಂಗಳೂರು, ಅಕ್ಟೋಬರ್ 30: ಬಿಜೆಪಿಯನ್ನು ದೇಶದ ಅಧಿಕಾರ ಚುಕ್ಕಾಣೆಯಿಂದ ದೂರ ಇಡುವ ಸಂಬಂಧ ಕೇಂದ್ರ ವಿರೋಧ ಪಕ್ಷಗಳು ಎಲ್ಲವು ಒಟ್ಟಾಗಿ INDIA ಮೈತ್ರಿಕೂಟ ರಚಿಸಿದ್ದವು. ಇದೀಗ ಮೈತ್ರಿಯ ಪಕ್ಷಗಳು ಪರಸ್ಪರ ವಿರುದ್ಧ ನಿರ್ಧಾರ ಕಗೊಳ್ಳುವ ಮೂಲಕ ಮೈತ್ರಿಯೊಳಗೆ ಎಲ್ಲವು ಸರಿ ಇಲ್ಲ ಎಂಬುದನ್ನು ಸಾಬೀತು ಮಾಡಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಅವರು ಇಂಡಿಯಾ ಮೈತ್ರಿಕೂಟದೊಳಗಿನ ಆಂತರಿಕ ಭಿನ್ನಾಪ್ರಾಯ ಎದ್ದಿದೆ. ಮೈತ್ರಿಕೂಟದಲ್ಲಿ ಎಲ್ಲವೂ ಸರಿ ಇಲ್ಲ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ರಚನೆಯಾಗಿರುವ ಮೈತ್ರಿಕೂಟದಲ್ಲಿನ ವಿವಿಧ ಪಕ್ಷಗಳಲ್ಲಿ ಪಂಚ ರಾಜ್ಯ ಚುನಾವಣೆ ಎದುರಿಸುವಲ್ಲಿ ಹೊಂದಾಣಿಕೆ ಕೊರತೆ ಕಂಡು ಬಂದಿವೆ. ಲೋಕಸಭಾ ಚುನಾವಣೆಗೂ ಮೊದಲೇ ಹೀಗಾದರೆ ಹೇಗೆ? ಎಂಬ ಪ್ರಶ್ನೆ ಸಹಜವಾಗಿಯೇ ಮೂಡಿದೆ.
ಪಕ್ಷಗಳ ಮಧ್ಯೆ ಒಡಕು
ಮಧ್ಯಪ್ರದೇಶದ ವಿಧಾನಸಾ ಚುನಾವಣೆ ನಿಮಿತ್ತ ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ಭಿನ್ನ ನಿಲುವು ಹೊಂದಿವೆ. ಇದರಿಂದಾಗಿ ಉಭಯ ಪಕ್ಷಗಳ ಮಧ್ಯೆ ಒಡಕು ಉಂಟಾಗಿದೆ. ಆಂತರಿಕ ಕಚ್ಚಾಟಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷವು ಕಿತ್ತಾಡಿಕೊಂಡಿವೆ. ಅಲ್ಲದೇ ಉತ್ತರ ಪ್ರದೇಶದ ಚುನಾವಣೆಯಲ್ಲಿ ಒಟ್ಟಾಗಿ ಅಲ್ಲದೇ ಪ್ರತ್ಯೇಕವಾಗಿ ಸ್ಪರ್ಧಿಸಲು ಮನಸ್ಸು ಮಾಡಿವೆ. ಇದು ಮೈತ್ರಿ ನೀತಿಗೆ ವಿರುದ್ಧವಾಗಿಲ್ಲದೇ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕೂಟದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ. ಇದೆಲ್ಲ ಗಮನಿಸಿ ಮತ್ತೆ ಮತ್ರಿ ಪಕ್ಷಗಳ ಮುಖಂಡರು ಸಭೆ ಕರೆದು ಭಿನ್ನಮತ ಶಮನ ಮಾಡಬೇಕಿದೆ ಎಂದರು.
ಮೈತ್ರಿಕೂಟದಲ್ಲಿ ಚುನಾವಣೆ ಹೊತ್ತಿನಲ್ಲಿ ಇಂತಹ ಆಂತರಿಕ ಭಿನ್ನಾಭಿಪ್ರಾಯಗಳು ಇರಬಾರದಿತ್ತು. ಆದರೆ ವಿಧಾನಸಭಾ ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಾರ್ಟಿಯಲ್ಲಿ ಜಗಳಗಳನ್ನು ನಾವು ಕಾಣುತ್ತಿದ್ದೇವೆ. ಈ ರೀತಿಯ ಬೆಳವಣಿಗೆಗಳಿಂದ ಬಹುಶಃ ಮೈತ್ರಿಕೂಟಕ್ಕೆ ಒಳಿತಾಗಲ್ಲ. ಚುನಾವಣೆ ಬಳಿಕ ಮತ್ತೆ ನಾಯಕ ಸೇರಬೇಕಿದೆ ಎಂದು ತಿಳಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications