10 ತಿಂಗಳಲ್ಲಿ 921 ಎನ್ಕೌಂಟರ್: ರೌಡಿಗಳ ಪಾಲಿಗೆ ಯೋಗಿ ಆದಿತ್ಯನಾಥ್ ಟೆರರ್
ಲಕ್ನೋ, ಜ 11: ರೌಡಿ ಶೀಟರುಗಳು ಶರಣಾಗತಿಯಾಗಲು ಒಪ್ಪದಿದ್ದರೆ ಮುಲಾಜಿಲ್ಲದೇ ಎನ್ಕೌಂಟರ್ ಮಾಡಲು ಆದೇಶ ನೀಡಿದ್ದೇನೆಂದು ಬಹಿರಂಗವಾಗಿಯೇ ಹೇಳಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪೊಲೀಸರಿಗೆ ಫುಲ್ ಪವರ್ ನೀಡಿದ್ದಾರೆ.
ಮಂಗಳವಾರ (ಜ 10) ಆಜಾಂಘರ್ ನಲ್ಲಿ ಚನ್ನು ಸರ್ಕಾರ್ ಎನ್ನುವ ರೌಡಿ ಉತ್ತರಪ್ರದೇಶ ಪೊಲೀಸರ ಎನ್ಕೌಂಟರಿಗೆ ಬಲಿಯಾಗಿದ್ದಾನೆ. ಕಳೆದ ಹತ್ತು ತಿಂಗಳಲ್ಲಿ ಎನ್ಕೌಂಟರಿಗೆ ಬಲಿಯಾದ ಮೂವತ್ತನೇ ರೌಡಿ ಶೀಟರ್ ಈತ.
ಕಳೆದ ಹತ್ತು ತಿಂಗಳ ಅವಧಿಯಲ್ಲಿ ಉತ್ತರ ಪ್ರದೇಶ ಪೊಲೀಸರು 921 ಎನ್ಕೌಂಟರ್ ನಡೆಸಿದ್ದು ಮೂವತ್ತು ರೌಡಿಗಳು ಬಲಿಯಾಗಿದ್ದಾರೆ. ರೌಡಿಗಳ ಜೊತೆಗಿನ ಹೋರಾಟದಲ್ಲಿ ಮೂವರು ಪೊಲೀಸರು ಹತರಾಗಿದ್ದಾರೆ. ದಿನದಿಂದ ದಿನಕ್ಕೆ ರೌಡಿಗಳ ಪಾಲಿಗೆ, ಮುಖ್ಯಮಂತ್ರಿ ಯೋಗಿ 'ಸಿಂಹಸ್ವಪ್ನ'ರಾಗುತ್ತಿದ್ದಾರೆ ಎನ್ನುತ್ತವೆ ಕೆಲವೊಂದು ವರದಿಗಳು.

22.11.2017ರಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಉತ್ತರಪ್ರದೇಶ ಸರಕಾರಕ್ಕೆ ನೊಟೀಸ್ ಜಾರಿ ಮಾಡಿದ್ದು, ಆರು ತಿಂಗಳಿನಿಂದ ಈಚೆಗೆ ನಡೆದ 19 ಎನ್ಕೌಂಟರುಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿತ್ತು.
ನೊಟೀಸ್ ಜಾರಿಯಾದ ಮೇಲೂ, ರೌಡಿಗಳ ಮೇಲೆ ಪೊಲೀಸರ ದಾಳಿ ಮುಂದುವರಿದಿದ್ದು, ಎಂಟು ಎನ್ಕೌಂಟರುಗಳನ್ನು ಮಾಡಿ, ರೌಡಿಗಳ ಹೆಡೆಮುರಿ ಕಟ್ಟುವ ಕೆಲಸವನ್ನು ಮುಂದುವರಿಸಿದ್ದಾರೆ.
ಆದರೆ, ಮಾನವ ಹಕ್ಕುಗಳ ಆಯೋಗದ ನೊಟೀಸ್ ಇನ್ನೂ ನಮಗೆ ತಲುಪಲಿಲ್ಲ. ಅದು ತಲುಪಿದ ಮೇಲೆ ಅದಕ್ಕೆ ಉತ್ತರಿಸಲು ನಮಗೆ ಆರು ವಾರಗಳ ಕಾಲಾವಕಾಶವಿದೆ ಎಂದು ಉತ್ತರಪ್ರದೇಶ ಸರಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಮಾರ್ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications