ಮೇ ನಲ್ಲಿ ಜನಸಾಮಾನ್ಯರ ಜೇಬಿಗೆ ಕತ್ತರಿ: ಕೆಲವು ಬ್ಯಾಂಕ್ಗಳ ನಿಯಮದಲ್ಲಿ ಬದಲಾವಣೆ
ಪ್ರತಿ ತಿಂಗಳ ಮೊದಲನೇ ದಿನದಂದು ಮಾರುಕಟ್ಟೆಯಲ್ಲಿ ಕೆಲವು ಬದಲಾವಣೆಗಳು ಆಗುತ್ತವೆ. ಇದರಿಂದ ಜನ ಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತದೆ. ಏಪ್ರಿಲ್ ತಿಂಗಳು ಮುಗಿಯುವ ಹಂತಕ್ಕೆ ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಹೊಸ ತಿಂಗಳು ಆರಂಭವಾಗುತ್ತದೆ. ಮೇ ತಿಂಗಳ ಮೊದಲು ಅನೇಕ ದೊಡ್ಡ ಬದಲಾವಣೆ ಕಾಣಿಸಿಕೊಳ್ಳಬಹುದು. ಈ ಬದಲಾವಣೆಗಳು ಜನಸಾಮಾನ್ಯರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ.
ಮೇ ತಿಂಗಳಿನಲ್ಲಿ ಯಾವೆಲ್ಲ ಬೆಲೆಗಳು ಸಂಭವಿಸಬಹುದು ಎಂಬ ಬಗ್ಗೆ ತಿಳಿದುಕೊಳ್ಳುವುದು ಒಳ್ಳೆಯದು. ಎಲ್ಪಿಜಿ ಸಿಲಿಂಡರ್ಗಳ ಬೆಲೆಗಳಿಂದ ಹಿಡಿದು ಬ್ಯಾಂಕ್ಗಳ ಉಳಿತಾಯ ಖಾತೆಗಳಿಗೆ ಸಂಬಂಧಿಸಿದಂತೆ ಅನೇಕ ಬದಲಾವಣೆಗಳನ್ನು ಕಾಣಬಹುದು. ಯೆಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ಗಳ ಉಳಿತಾಯ ಖಾತೆಯಲ್ಲಿ, ಗ್ರಾಹಕರು ಮೇ 1 ರಿಂದ ಸೇವೆಗಾಗಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ಈ ಬ್ಯಾಂಕುಗಳು ತಮ್ಮ ಉಳಿತಾಯ ಖಾತೆಗಳಲ್ಲಿ ಹಲವು ಶುಲ್ಕಗಳನ್ನು ಹೆಚ್ಚಿಸಿವೆ.

ಯೆಸ್ ಬ್ಯಾಂಕ್ ಉಳಿತಾಯ ಖಾತೆಯ ನಿಯಮದಲ್ಲಿ ಬದಲಾವಣೆ
ಯೆಸ್ ಬ್ಯಾಂಕ್ ವೆಬ್ಸೈಟ್ ಪ್ರಕಾರ, ಉಳಿತಾಯ ಖಾತೆಗಳ ವಿವಿಧ ರೂಪಾಂತರಗಳ ಕನಿಷ್ಠ ಸರಾಸರಿ ಬ್ಯಾಲೆನ್ಸ್ ಅನ್ನು ಬದಲಾಯಿಸಲಾಗಿದೆ. ಖಾತೆ ಪ್ರೊ ಮ್ಯಾಕ್ಸ್ನಲ್ಲಿ ಕನಿಷ್ಠ ಸರಾಸರಿ ಬ್ಯಾಲೆನ್ಸ್ 50 ಸಾವಿರ ರೂ. ಗರಿಷ್ಠ ಶುಲ್ಕಕ್ಕೆ 1,000 ರೂ.ಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಇನ್ನು ಸೇವಿಂಗ್ ಅಕೌಂಟ್ ಪ್ರೊ ಪ್ಲಸ್, ಯೆಸ್ ಎಸೆನ್ಸ್ ಎಸ್ ಎ, ಯೆಸ್ ರೆಸ್ಪೆಕ್ಟ್ ಎಸ್ ಎಗಳಲ್ಲಿ ಕನಿಷ್ಠ ಬ್ಯಾಲೆನ್ಸ್ 25 ಸಾವಿರ ರೂ. ಈ ಖಾತೆಗೆ ಶುಲ್ಕಗಳ ಮಿತಿಯನ್ನು ರೂ 750 ಗೆ ನಿಗದಿಪಡಿಸಲಾಗಿದೆ.
ಐಸಿಐಸಿಐ ಬ್ಯಾಂಕ್ಗಳಲ್ಲೂ ಈ ನಿಯಮ ಬದಲು
ಐಸಿಐಸಿಐ ಬ್ಯಾಂಕ್ ತನ್ನ ಉಳಿತಾಯ ಖಾತೆಗೆ ಸಂಬಂಧಿಸಿದ ಸೇವಾ ಶುಲ್ಕದ ನಿಯಮಗಳನ್ನು ಸಹ ಬದಲಾಯಿಸಿದೆ. ಈಗ ಡೆಬಿಟ್ ಕಾರ್ಡ್ಗಾಗಿ ಗ್ರಾಹಕರು ನಗರ ಪ್ರದೇಶದಲ್ಲಿ 200 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 99 ರೂ. ವಾರ್ಷಿಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇದರೊಂದಿಗೆ, ಈಗ ನೀವು ಬ್ಯಾಂಕಿನ 25 ಪುಟಗಳ ಚೆಕ್ ಬುಕ್ಗೆ ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ದೇಶದ ಅತಿದೊಡ್ಡ ಪ್ರೈವೇಟ್ ಸೆಕ್ಟರ್ ಬ್ಯಾಂಕ್ ಆಗಿರುವ ಎಚ್ಡಿಎಫ್ಸಿ ಬ್ಯಾಂಕ್, ಹಿರಿಯ ನಾಗರಿಕರಿಗೆ ನೀಡಲಾಗುವ ವಿಶೇಷ ಎಫ್ಡಿ ಯೋಜನೆಗೆ ಗಡುವನ್ನು ಮೇ 10 ರವರೆಗೆ ವಿಸ್ತರಿಸಿದೆ. ಈ ಯೋಜನೆಯಡಿ, ಬ್ಯಾಂಕ್ ಹಿರಿಯ ನಾಗರಿಕರಿಗೆ ಶೇಕಡಾ 0.75 ಹೆಚ್ಚಿನ ಬಡ್ಡಿದರವನ್ನು ನೀಡುತ್ತಿದೆ.
ಸಿಲಿಂಡರ್ ಬೆಲೆ ನಿರ್ಧಾರ
ಪ್ರತಿ ತಿಂಗಳ ಆರಂಭದಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಳಿತಗಳು ಆಗುತ್ತವೆ. ತೈಲ ಮಾರುಕಟ್ಟೆಯ ಕಂಪನಿಗಳು ಇದೇ ದಿನ ಬೆಲೆಯನ್ನು ನಿರ್ಧರಿಸುತ್ತವೆ. 14 ಕೆಜಿ ದೇಶೀಯ ಮತ್ತು 19 ಕೆಜಿ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು ಕಂಪನಿಗಳು ನಿಗದಿಪಡಿಸುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಮೇ ಮೊದಲನೇ ತಾರೀಖಿನಂದು ಗ್ಯಾಸ್ ಬೆಲೆಯಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications