ಲೋಕಸಭೆಯಲ್ಲಿ ಇಂದು; ಚಳಿಗಾಲದ ಅಧಿವೇಶನ ಇಂದು ಅಂತ್ಯ
ನವದೆಹಲಿ, ಡಿಸೆಂಬರ್ 22; ಸಂಸತ್ ಚಳಿಗಾಲದ ಅಧಿವೇಶ ನವೆಂಬರ್ 29ರಂದು ಆರಂಭವಾಗಿದೆ. ನಿಗದಿಯಂತೆ ಡಿಸೆಂಬರ್ 23ರ ತನಕ ಅಧಿವೇಶನ ನಡೆಯಬೇಕಿತ್ತು. ಆದರೆ ಒಂದು ದಿನ ಮುಂಚಿತವಾಗಿ ಡಿಸೆಂಬರ್ 22ರ ಬುಧವಾರವೇ ಅಧಿವೇಶನ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ.
ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸದಸ್ಯ ಡೆರೆಕ್ ಒಬ್ರಿಯನ್ರನ್ನು ಈ ಚಳಿಗಾಲದ ಅಧಿವೇಶನದ ಉಳಿದ ರಾಜ್ಯ ಸಭೆ ಕಲಾಪದಲ್ಲಿ ಭಾಗವಹಿಸದಂತೆ ಅಮಾನತು ಮಾಡಲಾಗಿದೆ.
12 ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಿದ ವಿರುದ್ಧ ರಾಜ್ಯಸಭೆಯಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದವು. ಆಗ ಡೆರೆಕ್ ಒಬ್ರಿಯನ್ ನಿಯಮಗಳ ಪುಸ್ತಕವನ್ನು ಸಭಾಪತಿಗಳ ಆಸದತ್ತ ಎಸೆದರು ಮತ್ತು ಕಲಾಪದಿಂದ ಹೊರ ನಡೆದರು.

ಲೋಕಸಭೆಯಲ್ಲಿ ಇಂದು ಹವಾಮಾನ ಬದಲಾವಣೆ ಬಗ್ಗೆ ಚರ್ಚೆಗಳು ಮುಂದುವರೆಯಲಿವೆ. ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ವಿಚಾರ ಮಂಡಿಸಲಿದ್ದಾರೆ. ವಿಪಕ್ಷಗಳ ಸದಸ್ಯರು ಈ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ರಾಜ್ಯಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾತಾಮನ್ ಲೋಕಸಭೆಯಲ್ಲಿ ಅಂಗೀಕಾರಗೊಂಡ 2021-2022ರ ಹಣಕಾಸು ವರ್ಷದಲ್ಲಿ ಕೆಲವು ಹೆಚ್ಚಿನ ಮೊತ್ತಗಳ ಪಾವತಿ ಮತ್ತು ವಿನಿಯೋಗವನ್ನು ಅಧಿಕೃತಗೊಳಿಸುವ ಮಸೂದೆಯನ್ನು ಮಂಡಿಸಲಿದ್ದಾರೆ.
ನವೆಂಬರ್ 29ರಿಂದ ಡಿಸೆಂಬರ್ 23ರ ತನಕ ಸಂಸತ್ನ ಉಭಯ ಸದನಗಳ ಕಲಾಪವನ್ನು ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಈ ಕುರಿತು ಅಧಿಸೂಚನೆ ಸಹ ಪ್ರಕಟವಾಗಿತ್ತು. ಆದರೆ ರಾಜ್ಯಸಭೆಯಲ್ಲಿ 12 ಸದಸ್ಯರ ಅಮಾನತು ವಿಚಾರದಲ್ಲಿ ಗದ್ದಲ ನಡೆಯುತ್ತಿದೆ. ಆದ್ದರಿಂದ ಒಂದು ದಿನ ಮುಂಚಿತವಾಗಿಯೇ ಕಲಾಪ ಅಂತ್ಯಗೊಳ್ಳುವ ನಿರೀಕ್ಷೆ ಇದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications