ದೇಶಾದ್ಯಂತ 69ನೇ ಸ್ವಾತಂತ್ರ್ಯ ದಿನದ ಸಂಭ್ರಮ ಹೇಗಿತ್ತು?
ನವದೆಹಲಿ, ಆ.15 : ಸಂಭ್ರಮ, ಸಡಗರ, ಅಭೂತಪೂರ್ವ ಭದ್ರತೆಯ ನಡುವೆ ದೇಶಾದ್ಯಂತ ಶನಿವಾರ 69ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ನವದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದರು.
ಮಕ್ಕಳು, ಸೈನಿಕರು, ಆಟೋ ಚಾಲಕರು, ನಾಗರಿಕರು ಸೇರಿಂದತೆ ಎಲ್ಲರೂ ಸ್ವಾತಂತ್ರ್ಯನ ದಿನವನ್ನು ಆಚರಣೆ ಮಾಡಿದರು. ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಚ್ಛ ಭಾರತದ ಕಲ್ಪನೆಯನ್ನು ಪುನರುಚ್ಚಾರ ಮಾಡಿದರು.[ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಹೈಲೆಟ್ಸ್]
ಎಲ್ಲೆಲ್ಲಿಯೂ ದೇಶ ಭಕ್ತಿ ಗೀತೆಗಳ ನಾದ, ತ್ರಿವರ್ಣ ಧ್ವಜದ ಹಾರಾಟ. ರಂಗು ರಂಗಿನ ವೇಷ ಭೂಷಣ, ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರಗಳು ಕಣ್ಣಿಗೆ ಬಿದ್ದವು. [ಪಿಟಿಐ ಚಿತ್ರಗಳು]

ಬೆಂಗಳೂರಿನಲ್ಲಿ ಚಿಣ್ಣರ ಸಡಗರ
ಬೆಂಗಳೂರಿನ ಶಾಲೆಯೊಂದರಲ್ಲಿ ಬೆಳಗ್ಗೆಯೇ ಶುಭ್ರ ಬಟ್ಟೆ ಧರಿಸಿ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಭಾಗವಹಿಸಿದ್ದ ಮಕ್ಕಳು.

ನರೇಂದ್ರ ಮೋದಿ ಭಾಷಣ
ಭಾರತೀಯರು ಪಾರದರ್ಶಕ ಆಡಳಿತ ಬಯಸುತ್ತಿದ್ದು ಭ್ರಷ್ಟಾಚಾರವನ್ನು ಬೇರು ಸಮೇತ ಕಿತ್ತು ಹಾಕಲು ಸರ್ಕಾರ ಬದ್ಧವಾಗಿದೆ ಎಂದು ದೆಹಲಿ ಕೆಂಪುಕೋಟೆಯ ಭಾಷಣದಲ್ಲಿ ಹೇಳಿದ ನರೇಂದ್ರ ಮೋದಿ.

ಕೆಂಪು ಕೋಟೆ ಮೇಲೆ ಹಾರಾಡಿದ ರಾಷ್ಟ್ರಧ್ವಜ
69ನೇ ಸ್ವಾತಂತ್ರ್ಯ ದಿನದ ಪ್ರಯುಕ್ತ ನವದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮೇಲೆ ಹಾರಾಡಿದ ತ್ರಿವರ್ಣ ಧ್ವಜ ಕಂಡಿದ್ದು ಹೀಗೆ.

ದೇಶ ಭಕ್ತಿ ಮೆರೆದ ಬಾಲಕರು
ಭುವನೇಶ್ವರದಲ್ಲಿ ದೇಶಭಕ್ತಿ ರೂಪಕಳನ್ನು ಪ್ರದರ್ಶಿಸಿ ಭಾರತದ ಇತಿಹಾಸ, ಸ್ವಾತಂತ್ರ್ಯ ಹೋರಾಟ ಮತ್ತು ಹಿರಿಮೆನನ್ನು ಸಾರಿದ ಬಾಲಕರು.

ಕೆಂಪುಕೋಟೆಯಲ್ಲಿ ಮಕ್ಕಳ ಸಂಭ್ರಮ
ನವದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಸಂಭ್ರಮಿಸಿದ್ದು ಹೀಗೆ.

ಗಡಿಯಲ್ಲಿ ಸೈನಿಕರ ಶುಭಾಶಯ
ಭಾರತ ಮತ್ತು ಪಾಕಿಸ್ತಾನದ ಗಡಿಭಾಗವಾದ ಅಟಾರಿಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸೈನಿಕರು ಸಂಭ್ರಮಿಸಿದ್ದು ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕಿತು.

ಜಮ್ಮು ಕಾಶ್ಮೀರ
ಜಮ್ಮು ಕಾಶ್ಮೀರದಲ್ಲಿ ದೇಶಭಕ್ತಿ ಗೀತ ಗಾಯನಗಳನ್ನು ಪ್ರಸ್ತುತಪಡಿಸಿ ಭಾರತದ ಇತಿಹಾಸವನ್ನು ತೆರೆದಿಟ್ಟ ಮಕ್ಕಳು.

ಮಕ್ಕಳೊಂದಿಗೆ ಮೋದಿ
ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಹಿಸಿದ್ದ ಮಕ್ಕಳೊಂದಿಗೆ ತಾವು ಸಂಭ್ರಮಿಸಿದರು.

ಕಟ್ಟುವೆವು ನಾವು ಹೊಸ ನಾಡೊಂಧ್ದನ್ನು
ಸ್ವಾತಂತ್ರ್ಯ ದಿನದಲ್ಲಿ ಶಿಸ್ತಿನಿಂದ ಭಾಗವಹಿಸಿದ್ದ ಮಕ್ಕಳನ್ನು ನರೇಂದ್ರ ಮೋದಿ ಮಾತನಾಡಿಸುತ್ತ ತೆರಳಿದರು.

ಸೋನಿಯಾ ಹಾಜರಿ
ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ. ಮೋದಿ ಭಾಷಣದ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಪಸ್ವರ ಎತ್ತಿದ್ದು ಭಾಷಣದಲ್ಲಿ ರಾಜಕಾರಣದ ಅಂಶಗಳು ಇರಬಾರದಿತ್ತು ಎಂದು ಹೇಳಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications