ಚಿತ್ರಗಳಲ್ಲಿ: ಸಾಧಕರಿಗೆ ಸಂದ ಪದ್ಮ ಗೌರವ
ನವದೆಹಲಿ ,ಮಾ. 30: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ 104 ಗಣ್ಯರನ್ನು ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು. ಸ್ವಾತಂತ್ರ್ಯ ಹೋರಾಟಗಾರ ಮದನ್ ಮೋಹನ್ ಮಾಳವೀಯ ಅವರಿಗೆ ಮರಣೋತ್ತರ ಭಾರತ ರತ್ನ ನೀಡಿ ಗೌರವಿಸಲಾಯಿತು.
ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾನಿ ಮತ್ತು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು. [ಧರ್ಮಸ್ಥಳ: ವೀರೇಂದ್ರ ಹೆಗ್ಗಡೆಗೆ ಪದ್ಮ ವಿಭೂಷಣ, ಹಬ್ಬದ ಸಂಭ್ರಮ]
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (ಪದ್ಮ ವಿಭೂಷಣ), ಸಿದ್ಧಗಂಗಾಮಠದ ಶಿವಕುಮಾರ ಸ್ವಾಮೀಜಿ ಮತ್ತು ವಿಜ್ಞಾನಿ ಡಾ. ಖರಗ್ ಸಿಂಗ್ ವಾಲ್ಡಿಯಾ (ಪದ್ಮ ಭೂಷಣ), ವಿಜ್ಞಾನಿ ಎಸ್. ಅರುಣನ್, ಇನ್ಫೊಸಿಸ್ ಸಂಸ್ಥಾಪಕರಲ್ಲಿ ಒಬ್ಬರಾದ ಟಿ.ವಿ. ಮೋಹನ್ದಾಸ್ ಪೈ (ಪದ್ಮಶ್ರೀ) ಅವರಿಗೆ ಪ್ರಶಸ್ತಿ ಗೌರವ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು. (ಪಿಟಿಐ ಚಿತ್ರಗಳು)

ಪಿವಿ ಸಿಂಧು ಅವರಿಗೆ ಪದ್ಮಶ್ರೀ ಪ್ರಶಸ್ತಿ
ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು.

ಸರ್ದಾರ್ ಸಿಂಗ್ ಗೆ ಪದ್ಮಶ್ರೀ
ಭಾರತದ ಖ್ಯಾತ ಹಾಕಿ ಆಟಗಾರ ಸರ್ದಾರ್ ಸಿಂಗ್ ಅವರಿಗೆ ಸಂದ ಪದ್ಮಶ್ರೀ ಗೌರವ.

ಲಾಲಕೃಷ್ಣ ಅಡ್ವಾನಿಗೆ ಪದ್ಮ ವಿಭೂಷಣ
ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾನಿಗೆ ಪದ್ಮವಿಭೂಷಣ ಗೌರವ ನೀಡುತ್ತಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ.

ಪದ್ಮ ಪುರಸ್ಕೃತರು
ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಗೌರವ ಸ್ವೀಕಾರ ಸಮಾರಂಭದ ನೋಟ.

ಭಾರತ ರತ್ನ ಮಾಳವೀಯ
ಸ್ವಾತಂತ್ರ್ಯ ಹೋರಾಟಗಾರ, ಚಿಂತಕ ಮದಮ್ ಮೋಹನ್ ಮಾಳವೀಯ ಅವರ ಕುಟುಂಬದವರು ಭಾರತ ರತ್ನ ಪ್ರಶಸ್ತಿ ಸ್ವೀಕರಿಸಿದರು.

ಸುಧಾ ರಘುನಾಥನ್ ಗೆ ಪದ್ಮವಿಭೂಷಣ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸುಧಾ ರಘುನಾಥನ್ ಅವರಿಗೆ ಪದ್ಮವಿಭೂಷಣ ನೀಡಿ ಗೌರವಿಸಿದರು.

ಪ್ರಕಾಶ್ ಸಿಂಗ್ ಬಾದಲ್
ಪಂಜಾಬಿನ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪದ್ಮ ವಿಭೂಷಣ ಗೌರವ.

ಅಡ್ವಾನಿ ನಮನ
ಪದ್ಮ ವಿಭೂಷಣ ಗೌರವ ಸ್ವೀಕರಿಸುವುದಕ್ಕೂ ಮುನ್ನ ಸಭೆಗೆ ನಮಿಸಿದ ಬಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾನಿ
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications