ಕ್ರಿಕೆಟರ್ ಶ್ರೀಶಾಂತ್ ಮದುವೆ ಸಂಭ್ರಮಾಚರಣೆ
ಗುರುವಾಯೂರು, ಡಿ.13: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ನಲ್ಲಿ ಆರೋಪಿಯಾಗಿ ಕ್ರಿಕೆಟ್ ನಿಂದ ನಿಷೇಧಕ್ಕೊಳಗಾಗಿರುವ ಮಧ್ಯಮ ವೇಗಿ ಎಸ್ .ಶ್ರೀಶಾಂತ್ ತನ್ನ ದೀರ್ಘ ಕಾಲದ ಗೆಳತಿ, ಜೈಪುರ ರಾಜಮನೆತನದ ಭುವನೇಶ್ವರಿ ಕುಮಾರಿ ಅವರನ್ನು ಗುರುವಾರ, ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ವರಿಸಿದ್ದಾರೆ.
ಗುರುವಾರ ಬೆಳಗ್ಗೆ ಕೇರಳ ಸಂಪ್ರದಾಯದಂತೆ ಕೊಚ್ಚಿಯ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನದಲ್ಲಿ ದಾಂಪತ್ಯಕ್ಕೆ ಕಾಲಿರಿಸಿದರು. ವಿವಾಹಪೂರ್ವ ಕಾರ್ಯಕ್ರಮಗಳು ಬುಧವಾರ ಖಾಸಗಿ ಹೋಟೆಲ್ ನಲ್ಲಿ ನಡೆದಿವೆ. ಉಭಯ ಕುಟುಂಬದ ಅಥಿತಿಗಳು ಮತ್ತು ಆಪ್ತರು ಮಾತ್ರ ಸಮಾರಂಭದಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ವಿವಾಹ ಸಮಾರಂಭಕ್ಕಾಗಿ ಭುವನೇಶ್ವರಿ ಕುಮಾರಿ ಕುಟುಂಬ ಡಿ.8ರಂದೇ ಕೊಚ್ಚಿಗೆ ಆಗಮಿಸಿತ್ತು. ವಿವಾಹದ ನಂತರ ಶ್ರೀಶಾಂತ್ ದಂಪತಿ ಎರ್ನಾಕುಲಂ ಜಿಲ್ಲೆಯಲ್ಲಿರುವ ಶ್ರೀಶಾಂತ್ ಅವರ ಪೂರ್ವಿಕರ ಊರಾದ ಕೋಥಮಂಗಲಂ ನಿವಾಸಕ್ಕೆ ತೆರಳಿದರು.
ಐಪಿಎಲ್ 6 ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ಶ್ರೀಶಾಂತ್, ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾದ ಆರೋಪದಡಿ ದೆಹಲಿ ಪೊಲೀಸರು ಮೇ 16ರಂದು ಬಂಧನಕ್ಕೊಳಗಾಗಿದ್ದರು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಪ್ರಸ್ತುತ ಶ್ರೀಶಾಂತ್ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
'ಬಿಸಿಸಿಐ ನಿರ್ಣಯ ಹೊರ ಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಶ್ರೀಶಾಂತ್ ಇದು ಅತ್ಯಂತ ಆಶ್ಚರ್ಯಕರವಾಗಿದೆ. ಕೋರ್ಟಿನಲ್ಲಿ ಇನ್ನೂ ಕೇಸ್ ಬಾಕಿಯಿದೆ. ಜಾಮೀನು ಸಿಕ್ಕಿದೆ. ಬಿಸಿಸಿಐ ನಡೆ ಅಚ್ಚರಿ ತಂದಿದೆ' ಎಂದು ಶ್ರೀಶಾಂತ್ ಪ್ರತಿಕ್ರಿಯಿಸಿದ್ದರು. ಶ್ರೀಶಾಂತ್ ಮತ್ತು ಭುವನೇಶ್ವರಿ ಕುಮಾರಿ ಅವರ ಮದುವೆಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬರುತ್ತಾರೆ ಎಂಬ ಸುದ್ದಿಯೂ ಹಬ್ಬಿತ್ತು, ಅದರೆ, ಮೋದಿ ಅವರು ಬಂದಿರಲಿಲ್ಲ.(ಪಿಟಿಐ)

ಸಂಭ್ರಮದಲ್ಲಿ ಕುಟುಂಬ ವರ್ಗ
ಕೊಚ್ಚಿಯಲ್ಲಿರುವ ಶ್ರೀಶಾಂತ್ ಅವರ ಸೋದರಿಯ ಮನೆಯಲ್ಲಿ ಸಂಭ್ರಮದ ವಾತಾವರಣ ಕಂಡು ಬಂದಿತು. ಇಲ್ಲಿರುವುದು ಸಾಂದರ್ಭಿಕ ಚಿತ್ರ.

ದೋಷ ನಿವಾರಣೆ ಪೂಜೆ
ಕೊಚ್ಚಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಆರೋಪಿಯಾಗಿದ್ದ ಶ್ರೀಶಾಂತ್ ಅವರು ಜಾಮೀನು ಪಡೆದು ಜೈಲಿನಿಂದ ಹೊರಬಂದ ಮೇಲೆ ವಿವಿಧ ದೇಗುಲಗಳಿಗೆ ಭೇಟಿ ನೀಡಿದ್ದರು. ಕೊಚ್ಚಿಯ ಪೂರ್ಣಾತ್ರೇಯಸ್ ದೇಗುಲದಲ್ಲಿ ತುಲಾಭಾರ ಸೇವೆ ಸಲ್ಲಿಸಿದ್ದರು. ಮದುವೆಗೂ ದೋಷ ನಿವಾರಣೆಗೆ ಹಲವು ಪೂಜಾ ಕೈಂಕರ್ಯಗಳನ್ನು ಕೈಗೊಂಡಿದ್ದರು.

ದೀರ್ಘ ಕಾಲದ ಗೆಳತಿ ಜತೆ ಮದುವೆ
ಶ್ರೀಶಾಂತ್ ತನ್ನ ದೀರ್ಘ ಕಾಲದ ಗೆಳತಿ, ಜೈಪುರ ರಾಜಮನೆತನದ ಭುವನೇಶ್ವರಿ ಕುಮಾರಿ ಅವರನ್ನು ಗುರುವಾರ, ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ವರಿಸಿದ್ದಾರೆ.

ಕೇರಳ ಸಂಪ್ರದಾಯದಂತೆ
ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನದಲ್ಲಿ ದಾಂಪತ್ಯಕ್ಕೆ ಕಾಲಿರಿಸಿದರು

ಸರಳ ವಿವಾಹ ಸಮಾರಂಭ
ಸರಳವಾಗಿ ವಿವಾಹ ಸಮಾರಂಭ ನೆರವೇರಿತು. ಶ್ರೀಶಾಂತ್ ದಂಪತಿ ಎರ್ನಾಕುಲಂ ಜಿಲ್ಲೆಯಲ್ಲಿರುವ ಶ್ರೀಶಾಂತ್ ಅವರ ಪೂರ್ವಿಕರ ಊರಾದ ಕೋಥಮಂಗಲಂ ನಿವಾಸಕ್ಕೆ ತೆರಳಿದರು.

ಸಂಭ್ರಮದಲ್ಲಿ ಕುಟುಂಬ ವರ್ಗ
ಕ್ರಿಕೆಟರ್ ಶ್ರೀಶಾಂತ್ ಮದುವೆ ಸಂಭ್ರಮ
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications