ಮಗುವನ್ನು ಬಲಿ ಪಡೆದ ಹೇಮಾಮಾಲಿನಿ ಮರ್ಸಿಡಿಸ್ ಬೆಂಜ್
ಜೈಪುರ, ಜು.03 : ನಟಿ ಮತ್ತು ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ರಾಜಸ್ಥಾನದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೇಮಾಮಾಲಿನಿ ಅವರ ಕಾರು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ಮಥುರಾ ಸಂಸದೆ (ಬಿಜೆಪಿ) ಹೇಮಾಮಾಲಿನಿ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಗುರುವಾರ ರಾತ್ರಿ ಎದುರಿನಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರಾಜಸ್ಥಾನದ ದೌಸಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. [ರಾಜ್ಯಸಭೆ ನಿವೃತ್ತರಿಗೆ, ಸಚಿನ್ ಗಲ್ಲ : ಹೇಮಾ ಮಾಲಿನಿ]
ಹೇಮಾಮಾಲಿನಿ ಅವರ ತಲೆ, ಹಣೆ, ಬೆನ್ನು ಮತ್ತು ಕಾಲುಗಳಿಗೆ ಗಾಯವಾಗಿದೆ. ಅವರನ್ನು ಜೈಪುರದ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಮಾಮಾಲಿನಿ ಅವರ ಹಣೆಗೆ ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. [ಕಾರು ಅಪಘಾತದ ಚಿತ್ರಗಳು]
ಆಲ್ಟೋ ಕಾರಿನಲ್ಲಿದ್ದ 4 ವರ್ಷದ ಬಾಲಕಿ ಸೋನಂ ಮೃತಪಟ್ಟಿದ್ದು ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹೇಳಿದ್ದಾರೆ. [ಪಿಟಿಐ ಚಿತ್ರಗಳು]

ರಾಜಸ್ಥಾನದಲ್ಲಿ ಹೇಮಮಾಲಿನಿ ಕಾರು ಅಪಘಾತ
ಮಥುರಾದ ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಗುರುವಾರ ರಾತ್ರಿ ಎದುರಿನಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ರಾಜಸ್ಥಾನದ ದೌಸಾ ಬಳಿಯ ಹೆದ್ದಾರಿಯಲ್ಲಿ ಈ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಜೈಪುರಕ್ಕೆ ತೆರಳುತ್ತಿದ್ದರು
ಹೇಮಾಮಾಲಿನಿ ಅವರು ಮಥುರಾದಿಂದ ಜೈಪುರಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಆಲ್ಟೋ ಕಾರು ಜೈಪುರದಿಂದ ಲಾಸ್ಲೊತ್ಗೆ ತೆರಳುತ್ತಿತ್ತು. ಆಲ್ಟೋ ಕಾರಿನಲ್ಲಿ ಪುರುಷ, ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳಿದ್ದರು. ಹೇಮಾಮಾಲಿನಿ ಅವರ ಕಾರಿನಲ್ಲಿ ಚಾಲಕ ಸೇರಿ ಮೂವರಿದ್ದರು.

ಹೇಮಾಮಾಲಿನಿ ಆಸ್ಪತ್ರೆಗೆ ದಾಖಲು
ಅಪಘಾತದಿಂದಾಗಿ ಹೇಮಾಮಾಲಿನಿ ಅವರ ತಲೆ, ಹಣೆ, ಬೆನ್ನು ಮತ್ತು ಕಾಲುಗಳಿಗೆ ಗಾಯವಾಗಿದೆ. ಅವರನ್ನು ಜೈಪುರದ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಮಾಮಾಲಿನಿ ಅವರ ಹಣೆಗೆ ಹೊಲಿಗೆ ಹಾಕಲಾಗಿದೆ.

ಮಗು ಸಾವು, ಮೂವರಿಗೆ ಗಾಯ
ಆಲ್ಟೋ ಕಾರಿನಲ್ಲಿದ್ದ 4 ವರ್ಷದ ಬಾಲಕಿ ಸೋನಂ ಅಪಘಾತದಿಂದ ಮೃತಪಟ್ಟಿದ್ದು ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
| Array |
ಉತ್ತಮ ಚಿಕಿತ್ಸೆ ನೀಡಲಾಗುತ್ತದೆ
ಅಪಘಾತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಟ್ವಿಟ್ ಮಾಡಿದ್ದಾರೆ.

ಎಫ್ಐಆರ್ ದಾಖಲು
ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಾಮಾಲಿನಿ ಅವರ ಕಾರು ಚಾಲಕನ ವಿರುದ್ಧ ರಾಜಸ್ಥಾನ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಶುಕ್ರವಾರ ಚಾಲಕನ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಹೋಗಿದ್ದರು
ಹೇಮಾಮಾಲಿನಿ ಅವರಿಗೆ ಕರ್ನಾಟಕ ನಂಟಿದೆ. 2011ರಲ್ಲಿ ರಾಜ್ಯ ಸಭೆಗೆ ಕರ್ನಾಟಕದಿಂದ ಅವರನ್ನು ಆರಿಸಿ ಕಳಿಸಲಾಗಿತ್ತು. 2014ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಮಥುರಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, 5,74,633 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications