ಮಗುವನ್ನು ಬಲಿ ಪಡೆದ ಹೇಮಾಮಾಲಿನಿ ಮರ್ಸಿಡಿಸ್ ಬೆಂಜ್
ಜೈಪುರ, ಜು.03 : ನಟಿ ಮತ್ತು ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ರಾಜಸ್ಥಾನದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೇಮಾಮಾಲಿನಿ ಅವರ ಕಾರು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದ್ದು, ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ಮಥುರಾ ಸಂಸದೆ (ಬಿಜೆಪಿ) ಹೇಮಾಮಾಲಿನಿ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಗುರುವಾರ ರಾತ್ರಿ ಎದುರಿನಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರಾಜಸ್ಥಾನದ ದೌಸಾ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. [ರಾಜ್ಯಸಭೆ ನಿವೃತ್ತರಿಗೆ, ಸಚಿನ್ ಗಲ್ಲ : ಹೇಮಾ ಮಾಲಿನಿ]
ಹೇಮಾಮಾಲಿನಿ ಅವರ ತಲೆ, ಹಣೆ, ಬೆನ್ನು ಮತ್ತು ಕಾಲುಗಳಿಗೆ ಗಾಯವಾಗಿದೆ. ಅವರನ್ನು ಜೈಪುರದ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಮಾಮಾಲಿನಿ ಅವರ ಹಣೆಗೆ ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ಹೇಳಿದ್ದಾರೆ. [ಕಾರು ಅಪಘಾತದ ಚಿತ್ರಗಳು]
ಆಲ್ಟೋ ಕಾರಿನಲ್ಲಿದ್ದ 4 ವರ್ಷದ ಬಾಲಕಿ ಸೋನಂ ಮೃತಪಟ್ಟಿದ್ದು ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹೇಳಿದ್ದಾರೆ. [ಪಿಟಿಐ ಚಿತ್ರಗಳು]

ರಾಜಸ್ಥಾನದಲ್ಲಿ ಹೇಮಮಾಲಿನಿ ಕಾರು ಅಪಘಾತ
ಮಥುರಾದ ಬಿಜೆಪಿ ಸಂಸದೆ ಹೇಮಾಮಾಲಿನಿ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಗುರುವಾರ ರಾತ್ರಿ ಎದುರಿನಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ರಾಜಸ್ಥಾನದ ದೌಸಾ ಬಳಿಯ ಹೆದ್ದಾರಿಯಲ್ಲಿ ಈ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಜೈಪುರಕ್ಕೆ ತೆರಳುತ್ತಿದ್ದರು
ಹೇಮಾಮಾಲಿನಿ ಅವರು ಮಥುರಾದಿಂದ ಜೈಪುರಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಆಲ್ಟೋ ಕಾರು ಜೈಪುರದಿಂದ ಲಾಸ್ಲೊತ್ಗೆ ತೆರಳುತ್ತಿತ್ತು. ಆಲ್ಟೋ ಕಾರಿನಲ್ಲಿ ಪುರುಷ, ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳಿದ್ದರು. ಹೇಮಾಮಾಲಿನಿ ಅವರ ಕಾರಿನಲ್ಲಿ ಚಾಲಕ ಸೇರಿ ಮೂವರಿದ್ದರು.

ಹೇಮಾಮಾಲಿನಿ ಆಸ್ಪತ್ರೆಗೆ ದಾಖಲು
ಅಪಘಾತದಿಂದಾಗಿ ಹೇಮಾಮಾಲಿನಿ ಅವರ ತಲೆ, ಹಣೆ, ಬೆನ್ನು ಮತ್ತು ಕಾಲುಗಳಿಗೆ ಗಾಯವಾಗಿದೆ. ಅವರನ್ನು ಜೈಪುರದ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಮಾಮಾಲಿನಿ ಅವರ ಹಣೆಗೆ ಹೊಲಿಗೆ ಹಾಕಲಾಗಿದೆ.

ಮಗು ಸಾವು, ಮೂವರಿಗೆ ಗಾಯ
ಆಲ್ಟೋ ಕಾರಿನಲ್ಲಿದ್ದ 4 ವರ್ಷದ ಬಾಲಕಿ ಸೋನಂ ಅಪಘಾತದಿಂದ ಮೃತಪಟ್ಟಿದ್ದು ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
| Array |
ಉತ್ತಮ ಚಿಕಿತ್ಸೆ ನೀಡಲಾಗುತ್ತದೆ
ಅಪಘಾತದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಟ್ವಿಟ್ ಮಾಡಿದ್ದಾರೆ.

ಎಫ್ಐಆರ್ ದಾಖಲು
ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಾಮಾಲಿನಿ ಅವರ ಕಾರು ಚಾಲಕನ ವಿರುದ್ಧ ರಾಜಸ್ಥಾನ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಶುಕ್ರವಾರ ಚಾಲಕನ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆರಿಸಿ ಹೋಗಿದ್ದರು
ಹೇಮಾಮಾಲಿನಿ ಅವರಿಗೆ ಕರ್ನಾಟಕ ನಂಟಿದೆ. 2011ರಲ್ಲಿ ರಾಜ್ಯ ಸಭೆಗೆ ಕರ್ನಾಟಕದಿಂದ ಅವರನ್ನು ಆರಿಸಿ ಕಳಿಸಲಾಗಿತ್ತು. 2014ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಮಥುರಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, 5,74,633 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications