ನೇತಾಜಿ ಹುಟ್ಟುಹಬ್ಬದಂದು ರಹಸ್ಯ ಕಡತಗಳ ಕಾಣಿಕೆ
ನವದೆಹಲಿ, ಜನವರಿ 23 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 100 ರಹಸ್ಯ ಡಿಜಿಟಲ್ ಕಡತಗಳನ್ನು ಬಿಡುಗಡೆ ಮಾಡಿದ್ದಾರೆ. ಪ್ರತಿ ತಿಂಗಳು ನೇತಾಜಿ ಅವರಿಗೆ ಸಂಬಂಧಿಸಿದ 25 ಕಡತಗಳನ್ನು ಡಿಜಿಟಲ್ ರೂಪದಲ್ಲಿ ಜನರಿಗೆ ಒದಗಿಸಲಾಗುತ್ತದೆ.
ನೇತಾಜಿ ಅವರ 119ನೇ ಜನ್ಮದಿನದ ಅಂಗವಾಗಿ ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಬೋಸ್ ಅವರಿಗೆ ಸಂಬಂಧಿಸಿದ ಕಡತಗಳನ್ನು www.netajipapers.gov.in ಜಾಲತಾಣದಲ್ಲಿ ಬಿಡುಗಡೆ ಮಾಡಿದರು. [ನೇತಾಜಿ ಕುರಿತ 64 ರಹಸ್ಯ ದಾಖಲೆ ಬಹಿರಂಗ]
ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ (ಎನ್ಎಐ) ನೇತಾಜಿ ಅವರಿಗೆ ಸಂಬಂಧಿಸಿದ ಕಡತಗಳನ್ನು ಡಿಜಿಟಲ್ ರೂಪಕ್ಕೆ ತಂದಿದೆ. ನೇತಾಜಿ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನರೇಂದ್ರ ಮೋದಿ ಅವರು ನೇತಾಜಿ ಅವರ ಕಡತಗಳಿರುವ ವೆಬ್ಸೈಟ್ಗೆ ಚಾಲನೆ ನೀಡಿದರು. [ನೇತಾಜಿ ರಹಸ್ಯ ಕಡತ ಬಿಡುಗಡೆ]
ಕೇಂದ್ರ ಸರ್ಕಾರ ನೇತಾಜಿ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಿಡುಗಡೆ ಮಾಡಿರುವುದನ್ನು ನೇತಾಜಿ ಕುಟುಂಬ ಸದಸ್ಯರು ಸ್ವಾಗತಿಸಿದ್ದಾರೆ. ಪ್ರತಿ ತಿಂಗಳು 25 ಡಿಜಿಟಲ್ ಕಡತಗಳನ್ನು ಈ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಕಡತ ಬಿಡುಗಡೆಯ ಚಿತ್ರಗಳು ಇಲ್ಲಿವೆ....

ನೇತಾಜಿ 100 ರಹಸ್ಯ ದಾಖಲೆ ಬಿಡುಗಡೆ
ನೇತಾಜಿ ಅವರ 119ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ಶನಿವಾರ ದೆಹಲಿಯಲ್ಲಿನ ಭಾರತದ ರಾಷ್ಟ್ರೀಯ ಪತ್ರಾಗಾರದಲ್ಲಿ (ಎನ್ಎಐ)ನೇತಾಜಿ ಅವರಿಗೆ ಸಂಬಂಧಿಸಿದ 100 ಡಿಜಿಟಲ್ ದಾಖಲೆಗಳನ್ನು ಬಿಡುಗಡೆ ಮಾಡಿದರು.

ವೆಬ್ಸೈಟ್ನಲ್ಲಿ ದಾಖಲೆಗಳು ಲಭ್ಯವಿದೆ
ನೇತಾಜಿ ಅವರಿಗೆ ಸಂಬಂಧಿಸಿದ ಡಿಜಿಟಲ್ ಕಡತಗಳು www.netajipapers.gov.in ವೆಬ್ಸೈಟ್ನಲ್ಲಿ ಲಭ್ಯವಿದೆ. ಪ್ರತಿ ತಿಂಗಳು 25 ಕಡತಗಳನ್ನು ಜನರಿಗಾಗಿ ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ (ಎನ್ಐಎ) ಬಿಡುಗಡೆ ಮಾಡಲಿದೆ.

ಕಡತಗಳನ್ನು ವೀಕ್ಷಿಸಿದ ಪ್ರಧಾನಿ ಮೋದಿ
ಕಡತಗಳನ್ನು ಬಿಡುಗಡೆ ಮಾಡಿದ ಬಳಿಕ ಮೋದಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಕಡತಗಳನ್ನು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ವೀಕ್ಷಿಸಿದರು. ನೇತಾಜಿ ಅವರ ಅಪರೂಪದ ಚಿತ್ರಗಳು ಕಡತಗಳಲ್ಲಿ ಸೇರಿವೆ.

ನಿರ್ಧಾರ ಸ್ವಾಗತಿಸಿದ ನೇತಾಜಿ ಕುಟುಂಬ
ಕೇಂದ್ರ ಸರ್ಕಾರ ನೇತಾಜಿ ಅವರಿಗೆ ಸಂಬಂಧಿಸಿದ ಕಡತಗಳನ್ನು ಬಿಡುಗಡೆ ಮಾಡಿರುವುದನ್ನು ನೇತಾಜಿ ಕುಟುಂಬ ಸದಸ್ಯರು ಸ್ವಾಗತಿಸಿದ್ದಾರೆ. ಮೋದಿ ಅವರು ಕಡತ ಬಿಡುಗಡೆ ಬಳಿಕ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

ಪ್ರತಿ ತಿಂಗಳು ಕಡತ ಜನರಿಗೆ ಸಿಗಲಿದೆ
ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ (ಎನ್ಎಐ) ನೇತಾಜಿ ಅವರ ಕಣ್ಮರೆ ಸೇರಿದಂತೆ ಇತರ ರಹಸ್ಯವನ್ನು ಒಳಗೊಂಡಿರುವ ಕಡತಗಳನ್ನು ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿದೆ. ಪ್ರತಿ ತಿಂಗಳು 25 ಕಡತಗಳನ್ನು ಸಾರ್ವಜನಿಕರಿಗಾಗಿ ವೆಬ್ ಸೈಟ್ ಮೂಲಕ ಬಿಡುಗಡೆ ಮಾಡಲಾಗುತ್ತದೆ.

ನೇತಾಜಿ ಕುಟುಂಬ ಬೇಡಿಕೆ ಇಟ್ಟಿತ್ತು
ನೇತಾಜಿ ಅವರ ಸೋದರ ಸಂಬಂಧಿಯ ಮೊಮ್ಮಗ ಸೂರ್ಯಕುಮಾರ್ ಬೋಸ್ ಅವರು ಬರ್ಲಿನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ 1945ರ ಆಗಸ್ಟ್ 18ರಂದು ತೈವಾನ್ನಿಂದ ಬೋಸ್ ಅವರು ಕಣ್ಮರೆಯಾಗಿರುವುದಕ್ಕೆ ಸಂಬಂಧಿಸಿದ ಮಾಹಿತಿ ಬಹಿರಂಗ ಮಾಡಬೇಕು ಎಂದು ಒತ್ತಾಯಿಸಿದ್ದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications