ಕೆಮ್ಮು ಕಡಿಮೆಯಾಯ್ತೆ? ತೃತೀಯ ರಂಗದ ಕತೆ ಏನು?
ನವದೆಹಲಿ , ಏ: 5: ಭಾನುವಾರ ನವದೆಹಲಿಯಲ್ಲಿ ರಾಷ್ಟ್ರದ ಎಲ್ಲ ಮುಖ್ಯಮಂತ್ರಿಗಳು ಒಂದೆಡೆ ಸೇರಿದ್ದರು. ದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯಮಂತ್ರಿಗಳು ಹಾಗೂ ನ್ಯಾಯಮೂರ್ತಿಗಳ ಜಂಟಿ ಸಮಾವೇಶ ಭಾನುವಾರ ನಡೆಯುತು. ಪ್ರಧಾನಿ ನರೇಂದ್ರ ಮೋದಿ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದ ನ್ಯಾಯಾಂಗ ವ್ಯವಸ್ಥೆಯ ಇನ್ನಷ್ಟು ಭದ್ರವಾಗಬೇಕು. ನ್ಯಾಯಮೂರ್ತಿಗಳ ಮೇಲೆ ಜನರು ಅಪಾರ ವಿಶ್ವಾಸ ಮತ್ತು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ದೆಹಲಿ ಸಿಎಂ ಕೇಜ್ರಿವಾಲ್ ಸೇರಿದಂತೆ ಎಲ್ಲ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕಾನೂನು ಸಚಿವರು ಪಾಲ್ಗೊಂಡಿದ್ದರು.(ಪಿಟಿಐ ಚಿತ್ರಗಳು)

ಸಾಹೆಬ್ರೆ ನಮ್ಮ ಕತೆ ಏನು?
ಸಿಎಂ ಸಿದ್ದರಾಮಯ್ಯ ಜತೆ ಸಭೆಗೆ ದೆಹಲಿಗೆ ತೆರಳಿದ್ದ ಕಾನೂನು ಸಚಿವ ಜಯಚಂದ್ರ ಸಭೆಯಲ್ಲಿನ ನಡವಳಿಕೆಗಳನ್ನು ಆಲಿಸಿದರು. ಮೊನ್ನೆಯಷ್ಟೇ ಬೆಂಗಳೂರಲ್ಲಿ ಬಿಜೆಪಿ ಕಾರ್ಯಕಾರಣಿ ಮಾಡಿ ಈಗ ಸಿಎಂ ಗಳ ಸಭೆ ಮಾಡಿದ್ದಾರೆ. ಬಿಜೆಪಿಯವರ ಲೆಕ್ಕಾವಾರಾನೇ ಅರ್ಥ ಆಗ್ತಿಲ್ಲ ಅಂದಂಗಿತ್ತು ಜಯಚಂದ್ರ.

ನೀರಿಗೆ ತಕರಾರಿಲ್ಲ ಬಿಡಿ!
ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತಮಿಳುನಾಡು ಸಿಎಂ ಪನ್ನೀರ್ ಸೆಲ್ವಂ ಉಭಯಕುಶಲೋಪರಿ. ಕರ್ನಾಟಕದ ಮೇಕೆದಾಟು ಯೋಜನೆಗೆ ನಿಮ್ಮದೆಂತೋ ತಕರಾರಂತೆ, ನಮ್ಮದೇನಿಲ್ಲ ಎಂದು ನಾಯ್ಡು ಹೇಳಿದ್ದು ಯಾರಿಗೂ ಕೇಳಲಿಲ್ಲ!

ಅಭಿವೃದ್ಧಿಗೆ ಕೈ ಜೋಡಿಸೋಣ
ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಉತ್ತರಾಖಾಂಡ್ ಮುಖ್ಯಮಂತ್ರಿ ಹರೀಶ್ ರಾವತ್ ಬಿಗಿಅಪ್ಪುಗೆ ದೇಶದ ಅಭಿವೃದ್ಧಿಗೆ ಒಟ್ಟಾಗಿ ಹೆಜ್ಜೆ ಹಾಕೋಣ ಎಂಬಂತೆ ತೋರಿತು.

ಕೆಮ್ಮು ಕಡಿಮೆಯಾಯಿತೆ?
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಿಂದ ಪ್ರಧಾನಿ ನರೇಂದ್ರ ಮೋದಿಗೆ ಹಸ್ತ ಲಾಘವ. ನರೇಂದ್ರ ಮೋದಿ ಸಲಹೆ ಮೇರೆಗೆ ಬೆಂಗಳೂರಿಗೆ ಆಗಮಿಸಿ ಕೇಜ್ರಿವಾಲ್ ಬಹುದಿನದಿಂದ ಕಾಡುತ್ತಿದ್ದ ಕೆಮ್ಮಿಗೆ ಚಿಕಿತ್ಸೆ ಪಡೆದು ಹಿಂದಿರುಗಿದ್ದರು.

ನಿಮ್ಮ ನಿಮ್ಮ ರಾಜ್ಯದಲ್ಲಿ ಏನಾಗ್ತಿದೆ?
ಅಸ್ಸಾಂ ಸಿಎಂ ತರುಣ್ ಗೋಗೊಯ್, ಉತ್ತರಾಖಾಂಡ್ ಸಿಎಂ ಹರೀಶ್ ರಾವತ್ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ತಮ್ಮ ರಾಜ್ಯದಲ್ಲಿ ಏನೆನಾಗ್ತಿದೆ ಎಂಬುದನ್ನು ಪರಸ್ಪರ ಹಂಚಿಕೊಂಡಂತೆ ಕಂಡುಬಂತು.

ತೃತೀಯ ರಂಗದ್ದು ಏನ್ ಕತೆ?
ಬಿಹಾರದ ಮುಖ್ಯಂತ್ರಿ ನಿತಿಶ್ ಕುಮಾರ್ ಅವರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಲ್ಲಿಗೆ ಬಂತು ನಿಮ್ಮ ತೃತೀಯ ರಂಗದ ಕತೆ? ಅಂದಂತೆ ಭಾಸವಾದ ಚಿತ್ರ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications