ಚಿತ್ರಗಳು : ಪಟಿಯಾಲಾ ಕೋರ್ಟ್ನಲ್ಲಿ ಏನೇನಾಯ್ತು?
ಬೆಂಗಳೂರು, ಡಿಸೆಂಬರ್ 19 : ದೇಶದ ಕೋಟ್ಯಾಂತರ ಜನರ ಕಣ್ಣು ಶನಿವಾರ ದೆಹಲಿಯ ಪಟಿಯಾಲಾ ಕೋರ್ಟ್ನತ್ತ ನೆಟ್ಟಿತ್ತು. ನ್ಯಾಷನಲ್ ಹೆರಾಲ್ಡ್ ಆಸ್ತಿಯ ಅಕ್ರಮ ಪರಭಾರೆ ಪ್ರಕರಣದಲ್ಲಿ ಕೋರ್ಟ್ಗೆ ವಿಚಾರಣೆಗೆ ಹಾಜರಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಐದು ನಿಮಿಷದಲ್ಲಿ ಜಾಮೀನು ಪಡೆದು ಹೊರಬಂದರು.
ನ್ಯಾಷನಲ್ ಹೆರಾಲ್ಡ್ ಆಸ್ತಿಯ ಅಕ್ರಮ ಪರಭಾರೆ ಬಗ್ಗೆ ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ಅವರು ದೂರು ನೀಡಿದ್ದರಿಂದ, ಈ ಪ್ರಕರಣ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಮರಕ್ಕೂ ಕಾರಣವಾಗಿತ್ತು. ಶನಿವಾರ ಬೆಳಗ್ಗೆಯಿಂದಲೇ ಕಾಂಗ್ರೆಸ್ ವಿವಿಧ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತ್ತು. [ಹೆರಾಲ್ಡ್ : ಒಂದಿಷ್ಟು ತಮಾಷೆಯ, ಕೆಣಕುವ ಟ್ವೀಟುಗಳು]
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಗಳಾದ ಸೋನಿಯಾ ಗಾಂಧಿ, ರಾಹುಲ್ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸ್ಯಾಮ್ ಪಿತ್ರೋಡಾ ಹಾಗೂ ಸುಮನ್ ದುಬೆ ಅವರಿಗೆ ಮಧ್ಯಾಹ್ನ 3 ಗಂಟೆಗೆ ಕೋರ್ಟ್ಗೆ ಹಾಜರಾಗಲು ಸಮನ್ಸ್ ನೀಡಲಾಗಿತ್ತು. [ಕೋರ್ಟಿಗೆ ಸೋನಿಯಾ, ರಾಹುಲ್]
ಸ್ಯಾಮ್ ಪಿತ್ರೋಡಾ ಹೊರತು ಪಡಿಸಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮುಂತಾದವರು ಕೋರ್ಟ್ಗೆ ಹಾಜರಾಗಿದ್ದರು. ಮಧ್ಯಾಹ್ನ ಮೂರು ಗಂಟೆಗೆ ವಿಚಾರಣೆ ಆರಂಭವಾಯಿತು. ಕೇವಲ ಐದು ನಿಮಿಷಗಳಲ್ಲಿ ಎಲ್ಲ ಆರೋಪಿಗಳಿಗೂ ಜಾಮೀನು ಸಿಕ್ಕಿತು. ಪಟಿಯಾಲಾ ಕೋರ್ಟ್ನಲ್ಲಿ ಏನೇನಾಯ್ತು ಚಿತ್ರಗಳಲ್ಲಿ ನೋಡಿ...... [ನ್ಯಾಷನಲ್ ಹೆರಾಲ್ಡ್ ಕೇಸ್ : ಮೂರೇ ನಿಮಿಷದಲ್ಲಿ ಜಾಮೀನು!]

ಐದು ನಿಮಿಷದಲ್ಲಿ ಜಾಮೀನು
ನ್ಯಾಷನಲ್ ಹೆರಾಲ್ಡ್ ಆಸ್ತಿಯ ಅಕ್ರಮ ಪರಭಾರೆ ಪ್ರಕರಣದಲ್ಲಿ ಕೋರ್ಟ್ಗೆ ವಿಚಾರಣೆಗೆ ಹಾಜರಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಐದು ನಿಮಿಷದಲ್ಲಿ ಜಾಮೀನು ಪಡೆದು ಹೊರಬಂದರು.

ಯಾರು-ಯಾರು ಆರೋಪಿಗಳು?
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸ್ಯಾಮ್ ಪಿತ್ರೋಡಾ ಹಾಗೂ ಸುಮನ್ ದುಬೆ ಆರೋಪಿಗಳು. ಅನಾರೋಗ್ಯದ ಕಾರಣದಿಂದಾಗಿ ಸ್ಯಾಮ್ ಪಿತ್ರೋಡಾ ಹೊರತುಪಡಿಸಿ ಉಳಿದ ಆರೋಪಿಗಳು ಕೋರ್ಟ್ಗೆ ಹಾಜರಾಗಿದ್ದರು.

50 ಸಾವಿರ ರೂ. ಬಾಂಡ್, ಒಬ್ಬರ ಶ್ಯೂರಿಟಿ
ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ವೈಯಕ್ತಿಕ 50 ಸಾವಿರ ರೂ. ಬಾಂಡ್ ಮತ್ತು ಒಬ್ಬರ ಶ್ಯೂರಿಟಿ ಆಧಾರದ ಮೇಲೆ ಪಟಿಯಾಲಾ ಕೋರ್ಟ್ ಜಾಮೀನು ಮಂಜೂರು ಮಾಡಿತು. ಪ್ರಕರಣದ ಮುಂದಿನ ವಿಚಾರಣೆ 2016ರ ಫೆಬ್ರವರಿ 20ರ ಮಧ್ಯಾಹ್ನ 2ಗಂಟೆಗೆ ನಡೆಯಲಿದೆ.

ಯಾರಿಗೆ ಯಾರು ಶ್ಯೂರಿಟಿ ಕೊಟ್ಟರು?
ಸೋನಿಯಾ ಗಾಂಧಿ ಅವರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಅವರಿಗೆ ಅಹ್ಮದ್ ಪಟೇಲ್ ಶ್ಯೂರಿಟಿ ನೀಡಿದರು. ಸೋನಿಯಾ ಮತ್ತು ರಾಹುಲ್ ಪರವಾಗಿ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ವಾದ ಮಂಡನೆ ಮಾಡಿದರು.

ಸ್ವಾಮಿ ಮನವಿ ತಿರಸ್ಕರಿಸಿದ ಕೋರ್ಟ್
ಪ್ರಕರಣದ ದೂರುದಾರ ಸುಬ್ರಮಣ್ಯ ಸ್ವಾಮಿ ಅವರು, ಸೋನಿಯಾ ಗಾಂಧಿಯವರ ಪಾಸ್ ಪೋರ್ಟ್ ಜಪ್ತಿ ಮಾಡಿ ವಿದೇಶ ಪ್ರವಾಸಕ್ಕೆ ನಿರ್ಬಂಧ ಹೇರಬೇಕು ಎಂದು ಮನವಿ ಮಾಡಿದ್ದರು. ಆದರೆ, ಕೋರ್ಟ್ ಮನವಿ ತಿರಸ್ಕರಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications