ಮಹಾನ್ ವಿರಾಗಿ ಬುದ್ಧನನ್ನು ಸ್ಮರಿಸಿ, ಕೊಂಡಾಡುವ ಸುದಿನ
ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದೆನಿಸಿರುವ ಬುದ್ಧ ಪೂರ್ಣಿಮಾವನ್ನು ಬುಧವಾರದಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಗೌತಮ ಬುದ್ಧ ಹುಟ್ಟಿದ ದಿನವಾದ ವೈಶಾಖ ಮಾಸದ ಹುಣ್ಣಿಮೆ ದಿನ ಶ್ರದ್ಧಾ ಭಕ್ತಿಗಳಿಂದ ವಿರಾಗಿಯನ್ನು ಸ್ಮರಿಸಲಾಗಿದೆ.
ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದೆನಿಸಿರುವ ಬುದ್ಧ ಪೂರ್ಣಿಮಾವನ್ನು ಬುಧವಾರದಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ಗೌತಮ ಬುದ್ಧ ಹುಟ್ಟಿದ ದಿನವಾದ ವೈಶಾಖ ಮಾಸದ ಹುಣ್ಣಿಮೆ ದಿನ ಶ್ರದ್ಧಾ ಭಕ್ತಿಗಳಿಂದ ವಿರಾಗಿಯನ್ನು ಸ್ಮರಿಸಲಾಗಿದೆ.
ಕೋಪ, ಲೋಭ, ಮೌಢ್ಯಗಳನ್ನು ಸಂಪೂರ್ಣವಾಗಿ ಜಯಿಸಿದವನನ್ನು ಬುದ್ಧನೆಂದು ಕರೆಯುತ್ತಾರೆ. ಕೆಲವೊಮ್ಮೆ 'ಬುದ್ಧ' ಪದವನ್ನು ಕೇವಲ ಬೌದ್ಧಧರ್ಮದ ಸ್ಥಾಪಕನಾದ ಸಿದ್ದಾರ್ಥ ಗೌತಮನನ್ನು ಸೂಚಿಸಲು ಉಪಯೋಗಿಸಲ್ಪಡುತ್ತದೆ.
ಸಂಶೋಧನೆ,ತಿಳುವಳಿಕೆ,ಅನುಭವಿಸುವಿಕೆ ಮತ್ತು ಅದನ್ನು ಮತ್ತೆ ಮನನ ಮಾಡಿಕೊಳ್ಳುವುದು.ಇದುವೇ ಬುದ್ಧ ಧಮ್ಮ. [ಶುಭಸಂಕಲ್ಪ: ಸುಳ್ಳು ಆಪಾದನೆ ಎಂಬ ಮುಳ್ಳು ಚುಚ್ಚಿದರೆ...]
ಹಿಮಾಲಯದ ತಪ್ಪಲಿನಲ್ಲಿ ಬುದ್ಧ ಪೂರ್ಣಿಮಾ ಆಚರಣೆ ವಿಶೇಷ ವಾಗಿರುತ್ತದೆ. ಹಲವೆಡೆ ಸಾಂಪ್ರದಾಯಿಕ ದಿರಿಸುಗಳಲ್ಲಿ ಬೌದ್ಧ ಮತ ಅವಲಂಬಿಗಳು ಸಾಮ್ರಾಣಿ, ಗಂಧ ಧೂಪಗಳನ್ನು ಹಚ್ಚಿ ಪ್ರಾರ್ಥಿಸುತ್ತಾರೆ. ಗುಡ್ಡಗಾಡು ಪ್ರದೇಶ, ಹಿಮಾಲಯದ ತಪ್ಪಲಿನ ಚೈತಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.

ಬುದ್ಧನ ಆದರ್ಶದ ಹಾದಿ ಹಿಡಿಯಿರಿ
ಬುದ್ಧ ರಾಜ ವೈಭೋಗ ತ್ಯಜಿಸಿ ವಿರಾಗಿಯಾದ. ಹತ್ಯೆ ಮಾಡಲು ಬಂದವನಲ್ಲಿ ಪ್ರೀತಿ, ಕರುಣೆ ಹುಟ್ಟಿಸಿದ. ಸಂಘಟನೆಯ ಮಹತ್ವವನ್ನು ಜಗತ್ತಿಗೆ ಸಾರಿ ಹೇಳಿದ ಬುದ್ಧನ ಆದರ್ಶದ ಹಾದಿಯಲ್ಲಿ ಮುನ್ನಡೆಯಬೇಕಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ

ಆಲೋಚನಾ ರಹಿತ ಶುದ್ಧ ಜಾಗೃತ ಸ್ಥಿತಿ
ಧ್ಯಾನದ ಬಗ್ಗೆ ಬುದ್ಧ: ನಮ್ಮ ಆಲೋಚನೆ ಲಹರಿ ಸದಾ ಎಲ್ಲೆಡೆ ಹರಿಯುತ್ತಿರುತ್ತದೆ. ಮನಸ್ಸು ಚಂಚಲ ಎಂಬುದನ್ನು ಮತ್ತೆ ಮತ್ತೆ ಹೇಳಬೇಕಿಲ್ಲ. ಈ ಆಲೋಚನೆಗಳನ್ನು ತಡೆಹಿಡಿಯುವ ಕ್ರಮವೇ ಧ್ಯಾನ. ಸಂಪೂರ್ಣ ತಡೆ ಹಿಡಿಯಲ್ಪಟ್ಟ ಸ್ಥಿತಿಯೇ ಧ್ಯಾನಾವಸ್ಥೆ' ಎಂದನು ಬುದ್ಧನ ಪ್ರಕಾರ ಧ್ಯಾನ ಎಂದರೆ "ಆಲೋಚನಾ ರಹಿತ ಶುದ್ಧ ಜಾಗೃತ ಸ್ಥಿತಿ".
ಚಿತ್ರ : ಗುವಾಹಟಿಯ ಅಮಿನ್ ಗಾಂವ್ ನಲ್ಲಿ ಬೌದ್ಧ ಭಿಕ್ಷು ಬುದ್ಧವಿಹಾರದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ವಿಶ್ವದೆಲ್ಲೆಡೆ ಸಂಭ್ರಮ
ಬೋಧಿ ಮರದ ಕೆಳಗೆ ಬುದ್ಧನಿಗೆ ಜ್ಞಾನೋದಯವಾಗಿದ್ದು ತಿಳಿದಿರಬಹುದು. ಬಿಹಾರದ ಗಯಾದಲ್ಲಿರುವ ಈ ಪವಿತ್ರ ತಾಣಕ್ಕೆ ವಿಯೆಟ್ನಾಂನಿಂದ ಬಂದಿದ್ದ ಭಕ್ತ ಸಮೂಹ.

ಭಿಕ್ಕುಗಳ ಪ್ರವಚನ
ಬೆಳಗ್ಗೆ ಧ್ವಜಾರೋಹಣ, ವಿಶೇಷ ಪ್ರಾರ್ಥನೆ ನಂತರ ಭಿಕ್ಕುಗಳ ಪ್ರವಚನ ಎಲ್ಲೆಡೆ ಕೇಳಿ ಬಂದಿದೆ. ವಿಶ್ವದೆಲ್ಲಡೆ ಈ ಕ್ರಮ ಅನುಸರಿಸಲಾಗುತ್ತದೆ.
ಚಿತ್ರ: ಕೋಲ್ಕತಾದ ಹೌರಾದಲ್ಲಿ ಬುದ್ಧನ ಬೃಹತ್ ಪ್ರತಿಮೆ ಬಳಿ ಭಿಕ್ಕುಗಳಿಂದ ಪ್ರಾರ್ಥನೆ
|
ಶುಭ ಹಾರೈಸಿದ ಸಿದ್ದರಾಮಯ್ಯ
ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಬುದ್ಧಪೂರ್ಣಿಮಾ ಅಂಗವಾಗಿ ನಾಡಿನ ಜನತೆಗೆ ಶುಭ ಹಾರೈಸಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications