ಗುರು ಪೂರ್ಣಿಮಾ: ಶ್ರದ್ಧಾ ಭಕ್ತಿಯಿಂದ ಗುರುವಿಗೆ ನಮಿಸಿದ ಭಾರತ
ಬೆಂಗಳೂರು, ಜುಲೈ 09: ಆಷಾಢ ಶುದ್ಧ ಹುಣ್ಣಿಮೆಯ ದಿನವಾದ ಇಂದು ಗುರು ಪೂರ್ಣಿಮಾ ಹಬ್ಬವಾಗಿದ್ದು, ದೇಶದೆಲ್ಲೆಡೆ ಜಾತಿ, ಮತ, ಪಂಥಗಳ ಭೇದವಿಲ್ಲದೆ ಸಂಭ್ರಮಾಚರಣೆಯನ್ನು ಕಾಣಬಹುದು.
ಯಾರಿಂದಲೂ ಅಪಹರಿಸಲಾಗದ ಸಂಪತ್ತಾದ 'ವಿದ್ಯೆ' ಯನ್ನು ಧಾರೆ ಎರೆಯುವ ಸಮಾಜಕ್ಕೆ ಮಾದರಿ ವ್ಯಕ್ತಿಗಳನ್ನು ರೂಪಿಸುವ ಕಿಂಗ್ ಮೇಕರ್ ಗಳಾದ ಗುರುಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಟ್ವಿಟ್ಟರ್ ನಲ್ಲಿ ವಂದನೆ ಸಲ್ಲಿಸಿದ್ದಾರೆ...
ಗುರು ಪೂರ್ಣಿಮಾ ದಿನದಂದು ಸನ್ಮಾರ್ಗ ತೋರಿದ ಆಧ್ಯಾತ್ಮಿಕ ಹಾಗೂ ಶೈಕ್ಷಣಿಕ ಗುರುಗಳನ್ನು ವಂದಿಸಲಾಗುತ್ತದೆ. ಬೌದ್ಧ ಧರ್ಮಗುರು ಗೌತಮ ಬುದ್ಧ ಹಾಗೂ ಮಹಾಭಾರತದ ಕರ್ತೃ ವೇದವ್ಯಾಸ ಮಹರ್ಷಿ ಇಬ್ಬರು ಇದೇ ದಿನದಂದು ಜನಿಸಿರುವುದು ವಿಶೇಷ
ಅಜ್ಞಾನ, ಅಂಧಕಾರವನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ನೀಡುವವನು 'ಗುರು' ಎನಿಸಿಕೊಳ್ಳುತ್ತಾನೆ. ವಿದ್ಯಾ ಸಂಸ್ಥೆಗಳ ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಭೇಟಿ ಆಗಿ ಅವರಿಗೆ ಕಾಣಿಕೆಗಳನ್ನು ಅರ್ಪಿಸಿ ತಮ್ಮ ಕೃತಜ್ಞತೆಗಳನ್ನು ಸಲ್ಲಿಸುತ್ತಾರೆ.

ಮೊರದಾಬಾದಿನಲ್ಲಿ ಪೂಜೆ
ಉತ್ತರಪ್ರದೇಶದ ಮೊರದಾಬಾದಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಶಾಲೆಗಳಲ್ಲಿ ತಮ್ಮಶಿಕ್ಷಕರನ್ನು ಪೂಜಿಸಿ, ಆರತಿ ಬೆಳಗಿ ಭಕ್ತಿಯಿಂದ ಆರಾಧಿಸಿದ ವಿದ್ಯಾರ್ಥಿ ವೃಂದ.

ಅಲಹಾಬಾದ್
ಅಲಹಾಬಾದಿನ ಸಂಗಮದಲ್ಲಿ ಗುರು ಪೂರ್ಣಿಮಾದ ಅಂಗವಾಗಿ ವಿಶೇಷ ಪೂಜೆ, ಆರತಿ ನಡೆಸಲಾಗುತ್ತದೆ.

ಅಹಮದಾಬಾದ್
ಅಹಮದಾಬಾದಿನ ಆಶ್ರಮವೊಂದರಲ್ಲಿ ವಿಶಿಷ್ಟವಾಗಿ ನಡೆದ ಗುರುಪೂರ್ಣಿಮಾ ಸಂಭ್ರಮಾಚರಣೆ.

ಮಥುರಾ
ಮಥುರಾದಲ್ಲಿ ಗುರು ಪೂರ್ಣಿಮಾದ ಅಂಗವಾಗಿ ಗೋವರ್ಧನ ಪರಿಕ್ರಮ ಪ್ರತಿ ವರ್ಷ ನಡೆಯುತ್ತದೆ.

ಬೇಲೂರು ಮಠ
ಪಶ್ಚಿಮ ಬಂಗಾಲದ ಬೇಲೂರಿನ ರಾಮಕೃಷ್ಣ ಮಠದಲ್ಲಿ ಗುರು ಪೂರ್ಣಿಮಾ ಸಂಭ್ರಮ.
|
ನರೇಂದ್ರ ಮೋದಿ
ಗುರುಪೂರ್ಣಿಮಾ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ
|
ಗುರು ಪೂರ್ಣಿಮಾ ಆಚರಣೆ
ಗುರು ಪೂರ್ಣಿಮಾ ಆಚರಣೆ ಸಂದರ್ಭದಲ್ಲಿ ಬಂದಿರುವ ಟ್ವೀಟ್ಸ್, ಜ್ಞಾನವನ್ನು ಎಲ್ಲಾ ಮೂಲಗಳಿಂದ ಪಡೆದುಕೊಳ್ಳುವುದರ ಮಹತ್ವವನ್ನು ಸಾರುವ ಟ್ವೀಟ್ಸ್.
|
ಹಳೆ ಚಿತ್ರ
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ತಮ್ಮ ಗುರು ರಮಾಕಾಂತ್ ಅರ್ಚೆಕರ್ ಜತೆಗಿರುವ ಹಳೆ ಚಿತ್ರವನ್ನು ಟ್ವೀಟ್ ಲೋಕ ಹಂಚಿಕೊಂಡಿದೆ.
|
ಗುರು ವಂದನೆ ಕಾರ್ಯಕ್ರಮ
ಎಲ್ಲೆಡೆಯಿಂದ ಗುರು ಪೂರ್ಣಿಮಾ ಅಂಗವಾಗಿ ಗುರು ವಂದನೆ ಕಾರ್ಯಕ್ರಮ ಆಯೋಜನೆಗೊಂಡಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications