ಸ್ವಾತಂತ್ರ್ಯ ದಿನೋತ್ಸವ: ಹುಟ್ಟುಹಬ್ಬ ಆಚರಣೆಗೆ ಸಜ್ಜಾದ ಭಾರತ
ನವದೆಹಲಿ, ಆಗಸ್ಟ್ 14: ವಿಶ್ವದ ಅತಿದೊಡ್ಡ ಗಣರಾಜ್ಯ ಭಾರತಕ್ಕೆ ಸ್ವತಂತ್ರ ಬಂದು 67 ವರ್ಷಗಳು ಕಳೆದರೂ ಬಡತನ, ನಿರುದ್ಯೋಗ, ಅನಕ್ಷರತೆ, ಭ್ರಷ್ಟಾಚಾರ, ಮಹಿಳೆ ಮಕ್ಕಳ ಮೇಲೆ ದೌರ್ಜನ್ಯದಿಂದ ಮುಕ್ತವಾಗಿಲ್ಲ. ನಕ್ಸಲರು, ಉಗ್ರರ ಜತೆ ಕಾದಾಟದ ಜತೆಗೆ ಕೋಮು ಗಲಭೆಗಳು, ರಾಜ್ಯ ವಿಭಜನೆಯ ಕೂಗು ಕಾಡುತ್ತಲೇ ಇದೆ. ಎಲ್ಲದರ ನಡುವೆ ಭಾರತ ಮತ್ತೊಮ್ಮೆ ಜನ್ಮದಿನ ಆಚರಣೆಗೆ ಸಜ್ಜಾಗಿದೆ.
ಅತ್ಯಂತ ಹೆಚ್ಚಿನ ಯುವ ಶಕ್ತಿಯನ್ನು ಹೊಂದಿರುವ ದೇಶವಾಗಿರುವ ಭಾರತ ಇಂದಿಗೂ ಕೃಷಿ ಪ್ರಧಾನ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿದೆ. ಅಣುಶಕ್ತಿ, ಕ್ರಿಕೆಟ್, ವಿಜ್ಞಾನ, ತಂತ್ರ ಜ್ಞಾನ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ.[ಆ.14ರಂದೇ ಪಾಕಿಸ್ತಾನದ ಸ್ವತಂತ್ರ ದಿನಾಚರಣೆ ಏಕೆ?]
ಅಭೂತಪೂರ್ವ ಭದ್ರತೆಯ ನಡುವೆ ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಸಜ್ಜಾಗುತ್ತಿದ್ದಾರೆ. [ಜಾಲತಾಣಗಳಲ್ಲಿ ನಿರಾತಂಕವಾಗಿ ಧ್ವಜ ಪ್ರದರ್ಶಿಸಿ]
ಬೆಂಗಳೂರಿನಲ್ಲಿ ಮಾಣೆಕ್ ಶಾ ಪೆರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎಂದಿನಂತೆ ಜನತೆಗೆ ಭರವಸೆ ನೀಡುವ ಭಾಷಣ ಮಾಡಲಿದ್ದಾರೆ. ದೇಶದ ಹಲವೆಡೆ ಸಂಭ್ರಮದ ಹುಟ್ಟುಹಬ್ಬ ಆಚರಣೆಗೆ ನಡೆದಿರುವ ಪೂರ್ವ ತಯಾರಿ ಚಿತ್ರಗಳು ಇಲ್ಲಿವೆ. ಚಿತ್ರಗಳ ಕೃಪೆ: ಪಿಟಿಐ.

ಹೈದರಾಬಾದಿನಲ್ಲಿ ಪೊಲೀಸ್ ಅಧಿಕಾರಿಗಳು
ಹೈದರಾಬಾದಿನಲ್ಲಿ ಪೊಲೀಸ್ ಅಧಿಕಾರಿಗಳು ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಸಮವಸ್ತ್ರ ಧರಿಸಿ ಸಿದ್ಧರಾಗಿದ್ದಾರೆ. ಗೋಲ್ಕೊಂಡದ ಕೋಟೆಯಲ್ಲಿ ಕುಳಿತ ದೃಶ್ಯ.

ಅಮೃತ್ ಸರ್ ನಲ್ಲಿ ಶಾಲಾ ಮಕ್ಕಳ ಸಂಭ್ರಮ
ಅಮೃತ್ ಸರ್ ನಲ್ಲಿ ಶಾಲಾ ಮಕ್ಕಳು ಸ್ವತಂತ್ರ ದಿನಕ್ಕಾಗಿ ಸಂಭ್ರಮದಿಂದ ತಯಾರಾಗುತ್ತಿದ್ದಾರೆ. ಸಾಂಪ್ರದಾಯಿಕ ಪಂಜಾಬಿ ಉಡುಗೆಗಳನ್ನು ತೊಟ್ಟ ವಿದ್ಯಾರ್ಥಿನಿಯರು ಗುರು ನಾನಕ್ ಸ್ಟೇಡಿಯಂನಲ್ಲಿ ಕಂಡು ಬಂದಿದ್ದು ಹೀಗೆ

ಪಶ್ಚಿಮ ಬಂಗಾಲದ ಗ್ರಾಮದ ಮಕ್ಕಳು
ಪಶ್ಚಿಮ ಬಂಗಾಲದ ದಕ್ಷಿಣ ದಿನಾಜ್ ಪುರ್ ಬಳಿಯ ಗ್ರಾಮದ ಮಕ್ಕಳು ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸುತ್ತಿರುವ ಚಿತ್ರ.

ನವದೆಹಲಿಯಲ್ಲಿ ಸಂಸತ್ತು ಅಲಂಕೃತಗೊಂಡಿದೆ
ನವದೆಹಲಿಯಲ್ಲಿ ಸಂಸತ್ತು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದೆ.PTI Photo by Kamal Singh

ಗುವಾಹಟಿಯಲ್ಲಿ ಬಿಗಿ ಭದ್ರತೆ
ಅಸ್ಸಾಂನ ಗುವಾಹಟಿಯಲ್ಲಿ ಶುಕ್ರವಾರದಂದು ಬಾಂಬ್ ಸ್ಫೋಟದ ಸಂಚನ್ನು ವಿಫಲಗೊಳಿಸಲಾಗಿದೆ. ಸರಾಯಿಘಾಟ್ ಸೇತುವೆ ಮೇಲೆ ರೈಲ್ವೆ ಟ್ರ್ಯಾಕ್ ಕಾಯುತ್ತಿರುವ ಯೋಧರು.

ಕೆಂಪುಕೋಟೆ ಬಳಿ ಪರೇಡ್ ಗೆ ಸಿದ್ಧತೆ
ಕೆಂಪುಕೋಟೆ ಬಳಿ ಪರೇಡ್ ಗೆ ಸಿದ್ಧತೆ ಪೂರ್ಣಗೊಂಡಿದೆ. ಭಾರತೀಯ ಜಲಸೇನೆಯ ಯೋಧರ ಮ್ಯೂಸಿಕ್ ಬ್ಯಾಂಡ್ ತಂಡ ಪಥ ಸಂಚಲನದ ತಾಲೀಮು ನಡೆಸಿದ್ದು ಹೀಗೆ

ಬೆಂಗಾಲದ ಹಸಿರು ಪರಿಸರದಲ್ಲಿ ತ್ರಿವರ್ಣ ಧ್ವಜ
ಪಶ್ಚಿಮ ಬೆಂಗಾಲದ ಬಿರ್ ಬಮ್ ನ ಪಾರುಯಿ ಪ್ರದೇಶದಲ್ಲಿ ಹಸಿರು ಪರಿಸರದಲ್ಲಿ ತ್ರಿವರ್ಣ ಧ್ವಜ ಹಿಡಿದು ಹೊರಟ ಮಕ್ಕಳು.

ದಾರ್ಜಲಿಂಗ್ ನಿಂದ್ ಬಂದ ನೃತ್ಯಗಾರರು
ದಾರ್ಜಲಿಂಗ್ ನಿಂದ್ ಬಂದ ನೃತ್ಯಗಾರರು ಸ್ವಾತಂತ್ರೋತ್ಸವ ದಿನಕ್ಕಾಗಿ ತಯಾರಿ ನಡೆಸಿದ್ದಾರೆ. PTI Photo by Swapan Mahapatra

ಅಲಂಕಾರಗೊಂಡ ಬಣ್ಣದ ಚಿಲುಮೆ
ಸಂಸತ್ತಿನ ಮುಂದುಗಡೆ ಇರುವ ಚಿಲುಮೆ ಈಗ ಬಣ್ಣಗಳಿಂದ ಕಂಗೊಳಿಸುತ್ತಿದೆ. ಗುರುವಾರ ರಾತ್ರಿ ಚಿಲುಮೆ ಕಾಣಿಸಿದ್ದು ಹೀಗೆ PTI Photo by Kamal Singh

ಕೋಲ್ಕತ್ತಾದಲ್ಲಿ ಸಾಂಪ್ರದಾಯಿಕ ವಾದ್ಯ, ನೃತ್ಯ
ಕೋಲ್ಕತ್ತಾದಲ್ಲಿ ಸಾಂಪ್ರದಾಯಿಕ ವಾದ್ಯ, ನೃತ್ಯ, ಗೀತ ನಾಯನದ ತಯಾರಿ.
-
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ












Click it and Unblock the Notifications