ಚಿತ್ರಗಳು: ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರರಿಗೆ ನಮನ
Recommended Video

ಬೆಂಗಳೂರು, ಜುಲೈ 26: ಕಾರ್ಗಿಲ್ ಯುದ್ಧದಲ್ಲಿ ಶೌರ್ಯ ಮೆರೆದು ಪ್ರಾಣತೆತ್ತ ಭಾರತದ ಹೆಮ್ಮೆಯ ಕಲಿಗಳ ನೆನಪಿಗಾಗಿ ಜುಲೈ 26ರಂದು ಭಾರತ ಕಾರ್ಗಿಲ್ ವಿಜಯ್ ದಿವಸ್ ಆಚರಿಸುತ್ತಿದೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ನಿಯಂತ್ರಣಾ ಗಡಿಯನ್ನು ದಾಟಿ ಭಾರತದೊಳಗೆ ಶತ್ರುಪಡೆ ಪ್ರವೇಶಿಸಿದಾಗ 1999ರ ಮೇ 8ರಂದು ಅಧಿಕೃತವಾಗಿ ಯುದ್ಧ ಆರಂಭವಾಗಿತ್ತು.
ಸತತ ಮೂರು ತಿಂಗಳ ಕಾಲ ನಡೆದ ಯುದ್ಧ ಜು.4ರಂದು, ಟೈಗರ್ ಹಿಲ್ ವಶಕ್ಕೆ ಪಡೆಯುವುದರೊಂದಿಗೆ ಕೊನೆಗೊಂಡಿತ್ತು. ದ್ರಾಸ್ ಪ್ರದೇಶ, ಪೂರ್ವ ಶ್ರೀನಗರದ ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಂಡ ಭಾರತೀಯ ಸೇನೆ ಜು.26ರಂದು ಟೈಗರ್ ಹಿಲ್ ಮೇಲೆ ತ್ರಿವರ್ಣ ಧ್ವಜ ಹಾರಿಸಿತ್ತು.
ಅಮೆರಿಕದ ಅಂದಿನ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ಮಧ್ಯಸ್ಥಿಕೆಯಿಂದಾಗಿ ಪಾಕಿಸ್ತಾನದ ಅಂದಿನ ಪ್ರಧಾನಿ ನವಾಜ್ ಷರೀಫ್ ಅವರು ಪಾಕಿಸ್ತಾನಿ ಸೇನೆಯನ್ನು ಹಿಂತೆಗೆದುಕೊಂಡಿದ್ದರು.
ಭಾರತದ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಜು.26ರನ್ನು 'ಕಾರ್ಗಿಲ್ ವಿಜಯ್ ದಿವಸ್' ಎಂದು ಷೋಘಿಸಿದರು. ಯುದ್ಧದಲ್ಲಿ ಮಡಿದ 527 ಹುತಾತ್ಮ ಯೋಧರ ನೆನಪಿಗಾಗಿ ಈ ದಿನವನ್ನು ಸಮರ್ಪಿಸಲಾಗಿದೆ. ಯೋಧರ ನೆನಪಿಗಾಗಿ ದ್ರಾಸ್ ನಲ್ಲಿ ಯುದ್ಧ ಸ್ಮಾರಕ ಸ್ಥಾಪಿಸಲಾಗಿದೆ.

ಭಾರತದ ಹೆಮ್ಮೆಯ ಕಲಿಗಳ ನೆನಪಿನ ದಿನ
ನವದೆಹಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೂ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ ಹಾಗೂ ಜಲ ಸೇನೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಅವರ ಜತೆ ಅಮರ್ ಜವಾನ್ ಸ್ಮಾರಕದ ಬಳಿ ಗ್ರೂಪ್ ಫೋಟೊ.

ಪಾಟ್ನದಲ್ಲಿ ಕಾರ್ಗಿಲ್ ಯೋಧರಿಗೆ ನಮನ
ಪಾಟ್ನ: ಎನ್ ಸಿ ಸಿ ಕೆಡೆಟ್ ಗಳು ಷಹೀದ್ ಇ ಕಾರ್ಗಿಲ್ ಸ್ಮಾರಕದ ಬಳಿ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಮನ ಸಲ್ಲಿಸಿದರು.

ಶ್ವೇತಾಶ್ವ ತಂಡದಿಂದ ಯೋಧರಿಗೆ ನಮನ
ನವದೆಹಲಿ : ಭಾರತೀಯ ಸೇನೆಯ ಶ್ವೇತಾಶ್ವ ತಂಡ ಸದಸ್ಯರು ಕಾರ್ಗಿಲ್ ಯುದ್ಧ ಸ್ಮಾರಕದ ಬಳಿ ಗುಂಪಿನ ಫೋಟೋ ತೆಗೆಸಿಕೊಂಡಿದ್ದು ಹೀಗೆ...

ನಾಗಪುರದಲ್ಲಿ ಹುತಾತ್ಮರಿಗೆ ನಮನ
ನಾಗಪುರ್ : ಮೇಜರ್ ಜನರಲ್ ರಾಜೇಶ್ ಕುಂದ್ರಾ, ಅವರು 'ಆಪರೇಷನ್ ವಿಜಯ್' ಯಶಸ್ವಿಯಾಗಿ ಪೂರೈಸಿದ ಸವಿನೆನಪಿಗಾಗಿ ಜುಲೈ 26ರಂದು ಆಚರಿಸುವ ಕಾರ್ಗಿಲ್ ವಿಜಯ್ ದಿವಸ್ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಹುತಾತ್ಮ ಯೋಧರ ಕುಟುಂಬದವರಿಗೆ ಸನ್ಮಾನ
ಜಮ್ಮು : ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಅವರು ಕಾರ್ಗಿಲ್ ಹುತಾತ್ಮರ ಕುಟುಂಬದವರಿಗೆ ಸನ್ಮಾನ ಮಾಡುವ ಮೂಲಕ ಕಾರ್ಗಿಲ್ ವಿಜಯ್ ದಿವಸ ಆಚರಿಸಿದರು.

ಜಮ್ಮುವಿನಲ್ಲಿ ಯೋಧರಿಗೆ ನಮನ
ಜಮ್ಮು : ಯುದ್ಧದಲ್ಲಿ ಪ್ರಾಣತೆತ್ತ ವೀರ ಯೋಧರಿಗೆ ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ನಮಿಸಿದ ಯೋಧರು
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications