ದೇಶ ಕಾಯುವ ವೀರ ಯೋಧರಿಗೆ ರಕ್ಷಾ ಬಂಧನ ಸಂಭ್ರಮ
ನವದೆಹಲಿ, ಆಗಸ್ಟ್, 17: ಸಹೋದರ ಮತ್ತು ಸಹೋದರಿಯರ ನಡುವಿನ ಅನುಬಂಧವನ್ನು ಹೆಚ್ಚಿಸುವ ರಕ್ಷಾ ಬಂಧನ ಹಬ್ಬಕ್ಕೆ ದೇಶವೇ ಸಜ್ಜಾಗಿದೆ. ದೇಶದ ಗಡಿ ಕಾಯುವ ಸೈನಿಕರಿಗೆ ಮಕ್ಕಳು ರಾಖಿ ಕಟ್ಟಿ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು.
ರಕ್ಷಾ ಬಂಧನವನ್ನು ಆಚರಿಸುವ ರಾಖಿ ಶ್ರಾವಣ ಹುಣ್ಣಿಮೆ ಭಾರತದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲ್ಪಟ್ಟಿದೆ. ರಾಖಿ ಕಟ್ಟುವುದರ ಜೊತೆಗೆ ಈ ಪೌರ್ಣಮಿಯಂದು ಹಲವಾರು ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತವೆ. ಉತ್ತರ ಭಾರತದಲ್ಲಿ ರಾಖಿ ಪೂರ್ಣಿಮೆಯನ್ನು ಕಜರಿ ಪೂರ್ಣಿಮೆಯೆಂದು ಸಹ ಕರೆಯುತ್ತಾರೆ. ಈ ಸಮಯದಲ್ಲಿ ಗೋಧಿ ಮತ್ತು ಬಾರ್ಲಿಯನ್ನು ಬಿತ್ತಲಾಗುತ್ತದೆ ಮತ್ತು ಭಗವತಿ ದೇವಿಯನ್ನು ಆರಾಧಿಸಲಾಗುತ್ತದೆ.[ಸಹೋದರಿಯ ಮನಗೆಲ್ಲಲು ಎಲ್ಲಿಯೂ ಹೋಗಬೇಕಿಲ್ಲ!]
ಪಶ್ಚಿಮ ಭಾರತದಲ್ಲಿ ಇದನ್ನು ನಾರಿಯಲ್ ಪೂರ್ಣಿಮಾ ಎಂದು ಆಚರಿಸುತ್ತಾರೆ. ಅಂದು ಸಮುದ್ರ ದೇವನಾದ ವರುಣನಿಗೆ ತೆಂಗಿನ ಕಾಯಿಯನ್ನು ಅರ್ಪಿಸಲಾಗುತ್ತದೆ. ಇನ್ನು ದಕ್ಷಿಣ ಭಾರತದಲ್ಲಿ ಇದನ್ನು ಶ್ರಾವಣ ಪೌರ್ಣಮಿಯೆಂದು ಆಚರಿಸಲಾಗುತ್ತದೆ. ಹಬ್ಬದ ಚಿತ್ರಗಳನ್ನು ಮುಂದೆ ನೋಡಿ..(ಪಿಟಿಐ ಚಿತ್ರಗಳು)

ಮಕ್ಕಳ ರಾಖಿ ಹಬ್ಬ
ಸೂರತ್ ನ ಶಾಲೆಯಲ್ಲಿ ಮಕ್ಕಳು ರಾಖಿ ಹಬ್ಬವನ್ನು ಆಚರಿಸಿದರು.

ಸೈನಿಕರಿಗೆ ವಂದನೆ
ದೇಶದ ಗಡಿಯನ್ನು ಹಗಲಿರುಳು ಕಾಯುವ ಸೈನಿಕರಿಗೆ ಗೌರವ ಸಲ್ಲಿಕೆ ಮಾಡಿದ ಮಕ್ಕಳು.

ಕೇಂದ್ರ ಸಚಿವೆ
ಕೇಂದ್ರ ಆಹಾರ ಸಂಸ್ಕರಣಾ ಸಚಿವೆ ಹರಮೀತ್ ಕೌರ್ ಸೇನಾಪಡೆಯ ಯೋಧರೊಂದಿಗೆ ಹಬ್ಬ ಆಚರಿಸಿದರು.

ಸೇನೆಯಲ್ಲೂ ಹಬ್ಬ
ಮಹಿಳಾ ಸೈನಿಕರು ಭಾರತೀಯ ಸೇನೆಯ ಪುರುಷ ಸೈನಿಕರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದುಕೊಂಡರು.

ಪಾಟ್ನಾ
ಬಿಹಾರದ ಪಾಟ್ನಾದಲ್ಲಿ ಮಕ್ಕಳಿಂದ ಪೊಲೀಸ್ ಸಿಬ್ಬಂದಿಗೆ ರಾಖಿ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications