ಚಿತ್ರಗಳಲ್ಲಿ : ಸೋದರ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಸಂಭ್ರಮ
ಬೆಂಗಳೂರು, ಆಗಸ್ಟ್ 26: ಭಾರತದಾದ್ಯಂತ ಸಹೋದರರಿಗೆ ರಾಖಿ ಕಟ್ಟಿ ಸಹೋದರಿಯರು ಅಣ್ಣಂದಿರ ಆಶಿರ್ವಾದ ಪಡೆದರು. ಗಡಿ ಕಾಯುವ ಯೋಧರಿಗೂ ರಾಖಿ ಕಟ್ಟಿದ ಮಹಿಳೆಯರು ದೇಶದ ಒಳಿತಿಗೆ ಪ್ರಾರ್ಥಿಸಿದರು. ಅಣ್ಣ-ತಂಗಿಯರ ಅನುಬಂಧವನ್ನು ಹೆಚ್ಚಿಸುವ ರಕ್ಷಾ ಬಂಧನ ಹಬ್ಬದ ಸಂಭ್ರಮಾಚರಣೆಯಲ್ಲಿ ಇಡೀ ದೇಶವೇ ತೊಡಗಿದೆ.
ರಕ್ಷಾ ಬಂಧನವನ್ನು ಆಚರಿಸುವ ರಾಖಿ, ಶ್ರಾವಣ ಹುಣ್ಣಿಮೆ ಭಾರತದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲ್ಪಟ್ಟಿದೆ. ರಾಖಿ ಕಟ್ಟುವುದರ ಜೊತೆಗೆ ಈ ಪೌರ್ಣಮಿಯಂದು ಹಲವಾರು ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತವೆ. ಉತ್ತರ ಭಾರತದಲ್ಲಿ ರಾಖಿ ಪೂರ್ಣಿಮೆಯನ್ನು ಕಜರಿ ಪೂರ್ಣಿಮೆಯೆಂದು ಸಹ ಕರೆಯುತ್ತಾರೆ. ಈ ಸಮಯದಲ್ಲಿ ಗೋಧಿ ಮತ್ತು ಬಾರ್ಲಿಯನ್ನು ಬಿತ್ತಲಾಗುತ್ತದೆ ಮತ್ತು ಭಗವತಿ ದೇವಿಯನ್ನು ಆರಾಧಿಸಲಾಗುತ್ತದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೂ ಮಕ್ಕಳು ರಾಖಿ ಕಟ್ಟಿ ಸಂಭ್ರಮಿಸಿದರು. ಈ ಮೊದಲು ಪ್ರಧಾನಿ ಹಾಗೂ ರಾಷ್ಟ್ರಪತಿಗಳು ಟ್ವಿಟ್ಟರ್ ಮೂಲಕ ದೇಶದ ಜನರಿಗೆ ರಕ್ಷಾಬಂಧನದ ಶುಭ ಕೋರಿದ್ದರು. ಪ್ರಧಾನಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಯೂ ಜನತೆಗೆ ಶುಭಾಶಯ ಹೇಳಿದರು.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದರು. ಸಾಮಾನ್ಯ ಜನರಿಂದ ಹಿಡಿದು ಗಣ್ಯಮಾನ್ಯರವರೆಗೆ ರಕ್ಷಬಂಧನವನ್ನು ಆನಂದದಿಂದ ಆಚರಿಸುತ್ತಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ರಾಖಿ ಕಟ್ಟಿದ ಮಕ್ಕಳು
ನವದೆಹಲಿ: ಪುಟ್ಟ ಮಕ್ಕಳೊಂದಿಗೆ ರಾಖಿ ಹಬ್ಬ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ.

ರಾಷ್ಟ್ರಪತಿ ಭವನದಲ್ಲಿ ರಕ್ಷಾ ಬಂಧನ ಸಂಭ್ರಮ
ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನ್ ಆಚರಿಸಿಕೊಂಡರು.

ವೆಂಕಯ್ಯ ಅವರಿಗೆ ರಾಖಿ ಕಟ್ಟಿದ ಸುಷ್ಮಾ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಖಿ ಕಟ್ಟಿ ರಕ್ಷಾಬಂಧನ ಆಚರಿಸಿದರು.

ಲಕ್ನೋದಲ್ಲಿ ವಿಶಿಷ್ಟ ಅಚರಣೆ
ಲಕ್ನೋ: ಮಹಾಂತ, ಮಂಕಮೇಶ್ವರ್ ದೇಗುಲದ ಶ್ರೀಮಂತ ದಿವ್ಯಾಗಿರಿ ಮಹಾರಾಜ್ ನೇತೃತ್ವದ ತಂಡವು ರಕ್ಷಾ ಬಂಧನದ ಅಂಗವಾಗಿ ಗೋಮತಿ ನದಿ ತೀರದಲ್ಲಿ 2075 ರಾಖಿಗಳನ್ನು ಕಟ್ಟಿ, ಸಂಭ್ರಮಿಸಿದೆ.

ಜಲಂಧರ್ ನಲ್ಲಿ ಬಿಎಸ್ ಎಫ್ ಯೋಧರು
ಜಲಂಧರ್ : ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ ಎಫ್) ಯೊಧರಿಗೆ ರಕ್ಷಾ ಬಂಧನ ಕಟ್ಟಿ, ಸಂಭ್ರಮಿಸಲಾಯಿತು.

ಮಮತಾ ಬ್ಯಾನರ್ಜಿ ಅವರ ಸಂಭ್ರಮಾಚರಣೆ
ಪಶ್ಚಿಮ ಬಂಗಾಲದ ರಾಜ್ಯಪಾಲರಿಗೆ ರಾಖಿ ಕಟ್ಟಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ.

ದಿಲೀಪ್ ದಾಸ್ ಮಹರಾಜ್ ಗೆ ರಾಖಿ ಕಟ್ಟಿದ ಮುಸ್ಲಿಂ ಮಹಿಳೆ
ಅಹಮದಾಬಾದ್ : ಮುಸ್ಲಿಂ ಮಹಿಳೆಯೊಬ್ಬರು, ಜಗನ್ನಾಥ್ ದೇಗುಲದ ಪುರೋಹಿತ ದಿಲೀಪ್ ದಾಸ್ ಜೀ ಮಹರಾಜ್ ಗೆ ರಾಖಿ ಕಟ್ಟಿ ಸಂಭ್ರಮಿಸಿದರು.

ರಾಂಚಿಯಲ್ಲಿ ರಾಖಿ ಸಂಭ್ರಮ
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ರಘುಬೀರ್ ದಾಸ್ ಅವರಿಗೆ ರಕ್ಷೆ ಕಟ್ಟಿದ ಮಹಿಳೆ. ಪಿಟಿಐ ಚಿತ್ರಗಳು

ಬಿಹಾರದಲ್ಲಿ ಮರಕ್ಕೆ ರಾಖಿ ಕಟ್ಟಿದ ನಿತೀಶ್
ಬಿಹಾರದಲ್ಲಿ ಮರಕ್ಕೆ ರಾಖಿ ಕಟ್ಟಿದ ಜೆಡಿಯು ಮುಖಂಡ ನಿತೀಶ್ ಕುಮಾರ್.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications