ಚಿತ್ರಗಳಲ್ಲಿ : ಗಲ್ಲಿ ಗಲ್ಲಿಗಳಲ್ಲಿ ನಂದಲೋಲನ ಲೀಲೆ
ಬೆಂಗಳೂರು, ಆ.18: ವಿಶ್ವದೆಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ದೇವಸ್ಥಾನ, ಮನೆ, ಊರಿನ ಪ್ರಮುಖ ರಸ್ತೆಗಳಲ್ಲಿ, ಗಲ್ಲಿಗಲ್ಲಿಗಳಲ್ಲಿ, ಕೆಲವು ಕೃಷ್ಣಮಠಗಳಲ್ಲಿ ನಂದಲೋಲನನನ್ನು ಕೊಂಡಾಡಲಾಗಿದೆ. ಉಡುಪಿಯಲ್ಲಿ ಮಾತ್ರ ಸೌರಮಾನ ಪಂಚಾಂಗದಂತೆ ಕೃಷ್ಣನ ಹುಟ್ಟುಹಬ್ಬ ಆಚರಿಸಲಿದ್ದಾರೆ.
ಮಥುರಾ, ಪಂಡರಾಪುರ, ಗುರುವಾಯೂರು, ದ್ವಾರಕಾ ಮುಂತಾದ ಪ್ರದೇಶಗಳ ಶ್ರೀಕೃಷ್ಣ ದೇವಾಲಯಗಳಲ್ಲಿ ಸಂಭ್ರಮ, ಸಡಗರದ ಜನ್ಮಾಷ್ಟಮಿ ಹಬ್ಬದ ಆಚರಣೆ ಕಂಡು ಬಂದಿದೆ. ಮಥುರಾ ನಗರಿಯಲ್ಲಿ ಹಿಂದೂ, ಮುಸ್ಲಿಂ ಭಾವೈಕ್ಯತೆಯ ಸಂಕೇತ ಎನ್ನುವಂತೆ ಮುಸ್ಲಿಂ ಭಾಂದವರು ಭಕ್ತಿ, ಸಡಗರದಲ್ಲಿ ಕೃಷ್ಣನ ಸೇವೆಗೆ ನಿಲ್ಲುತ್ತಾರೆ.ಇದೇ ರೀತಿ ಚಿತ್ರಣ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಂಡು ಬಂದಿದ್ದು ಮುಸ್ಲಿಂ ಮಕ್ಕಳು ಕೂಡಾ ಕೃಷ್ಣ ವೇಷಧಾರಿಯಾಗಿ ಸ್ಪರ್ಧಿಯಲ್ಲಿ ಭಾಗವಹಿಸಿ ಗಮನ ಸೆಳೆದರು. ವಿಟ್ಲ ಪಿಂಡಿ ಆಚರಣೆಯೂ ಸೋಮವಾರ ನಡೆದಿದೆ.[ಸರ್ಕಾರದಿಂದಲೇ ಕೃಷ್ಣ ಜನ್ಮಾಷ್ಟಮಿ ಆಚರಣೆ]
'ನಾವು ಮತ್ತು ಹಿಂದೂ ಬಾಂಧವರು ಸೋದರರಂತೆ ಇರುತ್ತೇವೆ. ಕೋಮು ಗಲಭೆಗೆ ಕಾರಣರಾಗುವುದು ರಾಜಕಾರಿಣಿಗಳು. ದೇಶದ ಯಾವುದೇ ಭಾಗದಲ್ಲೂ ಕೋಮು ಗಲಭೆ ನಡೆದರೂ ನಮ್ಮ ಸಂಬಂಧದ ನಡುವೆ ಯಾವುದೇ ಒಡಕು ಉಂಟಾಗುವುದಿಲ್ಲ' ಎನ್ನುತ್ತಾರೆ ಮಥುರಾದ ಸ್ಥಳೀಯ ಮುಸ್ಲಿಂ ನಿವಾಸಿಗಳು. ಈ ಬಾರಿ ಕಾಶ್ಮೀರದ ಪಂಡಿತರನ್ನು ಒಟ್ಟು ಮಾಡಿ ಶ್ರೀನಗರದಲ್ಲಿ ಇಸ್ಕಾನ್ ಸಂಭ್ರಮಾಚರಣೆ ಸಂಭ್ರಮದ ಕೃಷ್ಣ ಜನ್ಮದಿನೋತ್ಸವದ ಚಿತ್ರಗಳು ಇಲ್ಲಿವೆ...

ಶ್ರೀನಗರದಲ್ಲಿ ಕಾಶ್ಮೀರಿ ಪಂಡಿತರ ಸಂಭ್ರಮ
ಶ್ರೀಕೃಷ್ಣ ಜನ್ಮಾಷ್ಟಮಿದಲ್ಲಿ ಪಾಲ್ಗೊಂಡ ಕಾಶ್ಮೀರಿ ಪಂಡಿತರು, ಲಾಲ್ ಚೌಕ್ ನಲ್ಲಿ ಜನ್ಮಾಷ್ಟಮಿ ಮೆರವಣಿಗೆ ಆಯೋಜಿಸಿದ್ದ ಇಸ್ಕಾನ್, PTI Photo by S Irfan

ಮಥುರಾ ಸಂಸದೆ ಹೇಮಾಮಾಲಿನಿ ಪೂಜೆ
ಮಥುರಾದಲ್ಲಿ ಸ್ಥಳೀಯ ಸಂಸದೆ ಹೇಮಾಮಾಲಿನಿ ಅವರು ಪೂಜೆ ಸಲ್ಲಿಸಿದರು.

ಮೊಸರು ಕುಡಿಕೆ ಒಡೆಯುವ ಆಟ
ಮುಂಬೈನಲ್ಲಿ ಕೋರ್ಟ್ ಅನುಮತಿ ಸಿಕ್ಕಿದ ಮೇಲೇ ಚಿಣ್ಣರು ಕೂಡಾ ಮೊಸರು ಕುಡಿಕೆ ಒಡೆಯುವ ಆಟದಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ ದೃಶ್ಯ ಕಂಡು ಬಂದಿತು. PTI Photo by Mitesh Bhuvad

ಜನ್ಮಾಷ್ಟಮಿ ಸಂಭ್ರಮದಲ್ಲಿ ಮಥುರಾ
ಶ್ರೀಕೃಷ್ಣನ ನಗರಿ ಮಥುರಾ ವಿದ್ಯುತ್ ಅಲಂಕಾರದಲ್ಲಿ ಕಂಗೊಳಿಸುತ್ತಿದೆ. ಮಥುರಾದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಭಾನುವಾರದಿಂದ ಆರಂಭವಾಗಿದೆ.

ನವದೆಹಲಿಯಲ್ಲಿ ಜನ್ಮಾಷ್ಟಮಿ ಸಂಭ್ರಮ
ನವದೆಹಲಿಯಲ್ಲಿ ಬಿರ್ಲಾ ಮಂದಿರದಲ್ಲಿ ಜನರು ಕೃಷ್ಣ ಜನ್ಮಾಷ್ಟಮಿ ಆಚರಿಸಿದರು. PTI Photo by Shahbaz Khan

ಉತ್ತರಪ್ರದೇಶದ ಸಿಎಂರಿಂದ ಪೂಜೆ
ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕೃಷ್ಣಪೂಜೆಯಲ್ಲಿ ತೊಡಗಿದ್ದಾರೆ. PTI photo by Nand kumar

ವಸುದೇವ ಹಾಗೂ ಕೃಷ್ಣನ ವೇಷ
ನವದೆಹಲಿಯಲ್ಲಿ ಬಾಲ ಕೃಷ್ಣನ ಹೊತ್ತ ವಸುದೇವನ ವೇಷ ಧರಿಸಿದ ಭಕ್ತ

ಕಾಶ್ಮೀರದಲ್ಲಿ ಕೃಷ್ಣನ ಅವತಾರ
ಕಾಶ್ಮೀರದಲ್ಲಿ ಕೃಷ್ಣನ ಅವತಾರವಾದಂತೆ ಎಲ್ಲರ ಮೊಗದಲ್ಲಿ ಸಂಭ್ರಮ ಮನೆಮಾಡಿತ್ತು. ಕೃಷ್ಣನ ವೇಷತೊಟ್ಟ ಪುಟ್ಟ ಕಂದನ ಫೋಟೋ ತೆಗೆಯುವುದೇ ಎಲ್ಲರಿಗೂ ಖುಷಿ ವಿಚಾರವಾಗಿತ್ತು.

ಜೈಪುರದಲ್ಲಿ ಕೃಷ್ಣ ವೇಷ ಸ್ಪರ್ಧೆ
ಜೈಪುರದಲ್ಲಿ ಕೃಷ್ಣ ವೇಷ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವ ಚಿಣ್ಣರು

ಜಮ್ಮುವಿನಲ್ಲಿ ಕೃಷ್ಣಂ ವಂದೇ ಜಗದ್ಗುರಂ
ಜಮ್ಮುವಿನಲ್ಲಿ ಕೃಷ್ಣಂ ವಂದೇ ಜಗದ್ಗುರಂ ಭಜನೆ ಜೋರಾಗಿ ನಡೆಯಿತು.

ನವದೆಹಲಿಯ ಬಿರ್ಲಾ ಮಂದಿರ
ದೀಪಗಳಿಂದ ಅಲಂಕಾರಗೊಂಡ ನವದೆಹಲಿಯ ಬಿರ್ಲಾ ಮಂದಿರ

ಮೊಸರು ಕುಡಿಕೆ ಒಡೆಯುವ ಸ್ಪರ್ಧೆ
ಮುಂಬೈನ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಗೋವಿಂದ ಮಂಡಲ್ ನಿಂದ PTI Photo by Mitesh Bhuvad

ಢಾಕಾದಲ್ಲಿ ಕೃಷ್ಣನ ಮೆರವಣಿಗೆ
ಬಾಂಗ್ಲಾದೇಶದ ಢಾಕಾದಲ್ಲಿ ಕೃಷ್ಣನ ಮೆರವಣಿಗೆ ಸಾಗಿದ್ದು ಹೀಗೆ... ಹಿಂದೂ ಭಕ್ತಾದಿಗಳು ಸಂಭ್ರಮದಿಂದ ಕೃಷ್ಣ ವೇಷಧಾರಿ ಕಂದನನ್ನು ಹೊತ್ತು ತಿರುಗಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications