ಇತರೆ ದೇಶಗಳಂತೆ ಭಾರತದಲ್ಲೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ: ಶಿವನ್
ಬೆಂಗಳೂರು, ಜೂನ್ 25: ಬೇರೆ ದೇಶಗಳಂತೆ ಭಾರತದಲ್ಲೂ ಕೂಡ ಬಾಹ್ಯಾಕಾಶ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ ನೀಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಕೆ. ಶಿವನ್ ಹೇಳಿದ್ದಾರೆ.
Recommended Video
ರಾಕೆಟ್ ಮತ್ತು ಉಪಗ್ರಹ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ತರಲು ಹೊರಟಿರುವ ಸುಧಾರಣಾ ನೀತಿಗಳ ಕುರಿತು ಮಾಹಿತಿ ನೀಡಿದರು. ಪ್ರಮುಖವಾಗಿ ಬಾಹ್ಯಾಕಾಶ ಕ್ಷೇತ್ರ ಖಾಸಗೀಕರಣದ ಬಗ್ಗೆ ಕೆ ಶಿವನ್ ಮಾಹಿತಿ ನೀಡಿದರು.
ಖಾಸಗಿ ಚಟುವಟಿಕೆಗಳು ಸ್ವಾಯತ್ತವಾಗಿ ಕಾರ್ಯ ನಿರ್ವಹಿಸುತ್ತವೆ. ಈ ಸಂಸ್ಥೆಗಳಿಗೆ ಇಸ್ರೊ ನೋಡಲ್ ಏಜೆನ್ಸಿಯಾಗಿರುತ್ತದೆ. ಇದಕ್ಕಾಗಿಯೇ 'ಇನ್ಸ್ಪೇಸ್' ಎಂಬ ಪ್ರತ್ಯೇಕ ಸಂಸ್ಥೆ ಹುಟ್ಟು ಹಾಕುತ್ತೇವೆ. ಇದರಲ್ಲಿ ಖಾಸಗಿ ಉದ್ಯಮಗಳ ಪ್ರತಿನಿಧಿಗಳು, ಇಸ್ರೊ ಮತ್ತು ಸರ್ಕಾರದ ಪ್ರತಿನಿಧಿಗಳೂ ಇರುತ್ತಾರೆ. ಇನ್ಸ್ಪೇಸ್ ಸ್ವತಂತ್ರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ.

ಇನ್ಸ್ಪೇಸ್ 6 ತಿಂಗಳಲ್ಲಿ ಸ್ಥಾಪನೆ ಆಗಲಿದೆ
ಬಾಹ್ಯಾಕಾಶ ಚಟುವಟಿಕೆಗಳಲ್ಲಿ ತೊಡಗುವ ಸಂಸ್ಥೆಗಳಿಗೆ ಅಗತ್ಯ ಜ್ಞಾನವನ್ನು ನೀಡಲಿದೆ. ‘ಇನ್ಸ್ಪೇಸ್' ಇನ್ನು 6 ತಿಂಗಳಲ್ಲಿ ಸ್ಥಾಪನೆ ಆಗಲಿದೆ. ಆದರೆ, ಸಾಕಷ್ಟು ಖಾಸಗಿ ಸಂಸ್ಥೆಗಳು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಒಪ್ಪಿಗೆ ನೀಡುವ ಪ್ರಕ್ರಿಯೆ ಸದ್ಯದಲ್ಲೇ ಚಾಲನೆ ನೀಡುತ್ತೇವೆ.

ಅಂತರ್ ಗ್ರಹಯಾನದ ಬಗ್ಗೆ ಹೆಚ್ಚಿನ ಒತ್ತು
ಇಸ್ರೊ ಬಾಹಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಮುಂದುವರಿದ ಸಂಶೋಧನೆಗಳು ಮತ್ತು ಅಂತರ್ ಗ್ರಹಯಾನಗಳ ಬಗ್ಗೆ ಹೆಚ್ಚಿನ ಒತ್ತು ನೀಡಲಿದೆ. ಜಾಗತಿಕ ಬಾಹ್ಯಾಕಾಶ ಕ್ಷೇತ್ರದ ಪವರ್ ಹೌಸ್ ಆಗಿ ಭಾರತ ರೂಪುಗೊಳ್ಳಲಿದೆ ಎಂದು ಶಿವನ್ ವಿವರಿಸಿದರು.

ಬಾಹ್ಯಾಕಾಶ ವಿಜ್ಞಾನದ ಮೂಲದ ಆದಾಯ ಹೆಚ್ಚಳ
'ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಶಕ್ತಿಯಾಗಿ ಹೊರ ಹೊಮ್ಮಲು ಮತ್ತು ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಚಟುವಟಿಕೆಗಳನ್ನು ನಡೆಸುವುದರಿಂದ ಬಾಹ್ಯಾಕಾಶ ವಿಜ್ಞಾನ ಮೂಲದ ಆದಾಯ ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಲು ಸಾಧ್ಯವಾಗಲಿದೆ. ಖಾಸಗಿಯವರು ಇಲ್ಲಿಯವರೆಗೆ ಇಸ್ರೋಗೆ ಬಿಡಿ ಭಾಗಗಳನ್ನು ತಯಾರಿಸುವುದಷ್ಟಕ್ಕೇ ಸೀಮಿತವಾಗಿದ್ದರು. ಇನ್ನು ಮುಂದೆ ಬಾಹ್ಯಾಕಾಶ ಸಂಸ್ಥೆಗೆ ಸಮಾನವಾಗಿ ಬೆಳೆಯುವುದಕ್ಕೆ ಅವಕಾಶ ನೀಡುವ ಮಹತ್ವದ ಸುಧಾರಣಾ ಕ್ರಮ ಇದಾಗಿದೆ. ಇದರಿಂದ ದೇಶದಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ದಿಯ ಹೊಸ ಯುಗವೇ ಸೃಷ್ಟಿಯಾಗಲಿದೆ ಎಂದು ಕೆ ಶಿವನ್ ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ವಲಯದ ಸೇವೆಗಳೇನು?
ರಾಕೆಟ್ ನಿರ್ಮಾಣ, ರಾಕೆಟ್ ಉಡ್ಡಯನ, ಉಪಗ್ರಹ ಮತ್ತು ಅದರ ಪೇಲೋಡ್ ನಿರ್ಮಾಣದಿಂದ ಮೊದಲ್ಗೊಂಡು ಹಲವು ಚಟುವಟಿಕೆಗಳು ಮತ್ತು ಸೇವೆಗಳನ್ನು ಖಾಸಗಿ ವಲಯ ನೀಡಬಹುದು. ಸಂಶೋಧನೆ ಮತ್ತು ಅಭಿವೃದ್ಧಿಯಲ್ಲೂ ತೊಡಗಿಕೊಳ್ಳಬಹುದು ಎಂಬುದು ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications