ನೇತಾಜಿ ಸ್ಮರಣೆ, ಅಂಡಮಾನ್ ನ ಮೂರು ದ್ವೀಪಕ್ಕೆ ಮರು ನಾಮಕರಣ
ನವದೆಹಲಿ, ಡಿಸೆಂಬರ್ 25: ಸ್ವಾತಂತ್ರ್ಯ ಸೇನಾನಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ಮರಣೆಯಲ್ಲಿ ಅಂಡಮಾನ್ ನಿಕೋಬಾರ್ ನ ಮೂರು ದ್ವೀಪಗಳ ಹೆಸರನ್ನು ಬದಲಾಯಿಸಿ, ಮರು ನಾಮಕರಣ ಮಾಡಲು ಕೇಂದ್ರ ಸರ್ಕಾರವು ಮುಂದಾಗಿದೆ.
ರೋಸ್ ದ್ವೀಪವನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪ, ನೀಲ್ ದ್ವೀಪವನ್ನು ಶಹೀದ್ ದ್ವೀಪ ಹಾಗು ಹಾವೆಲ್ ಲಾಕ್ ದ್ವೀಪವನ್ನು ಸ್ವರಾಜ್ ದ್ವೀಪ ಎಂದು ಹೆಸರಿಸಲಾಗುತ್ತದೆ.

ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪೋರ್ಟ್ ಬ್ಲೇರ್ ನಲ್ಲಿ ಪ್ರಥಮ ಬಾರಿಗೆ ತ್ರಿವರ್ಣಧ್ವಜಾರೋಹಣ ಮಾಡಿದ ಸವಿನೆನಪಿಗೆ 75 ವರ್ಷ ಸಂದಿದೆ. ಅಂಡಮಾನ್ ಸೆಲ್ಯುಲಾರ್ ಜೈಲಿನಲ್ಲಿ ಧ್ವಜಕ್ಕೆ ವಂದಿಸುತ್ತಿರುವ ದೃಶ್ಯ ಇರುವ 75 ರು ಮೌಲ್ಯದ ನಾಣ್ಯವನ್ನು ಕೇಂದ್ರ ಸರ್ಕಾರವು ಬಿಡುಗಡೆ ಮಾಡಲು ಮುಂದಾಗಿದೆ. ಈ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ದ್ವೀಪಗಳಿಗೆ ಹೊಸ ಹೆಸರು ಸಿಗಲಿದೆ.
ಡಿಸೆಂಬರ್ 30, 1943ರಂದು ಭಾರತೀಯ ರಾಷ್ಟ್ರೀಯ ಸೇನೆ(ಐಎನ್ಎ)ಯ ಬೋಸ್ ಮೊದಲ ಬಾರಿಗೆ ಪೋರ್ಟ್ ಬ್ಲೇರ್ ನ ಜೈಲಿನಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿದ್ದರು.
ಬ್ರಿಟಿಷರಿಂದ ದಾಸ್ಯದಿಂದ ಮುಕ್ತಗೊಂಡ ಭಾರತದ ಪ್ರಥಮ ಭೂ ಪ್ರದೇಶ ಎಂದು ಸ್ವಾತಂತ್ಯದ ಘೋಷಣೆ ಮಾಡಿದ್ದರು. ಎರಡನೇ ಮಹಾಯುದ್ಧದ ಸಮಯದಲ್ಲಿ ಜಪಾನ್ನಿಯರು ಈ ದ್ವೀಪವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.
ಡಿಸೆಂಬರ್ 30ರದು ಪೋರ್ಟ್ ಬ್ಲೇರ್ ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications