‘ಲೆನೊವೊ’ ಕಂಪನಿಗೆ ಆದಾಯ ತೆರಿಗೆ ಇಲಾಖೆ ಆಘಾತ? ಮಾಹಿತಿ ತಿಳಿಯಿರಿ
ಭಾರತದಲ್ಲಿ ತನ್ನ ಉತ್ಪನ್ನಗಳ ಮೂಲಕವೇ ಗ್ರಾಹಕರನ್ನು ಸೆಳೆಯುತ್ತಿರುವ 'ಲೆನೊವೊ'ಗೆ ಇಂದು ಐಟಿ ಶಾಕ್ ಸಿಕ್ಕಿದೆ. ಈ ಕುರಿತು ರಾಯಿಟರ್ಸ್ ವರದಿ ಮಾಡಿದ್ದು, 'ಲೆನೊವೊ'ಗೆ ಸೇರಿದ ಉತ್ಪನ್ನಗಳ ಘಟಕಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಚೀನಾ ಮೂಲದ 'ಲೆನೊವೊ' ಸಂಸ್ಥೆಯ ಪುದುಚೆರಿ ಫ್ಯಾಕ್ಟರಿಯು ಸೇರಿದಂತೆ ಕರ್ನಾಟಕ ರಾಜಧಾನಿ ಬೆಂಗಳೂರಿನ ಕಚೇರಿಯಲ್ಲೂ ಪರಿಶೀಲನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಉನ್ನತ ಮೂಲಗಳನ್ನ ಉಲ್ಲೇಖಿಸಿ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಭೇಟಿ ಮಾಡಿದ ಸಮಯದಲ್ಲಿ, ಲೆನೊವೊ ಉದ್ಯೋಗಿಗಳ ಲ್ಯಾಪ್ಟಾಪ್ ಕೂಡ ಪರಿಶೀಲಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಇಲ್ಲಿವರೆಗೂ ಐಟಿ ಪರಿಶೀಲನೆಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ.

ಉನ್ನತ ಅಧಿಕಾರಿಗಳ ಜೊತೆ ಚರ್ಚೆ?
'ಲೆನೊವೊ' ಸಂಸ್ಥೆ ಚೀನಾ ಮೂಲದ್ದು, ಹೀಗಾಗಿಯೇ ಇದೀಗ ದಿಢೀರ್ ಐಟಿ ಇಲಾಖೆಯ ಈ ದಾಳಿ ಗಮನ ಸೆಳೆದಿದೆ. ಪುದುಚೆರಿ ಫ್ಯಾಕ್ಟರಿ ಸೇರಿದಂತೆ ಬೆಂಗಳೂರಿನ ಕಚೇರಿಯಲ್ಲೂ ಪರಿಶೀಲನೆ ನಡೆಸಿದ ನಂತರ, ಸಂಸ್ಥೆಯ ಉನ್ನತ ಅಧಿಕಾರಿಗಳ ಜೊತೆ ತನಿಖೆ ಭಾಗವಾಗಿ ಸಂಪರ್ಕಿಸಲು ಯತ್ನಿಸಲಾಗಿದೆ ಎನ್ನಲಾಗಿದೆ. ಹಾಗೇ ಸಂಸ್ಥೆಯ ಅಧಿಕಾರಿಗಳು ಕೂಡ ಈ ತನಿಖೆಗೆ ಸಹಕರಿಸಿದ್ದು, ಐಟಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ತೆರಳಿದ್ದಾರೆಂದು ವರದಿಯಾಗಿದೆ.
ಭಾರತದಲ್ಲಿ ಲ್ಯಾಪ್ಟಾಪ್, ಕಂಪ್ಯೂಟರ್, ಮೊಬೈಲ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ಸ್ ವಸ್ತುಗಳನ್ನ ತಯಾರಿಸುವ 'ಲೆನೊವೊ' ಸಂಸ್ಥೆ ಸಾಕಷ್ಟು ಖ್ಯಾತಿ ಗಳಿಸಿದೆ. ಆದರೆ ಇದೀಗ ದಿಢೀರ್ ಐಟಿ ಅಧಿಕಾರಿಗಳು ಹೀಗೆ 'ಲೆನೊವೊ' ಸಂಸ್ಥೆಯಲ್ಲಿ ಪರಿಶೀಲನೆ ನಡೆಸಿರುವುದು ಏಕೆ? ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ 'ಲೆನೊವೊ' ಸಂಸ್ಥೆ ಅಧಿಕಾರಿಗಳು ಐಟಿ ಅಧಿಕಾರಿಗಳ ಭೇಟಿ ವೇಳೆ ಅಗತ್ಯ ಇರುವ ದಾಖಲೆಗಳನ್ನ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟೇ ಸಂಪೂರ್ಣ ಮಾಹಿತಿ ಹೊರಬೀಳಬೇಕಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications