ಕಾಳ ಧನಿಕರ ಬೇಟೆಯಿಂದ ಈವರೆಗೆ ಸಿಕ್ಕಿರೋದು ರು. 4,807 ಕೋಟಿ !
ನವದೆಹಲಿ, ಜ. 8: ಅಪನಗದೀಕರಣದ ನಂತರ ಆದಾಯ ತೆರಿಗೆ ಇಲಾಖೆಯು ದೇಶಾದ್ಯಂತ ಜ. 5ರವರೆಗೆ ನಡೆಸಿರುವ ಕಾಳ ಧನಿಕರ ಬೇಟೆಯಲ್ಲಿ ಒಟ್ಟು. 4,807 ಕೋಟಿ ರು. ನಗದು ಜಪ್ತಿಯಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಮೂಲಗಳು ಹೇಳಿವೆ. ಇಷ್ಟು ಹಣದಲ್ಲಿ 112 ಕೋಟಿಯಷ್ಟು ಹೊಸ ನೋಟುಗಳಾಗಿವೆ ಎಂದು ಇಲಾಖೆ ತಿಳಿಸಿದೆ.

ಮೂಲಗಳ ಪ್ರಕಾರ, ಈವರೆಗೆ ದೇಶಾದ್ಯಂತ ದಾಳಿ, ಸರ್ವೆ, ತನಿಖೆ ಸೇರಿದಂತೆ ಕಪ್ಪು ಹಣವನ್ನು ಮಟ್ಟಹಾಕಲು 1, 138 ಪ್ರಯತ್ನಗಳನ್ನು ಮಾಡಲಾಗಿದೆ. ಹವಾಲಾ ಮತ್ತಿತರ ದುರ್ಮಾರ್ಗಗಳ ಮೂಲಕ ಹಣ ಸಂಗ್ರಹಿಸಿದವರಿಗೆ ಇಲಾಖೆಯ ವತಿಯಿಂದ 5,148 ನೋಟಿಸ್ ಗಳನ್ನು ರವಾನಿಸಲಾಗಿದೆ. ಇನ್ನು, ಕಾಳಧನಿಕರ ಮೇಲಿನ ದಾಳಿಯ ವೇಳೆ ವಶಪಡಿಸಿಕೊಳ್ಳಲಾಗಿರುವ ಚಿನ್ನಾಭರಣಗಳ ಮೌಲ್ಯ ರು. 97.8 ಕೋಟಿಯಷ್ಟಿದೆ ಎಂದು ಹೇಳಲಾಗಿದೆ.
ಇದರ ಜತೆಯಲ್ಲೇ, ಕಪ್ಪು ಹಣ ದಂಧೆ ಸಂಬಂಧಿಸಿದ 526 ಪ್ರಕರಣಗಳನ್ನು ತೆರಿಗೆ ಇಲಾಖೆಯು ತನ್ನ ಸೋದರ ಸಂಸ್ಥೆಗಳಾದ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಹಾಗೂ ಜಾರಿ ನಿರ್ದೇಶನಾಲಯಕ್ಕೆ (ಇಡಿ) ವರ್ಗಾಯಿಸಿದೆ.
More From
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications