ಉಗ್ರರಿಗೆ ಧನ ಸಹಾಯ: ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ ಸರ್ಕಾರ
ಕಾಶ್ಮೀರದಲ್ಲಿ ಉಗ್ರರಿಗೆ ಆರ್ಥಿಕ ಸವಲತ್ತು ನೀಡುವ ಪ್ರಕರಣದ ತನಿಖೆಗೆ ಇಳಿದ ಆದಾಯ ತೆರಿಗೆ ಇಲಾಖೆ. ಹುರಿಯತ್ ನಾಯಕರ ವಿರುದ್ಧದ ಪ್ರಕರಣಗಳ ತನಿಖೆಯಲ್ಲಿ ಎನ್ಐಎ ಜತೆಗೆ ಸಾಥ್.
ನವದೆಹಲಿ, ಆಗಸ್ಟ್ 28: ಕಾಶ್ಮೀರದಲ್ಲಿನ ಹಿಂಸಾಚಾರಗಳಿಗೆ, ಅಲ್ಲಿನ ಉಪಟಳ ನೀಡುವ ಉಗ್ರವಾದಿಗಳಿಗೆ ಧನ ಸಹಾಯ ಮಾಡುವ ವ್ಯಕ್ತಿಗಳ ವಿರುದ್ಧದ ತನಿಖೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಚುರುಕುಗೊಳಿಸಿದೆ. ಈವರೆಗೆ ಇದರ ತನಿಖೆಯ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ತನಿಖಾ ಆಯೋಗದ (ಎನ್ಐಎ) ಜತೆಗೀಗ ಕೇಂದ್ರೀಯ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳೂ ಕೈ ಜೋಡಿಸಿದ್ದು, ಈ ಪ್ರಕರಣದಡಿ ಬಂಧಿತರಾಗಿರುವ ಎಲ್ಲರ ವ್ಯವಹಾರಗಳನ್ನು ಜಾಲಾಡಲಾರಂಭಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬಂಧಿಸಲಾಗಿದ್ದ ಶ್ರೀನಗರ ಮೂಲದ ಝಹೂರ್ ವಾಟಾಲಿ ಬಗ್ಗೆ ಅನೇಕ ದಾಖಲೆಗಳನ್ನು ಎನ್ಐಎ ಕಲೆಹಾಕಿದ್ದು, ಇವುಗಳ ಪರಿಶೀಲನೆಯನ್ನು ಈಗ ಐಟಿ ಇಲಾಖೆಯ ಅಧಿಕಾರಿಗಳು ವಹಿಸಿಕೊಂಡಿದ್ದಾರೆ.

ಇದಕ್ಕಾಗಿ, ಅನೇಕ ಚಾರ್ಟರ್ಡ್ ಅಕೌಂಟಂಟ್ ಗಳನ್ನು ಇದರ ತನಿಖೆಗಾಗಿ ನೇಮಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎನ್ಐಎ ಅಧಿಕಾರಿಯೊಬ್ಬರು, ''ವಾಟಾಲಿ ಅವರು ಅನೇಕ ಉಗ್ರರಿಗೆ ಆರ್ಥಿಕವಾಗಿ ಆಧಾರ ಸ್ತಂಭವಾಗಿದ್ದರೆಂದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಅವರ ಎಲ್ಲಾ ವ್ಯವಹಾರಗಳ ಮೂಲಗಳು, ನಗದು ವರ್ಗಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಐಟಿ ಇಲಾಖೆಗೆ ಒಪ್ಪಿಸಲಾಗಿದ್ದು,ಅವುಗಳ ಕೂಲಂಕಷ ಅಧ್ಯಯನ ನಡೆಸಲಾಗುವುದು'' ಎಂದು ತಿಳಿಸಿದ್ದಾರೆ.
ಒಟ್ಟಾರೆಯಾಗಿ, ಕಣಿವೆ ರಾಜ್ಯದಲ್ಲಿ ಇರುವ ಹಿಂಸಾಚಾರವನ್ನು ಶತಾಯ ಗತಾಯ ತಡೆಗಟ್ಟಲು ಕೇಂದ್ರ ಸರ್ಕಾರ ಅವಿರತ ಶ್ರಮ ಹಾಕಿದೆ. 2022ರ ವೇಳೆಗೆ ಕಾಶ್ಮೀರ ಸಮಸ್ಯೆ ಇರದು ಎಂದು ಇತ್ತೀಚೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications