ದಿನಗೂಲಿ ಕಾರ್ಮಿಕನಿಗೆ ₹14 ಕೋಟಿ ಪಾವತಿಸುವಂತೆ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ಪಟ್ನಾ, ಡಿಸೆಂಬರ್ 20: ಬಿಹಾರ ಮೂಲದ ದಿನಗೂಲಿ ಕಾರ್ಮಿಕನೋರ್ವನಿಗೆ ಆದಾಯ ತೆರಿಗೆ ಇಲಾಖೆಯು 14 ಕೋಟಿ ರೂಪಾಯಿ ತೆರಿಗೆಯನ್ನು ಪಾವತಿಸುವಂತೆ ನೋಟಿಸ್ ನೀಡಿರುವ ಘಟನೆ ಅಚ್ಚರಿಗೆ ಕಾರಣವಾಗಿದೆ.
'ತಿಂಗಳಿಗೆ 12,000 ರೂಪಾಯಿ ಆದಾಯ ಗಳಿಸಲು ದಿನವಿಡೀ ಹೆಣಗಾಡುತ್ತಿರುವೆ. ಈ ಸಂದರ್ಭದಲ್ಲಿ ತೆರಿಗೆ ಇಲಾಖೆಯ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ' ಎಂದು ತಮ್ಮ ಅಳಲನ್ನು ಮಾಧ್ಯಮದ ಮುಂದೆ ತೋಡಿಕೊಂಡಿದ್ದಾರೆ.
ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಕುಟುಂಬದೊಂದಿಗೆ ವಾಸವಾಗಿರುವ ಮನೋಜ್ ಯಾದವ್ ಎಂಬುವವರಿಗೆ ಆದಾಯ ತೆರಿಗೆ ಇಲಾಖೆಯು ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದೆ.

ಈ ಸುದ್ದಿಯನ್ನು ಕೇಳಿದ ನಂತರ ಯಾದವ್ ಮತ್ತು ಅವರ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ. ನಾನು ದಿನಗೂಲಿ ಕಾರ್ಮಿಕನಾಗಿದ್ದು, ತಿಂಗಳಿಗೆ 12,000 ರೂಪಾಯಿ ಆದಾಯ ಗಳಿಸಲು ದಿನವಿಡೀ ಹೆಣಗಾಡುತ್ತಿರುವೆ. ಈ ಸಂದರ್ಭದಲ್ಲಿ ತೆರಿಗೆ ಇಲಾಖೆಯ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.
ಈ ಹಿಂದೆ ಮನೋಜ್ ಯಾದವ್ ಅವರು ದೆಹಲಿ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿದ್ದರು. ಆದರೆ 2020ರಲ್ಲಿ ಕೋವಿಡ್ ಲಾಕ್ಡೌನ್ ನಂತರ ಬಿಹಾರದ ತಮ್ಮ ಮನೆಗೆ ಮರಳಿದ್ದರು. ಈ ಸಮಯದಲ್ಲಿ ಆದಾಯ ತೆರಿಗೆಯಿಂದ ತಪ್ಪಿಸಿಕೊಳ್ಳಲು ಖಾಸಗಿ ಸಂಸ್ಥೆಗಳು ಮನೋಜ್ ಯಾದವ್ ಹೆಸರನ್ನು ದುರುಪಯೋಗ ಪಡಿಸಿಕೊಂಡಿವೆ ಎಂದು ಅವರು ಆರೋಪಿಸಿದ್ದಾರೆ.
ಖಾಸಗಿ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ, ಅವರು ತಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್ಗಳ ನಕಲು ಪ್ರತಿಗಳನ್ನು ತೆಗೆದುಕೊಂಡಿದ್ದರು. ನನ್ನ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ವಹಿವಾಟು ನಡೆಸಿದ್ದಾರೆ. ತನ್ನ ಸಂಪೂರ್ಣ ಆಸ್ತಿಯನ್ನು ಹಲವಾರು ಬಾರಿ ಮಾರಾಟ ಮಾಡಿದರೂ ಕೋಟ್ಯಾಂತರ ರೂಪಾಯಿ ತರಿಗೆಯನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಮನೋಜ್ ಯಾದವ್ ನೋಟಿಸ್ ನೀಡಲು ಬಂದಿದ್ದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

14 ಕೋಟಿ ರೂಪಾಯಿ ತೆರಿಗೆ ಯಾಕೆ?
ಮನೋಜ್ ಯಾದವ್ ಅವರ ಬ್ಯಾಂಕ್ ದಾಖಲೆಗಳು ಕೋಟ್ಯಂತರ ರೂಪಾಯಿ ವಹಿವಾಟುಗಳನ್ನು ಮಾಡಿರುವುದನ್ನು ತೋರಿಸಿದೆ. ಇದರಿಂದಾಗಿ ಅವರು ಆದಾಯ ತೆರಿಗೆ ಪಾವತಿಸಬೇಕು ಎಂದು ಪ್ರಧಾನ ಕಚೇರಿಯಿಂದ ನೋಟಿಸ್ ನೀಡಲಾಗಿದೆ ಎಂದು ಸಸಾರಾಮ್ ವಿಭಾಗದ ಆದಾಯ ತೆರಿಗೆ ಅಧಿಕಾರಿ (ಐಟಿಒ) ಸತ್ಯಭೂಷಣ್ ಪ್ರಸಾದ್ ಹೇಳಿದ್ದಾರೆ.
ನೋಟಿಸ್ ಹಿಡಿದು ಬಂದಿದ್ದ ಅಧಿಕಾರಿಗಳಿಗೇ ಶಾಕ್
ಕಳೆದ ಶನಿವಾರದಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ಹಿಡಿದು ಮನೋಜ್ ಅವರ ಮನೆಗೆ ಆಗಮಿಸಿದ್ದರು. ಆಗ ಮನೋಜ್ ಯಾದವ್ ಅವರ ಜೋಪಡಿ ಮನೆಯನ್ನು ನೋಡಿದ ಅಧಿಕಾರಿಗಳು ಕ್ಷಣಕಾಲ ದಂಗಾಗಿ ಹೋಗಿದ್ದರು. ಮನೋಜ್ ಕುಮಾರ್ ಬ್ಯಾಂಕಿನ ವಹಿವಾಟಿಗೂ ಮತ್ತು ಅವರ ಜೀವನ ಶೈಲಿಗೂ ಯಾವುದೇ ಹೋಲಿಕೆಗಳು ಸಾಧ್ಯವಾಗದೇ ಇದ್ದಾಗ ಅಧಿಕಾರಿಗಳು ಅಚ್ಚರಿಗೊಂಡಿದ್ದಾರೆ.
ಮನೆ ಖಾಲಿ ಮಾಡಿದ ಮನೋಜ್ ಯಾದವ್
ತನ್ನದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾದ ಪರಿಸ್ಥಿತಿ ಮನೋಜ್ಗೆ ಬಂದೊದಗಿದೆ. 14 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ಅಧಿಕಾರಿಗಳು ನೀಡಿರುವ ನೋಟಿಸ್ ಮನೋಜ್ಗೆ ದಿಗಿಲುಂಟು ಮಾಡಿದೆ. ಮಧ್ಯರಾತ್ರಿಯೇ ಕುಟುಂಬ ಸಮೇತರಾಗಿ ಮನೋಜ್ ಯಾದವ್ ಮನೆಯನ್ನು ಖಾಲಿ ಮಾಡಿಕೊಂಡು ಹೋಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications