ಜಾರ್ಖಂಡ್ನ ಕಾಂಗ್ರೆಸ್ ಶಾಸಕರ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ಶೋಧ
ರಾಂಚಿ, ನವೆಂಬರ್ 4: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿರುವ ಕಾಂಗ್ರೆಸ್ ಶಾಸಕ ಕುಮಾರ್ ಜೈಮಂಗಲ್ ಸಿಂಗ್ ಅವರ ನಿವಾಸದಲ್ಲಿ ಆದಾಯ ತೆರಿಗೆ ಇಲಾಖೆ ಶುಕ್ರವಾರ ಶೋಧ ಕಾರ್ಯ ಕೈಗೊಂಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರಿ ನಿರ್ದೇಶನಾಲಯದಿಂದ (ಇಡಿ) ಸಮನ್ಸ್ ಜಾರಿಯಾಗಿತ್ತು. ಗುರುವಾರ ನಡೆಯಬೇಕಿದ್ದ ಇಡಿ ವಿಚಾರಣೆಗೆ ಸೊರೆನ್ ಅವರು ಹಾಜರಾಗಿರಲಿಲ್ಲ. ಇಡಿ ತಮ್ಮನ್ನು ಬಂಧಿಸುವಂತೆ ಸವಾಲು ಹಾಕಿದ್ದರು. ಈ ಘಟನೆ ನಡೆದ ಮರುದಿನವೇ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್ ಶಾಸಕರ ಮನೆಯಲ್ಲಿ ಶೋಧ ಕಾರ್ಯ ನಡೆಸುತ್ತಿದೆ.
ಕುಮಾರ್ ಜೈಮಂಗಲ್ ಸಿಂಗ್ ಅವರು ಜಾರ್ಖಂಡ್ ಕಾಂಗ್ರೆಸ್ ಘಟಕದ ಪ್ರಭಾವಿ ನಾಯಕರು. ಅವರು 2009ರಲ್ಲಿ ರಾಜ್ಯ ಯುವ ಕಾಂಗ್ರೆಸ್ನ ಉಪಾಧ್ಯಕ್ಷರಾಗಿ ಆಯ್ಕೆಯಾದರು. 2012 ರಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರಾದರು. 2020 ರಲ್ಲಿ ಮೊದಲ ಬಾರಿ ಶಾಸಕರಾದರು.

2013ರಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆ ಹಿನ್ನೆಲೆಯಲ್ಲಿ ತೆರಿಗೆ ಇಲಾಖೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.
ಇಡಿ ವಿಚಾರಣೆಗೆ ಹಾಜರಾಗದ ಸೊರೆನ್
ಜಾರ್ಖಂಡ್ ಮುಖ್ಯಮಂತ್ರಿ ಇಡಿ ವಿಚಾರಣೆಗೆ ಹಾಜರಾಗಿಲ್ಲ. ಈ ವಿಚಾರವಾಗಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಇವತ್ತು ಛತ್ತೀಸ್ಗಢದಲ್ಲಿ ನನ್ನ ಕಾರ್ಯಕ್ರಮ ಇದೆ. ಇದೇ ಸಮಯದಲ್ಲಿ ಇಡಿ ನನ್ನನ್ನು ಕರೆದಿದೆ. ನಾನು ಅಷ್ಟು ದೊಡ್ಡ ಅಪರಾಧ ಮಾಡಿದ್ದರೆ, ಅವರು ಬಂದು ನನ್ನನ್ನು ಬಂಧಿಸಲಿ' ಎಂದು ಹೇಳಿದ್ದರು.

'ಇಡಿ ಕಚೇರಿ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಏಕೆ, ನೀವು(ಇಡಿ ಅಧಿಕಾರಿಗಳು) ಜಾರ್ಖಂಡ್ ಜನರಿಗೆ ಹೆದರುತ್ತೀರಾ?' ಎಂದು ಸೊರೆನ್ ಪ್ರಶ್ನಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications