ಪೋಲಿಸ್ ಠಾಣೆಯಲ್ಲಿ ಹೆಚ್ಚಿದ ಭ್ರಷ್ಟಾಚಾರ, ಕಾನ್ಸ್ಟೇಬಲ್ ಮಾಡಿದ್ದೇನು ಗೊತ್ತಾ?
ಜಲಂಧರ್, ಜುಲೈ 24: ಪೊಲೀಸ್, ಸರ್ಕಾರದ ವಿರುದ್ಧ ಜನಸಾಮಾನ್ಯರು ಪ್ರತಿಭಟನೆ ಮಾಡುವುದು ದೇಶದಲ್ಲಿ ಹೊಸತೇನಲ್ಲ. ಆದರೆ ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಪೊಲೀಸರೇ ಪ್ರತಿಭಟನೆ ಮಾಡುವುದು ಎಂದಾದರೂ ಕೇಳಿ ನೋಡಿದ್ದೀರಾ. ಹೌದು ಪೊಲೀಸರ ಭ್ರಷ್ಟಾಚಾರದ ಬಗ್ಗೆ ಪೊಲೀಸರೇ ಪ್ರತಿಭಟನೆ ನಡೆಸಿರುವ ಘಟನೆ ಇಲ್ಲಿ ನಡೆದಿದೆ.
ಪಂಜಾಬ್ನ ಜಲಂಧರ್ನಲ್ಲಿ ಅಸಾಮಾನ್ಯ ಪ್ರತಿಭಟನೆಯೊಂದು ನಡೆದಿರುವ ವಿಡಿಯೋ ವೈರಲ್ ಆಗಿದೆ. ತನ್ನ ಪೊಲೀಸ್ ಠಾಣೆಯಲ್ಲಿ ತೀವ್ರವಾದ ಭ್ರಷ್ಟಾಚಾರದ ವಿರುದ್ಧ ಪಠಾಣ್ಕೋಟ್ ಹೆದ್ದಾರಿಯ ಜನನಿಬಿಡ ವಿಸ್ತರಣೆಯ ಮಧ್ಯದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಲಗಿ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ.

ಜಲಂಧರ್ನ ಆ ಠಾಣೆಯಲ್ಲಿ ಅಪರಾಧಿಗಳ ವಿರುದ್ಧ ತನ್ನ ಸಹದ್ಯೋಗಿಗಳು ನಿಷ್ಕ್ರಿಯರಾಗಿರುವುದಾಗಿ ಅವರು ಆರೋಪಿಸಿ ಪ್ರತಿಭಟನೆಯನ್ನು ನಡೆಸಿದರು. ಈ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು.
ಪ್ರಕರಣವೊಂದರಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಭೋಗ್ಪುರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ, ಮರುದಿನ ಠಾಣೆಗೆ ಹೋದಾಗ ಆರೋಪಿ ತನ್ನ ಸೆಲ್ನಿಂದ ನಾಪತ್ತೆಯಾಗಿದ್ದ. ಬಳಿಕ ಅವರು ಆ ಆರೋಪಿಯ ಬಗ್ಗೆ ವಿಚಾರಿಸಿದಾಗ ಅವರು ಆತನಿಗೆ ತಪ್ಪಿಸಿಕೊಳ್ಳಲು ನೆರವಾಗಿರುವುದು ತಿಳಿದು ಬಂದಿತು.
ಇದರಿಂದ ನೊಂದ ಗೃಹರಕ್ಷಕ ದಳದ ಸಿಬ್ಬಂದಿ ನೇರವಾಗಿ ಹೆದ್ದಾರಿಗೆ ತೆರಳಿ ಮಲಗಿ ಪ್ರತಿಭಟನೆ ನಡೆಸಿದರು. ವೈರಲ್ ಆಗಿರುವ ವೀಡಿಯೋದಲ್ಲಿ ಅವರು ವಾಹನಗಳನ್ನು ನಿಲ್ಲಿಸಿ ರಸ್ತೆಯ ನಾಲ್ಕು ಪಥಗಳಿಗೆ ಅಡ್ಡಲಾಗಿ ಹಗ್ಗವನ್ನು ಕಟ್ಟಿ ಚಲಿಸುವ ಸಂಚಾರವನ್ನು ತಡೆದರು. ಆದರೆ ಅವರ ಸಹೊದ್ಯೋಗಿ ಪೋಲೀಸರು ಹಗ್ಗ ಬಿಚ್ಚುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಈ ಬಗ್ಗೆ ಭೋಗ್ಪುರ ಪೊಲೀಸ್ ಠಾಣೆ ಪ್ರಭಾರಿ ಸುಖ್ಜಿತ್ ಸಿಂಗ್, "ಸ್ಥಳೀಯ ಜಗಳಕ್ಕೆ ಸಂಬಂಧಿಸಿದಂತೆ ಯುವಕನನ್ನು ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ಕರೆತಂದರು. ಆ ವ್ಯಕ್ತಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು, ಅದು ಮಂಜೂರಾಗಿತ್ತು. ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಪ್ರತಿಭಟನಾನಿರತ ಪೊಲೀಸರಿಗೆ ಒದೆ ತಿಂದಿಲ್ಲ ಎಂದು ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications