Get Updates
Get notified of breaking news, exclusive insights, and must-see stories!
Live

75th Independence Day 2021 Live Updates: ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನಮಂತ್ರಿ ಗತಿ ಶಕ್ತಿ ಯೋಜನೆ

ನವದೆಹಲಿ, ಆಗಸ್ಟ್ 15: ಭಾರತದ 75ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ದೇಶಪ್ರೇಮಿಗಳು ಸಜ್ಜಾಗಿದ್ದಾರೆ. ಅಮೃತ ಮಹೋತ್ಸವದ ಘಳಿಗೆಯನ್ನು ಇನ್ನಷ್ಟು ಚಂದವಾಗಿಲಸು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳಿಂದ ದೇಶಾದ್ಯಂತ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಕೊರೊನಾ ಆತಂಕದಿಂದ ಈ ಸ್ವಾತಂತ್ರ್ಯೋತ್ಸವದ ಉತ್ಸಾಹಕ್ಕೆ ಅಲ್ಪ ಮಟ್ಟಿನ ಉತ್ಸಾಹ ಕಡಿಮೆಯಾಗಿದೆ.

74 ನೇ ಸ್ವಾತಂತ್ರ್ಯ ದಿನವನ್ನು ಕೂಡ ಕೊರೊನಾ ನಿಯಮಗಳನ್ನು ಪಾಲಿಸಿಯೇ ಆಚರಿಸಲಾಗಿತ್ತು. ಧ್ವಜಾರೋಹಣವಾದ ಬಳಿಕ ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನದ ಭಾಷಣ ಬೆಳಗ್ಗೆ 7.30ಕ್ಕೆ ಶುರುವಾಗಲಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಗುತ್ತದೆ.

ಭಾರತದ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಈ ವರ್ಷದಿಂದ ಆರಂಭಗೊಂಡಿದೆ. 2023ರ ವರೆಗೆ ನಡೆಯಲಿದೆ. ಈ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಮುಂದಿನ 2 ಸ್ವಾತಂತ್ರ್ಯ ದಿನಾಚರಣೆಯಲ್ಲೂ ಅಮೃತ ಮಹೊತ್ಸವ ಸಂಭ್ರಮ ಇರಲಿದೆ.

Independence Day 2021 Live Updates And PM Modi Speech Highlights iI Kannada

ಮಾರ್ಚ್ 12, 2021ರಂದು ಪ್ರಧಾನಿ ಮೋದಿ ಅಜಾದಿಕಾ ಅಮೃತ ಮಹೋತ್ಸವ(ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ) ಕಾರ್ಯಕ್ರಮ ಉದ್ಘಾಟನೆ ಮಾಡಿದ್ದಾರೆ. 2023ರ ವರೆಗೆ ಅಮೃತ ಮಹೋತ್ಸವ ದಿನಾಚರಣೆ ಕಾರ್ಯಕ್ರಮಗಳು ನಡೆಯಲಿವೆ. ಆದರೆ ಕೆಲ ದಾಖಲೆಗಳಲ್ಲಿ, ಉಲ್ಲೇಖಗಳಲ್ಲಿ ಇದು 74ನೇ ಸ್ವಾತಂತ್ರ್ಯ ದಿನಾಚರಣೆ, ಮತ್ತೆ ಕೆಲವು ದಾಖಲೆಗಳಲ್ಲಿ ಈ ಬಾರಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ.

ನೇತಾಜಿ ಸುಭಾಷ್ ಮಾರ್ಗ, ಲೋಥಿಯನ್ ರಸ್ತೆ, ಎಸ್‌ಪಿ ಮುಖರ್ಜಿ ಮಾರ್ಗ, ಚಾಂದಿನಿ ಚೌಕ ರಸ್ತೆ, ನಿಶಾದ್ ರಾಜ್ ಮಾರ್ಗ, ಲಿಂಕ್ ರಸ್ತೆಯಿಂದ ನೇತಾಜಿ ಸುಭಾಷ್ ಮಾರ್ಗ, ರಿಂದ ರಸ್ತೆಯಿಂದ ರಾಜ್‌ಘಾಟ್ ಬಳಿಕ ಐಎಸ್‌ಬಿಟಿ ಹಾಗೂ ಔಟರ್ ರಿಂಗ್ ರಸ್ತೆ, ಐಪಿ ಫ್ಲೈಓವರ್ ಪ್ರದೇಶಗಳಲ್ಲಿ ಬೆಳಗಿನ ಜಾವ 4 ರಿಂದ 10 ಗಂಟೆಯವರೆಗೆ ರಸ್ತೆ ಬಂದ್ ಮಾಡಲಾಗುತ್ತದೆ.

ಎನ್‌ಎಸ್‌ಜಿ, ಸೆಕ್ಯುರಿಟಿ ರಿಂಗ್, SWAT ಕಮಾಂಡರ್ಸ್ ಸೇರಿದಂತೆ ಹಲವು ಭದ್ರತೆ ನೀಡಲಾಗಿದೆ. ಹಾಗೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ. 350ಕ್ಕೂ ಹೆಚ್ಚು ಕ್ಯಾಮರಾಗಳನ್ನು ಅಳವಡಿಸಲಾಗಿದೆ. 5 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯನ್ನು ಮೊಬೈಲ್ ಫೋನ್ ಮತ್ತು ಆನ್‌ಲೈನ್ ಲೈವ್ ಆಗಿ ವೀಕ್ಷಿಸಬಹುದು. ಪ್ರಧಾನಿ ಮೋದಿ ಭಾಷಣವನ್ನು ದೂರದರ್ಶನ ಪ್ರಸಾರ ಮಾಡಲಿದೆ.

ಪ್ರೆಸ್ ಇನ್‌ಫಾರ್ಮೇಷನ್ ಬ್ಯೂರೋ ಕೂಡ ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಪ್ರಸಾರ ಮಾಡಲಿದೆ ಹಾಗೂ ಅದರ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಭಾಷಣ ನೇರ ಪ್ರಸಾರವಾಗಲಿದೆ.

ಪ್ರಧಾನಿ ಕಚೇರಿಯ (ಪಿಎಂಒ) ಅಧಿಕೃತ ಯೂಟ್ಯೂಬ್ ಚಾನೆಲ್, ಹಾಗೂ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಪ್ರೆಸ್ ಇನ್‌ಫಾರ್ಮೇಷನ್ ಬ್ಯೂರೋ

https://www.youtube.com/watch?v=3aefZeUY-50

ದೂರದರ್ಶನ

https://www.youtube.com/watch?v=fVz8LyjSC_k

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪು ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ಯಾವುದೇ ಅವಘಡ ನಡೆಯಬಾರದು ಎಂಬ ಕಾರಣಕ್ಕೆ ದೆಹಲಿ ಪೊಲೀಸರು ಇಂಥ ಕ್ರಮಕ್ಕೆ ಮುಂದಾಗಿದ್ದಾರೆ. ಕಳೆದ ಗಣರಾಜ್ಯೋತ್ಸವ ಸಮಾರಂಭದ ವೇಳೆ ರೈತರು ನಡೆಸಿದ್ದ ಟ್ರ್ಯಾಕ್ಟರ್​ ರ‍್ಯಾಲಿ ಹಿಂಸಾಚಾರದ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಈ ಬಾರಿ ಹಾಗೆ ಆಗಲು ಯಾವುದೇ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

10:47 AM
Aug 15, 2021
ಕರ್ನಾಟಕ: ನಮ್ಮದು ಯಶಸ್ವಿ ಪ್ರಜಾಪ್ರಭುತ್ವ ದೇಶವಾಗಿದೆ. ಈ ಪ್ರಜಾಪ್ರಬುತ್ವ ಯಶಸ್ವಿಯಾಗಲು ಸಂವಿಧಾನ ಮೂಲ ಕಾರಣವಾಗಿದೆ. ಸಂವಿಧಾನ ಒಂದು ವಿಕಾಸ ಗೀತೆಯಾಗಿದೆ. ಹೀಗಾಗಿ ಸಂವಿಧಾನ ನಮ್ಮೆಲ್ಲರ ಭಗವದ್ಗೀತೆಯಾಗಿದೆ. ಈ ಸಂದರ್ಭದಲ್ಲಿ ಡಾ.ಬಾಬಾ ಸಾಹೇಬಿ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುತ್ತೇನೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಭಾರತ ವಸಾಹತು ಶಾಹಿಗಳಿಂದ ಬಿಡುಗೆಯಾಗಿ 75 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ನಾಡಿನ ಜನತೆಗೆ ಸಂದೇಶ ನೀಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯವೆಂದು ತಿಳಿಸಿದರು.
10:31 AM
Aug 15, 2021
ಲೋಕಸಭೆ ಸ್ಪೀಕರ್ ಓಂ ಬಿರ್ಲಾ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಮಾಡಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಮಾಡಿದರು.
10:09 AM
Aug 15, 2021
ಕೇರಳದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಧ್ವಜಾರೋಹಣ ನೆರವೇರಿಸಿದರು.
10:02 AM
Aug 15, 2021
ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ನೆರವೇರಿಸಿದರು.
10:02 AM
Aug 15, 2021
ಕಾರವಾರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕವಾಯತು ತಂಡದಿಂದ ಗೌರವ ಸ್ವೀಕರಿಸಿದರು.
10:02 AM
Aug 15, 2021
75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಧ್ವಜಾರೋಹಣ ನೆರವೇರಿಸಿ, ಪೋಲಿಸ್, ಎನ್‌ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಅರಣ್ಯ ಹಾಗೂ ಅಬಕಾರಿ ದಳದಿಂದ ಗೌರವ ವಂದನೆಯನ್ನು ಸ್ವೀಕರಿಸಿದರು.
10:02 AM
Aug 15, 2021
ಚಿಕ್ಕಮಗಳೂರು ಜಿಲ್ಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು. ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಪೊಲೀಸ್, ಗೃಹರಕ್ಷಕ, ಅರಣ್ಯ, ಅಗ್ನಿಶಾಮಕ ದಳದಿಂದ ಪಥ ಸಂಚಲನ ನಡೆಯಿತು.
9:54 AM
Aug 15, 2021
ದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧ್ವಜಾರೋಹಣ ನೆರವೇರಿಸಿದರು.
9:39 AM
Aug 15, 2021
ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಧ್ವಜಾರೋಹಣ ನೆರವೇರಿಸಿದರು.
9:32 AM
Aug 15, 2021
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಮಾಡಿದರು
9:31 AM
Aug 15, 2021
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಧ್ವಜಾರೋಹಣ ನೆರವೇರಿಸಿದರು.
9:16 AM
Aug 15, 2021
ಪ್ರಧಾನಿ ನರೇಂದ್ರ ಮೋದಿ ಭಾಷಣ ಮುಕ್ತಾಯ
9:10 AM
Aug 15, 2021
ಕರ್ನಾಟಕ: 75ನೇ ಸ್ವಾತಂತ್ರ್ಯ ಸಂಭ್ರಮ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದವರೆಗೂ ನಡೆಯಲಿರುವ ಮೆರವಣಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಬಿ.ಕೆ ಹರಿಪ್ರಸಾದ್, ಸಲೀಂ ಅಹಮ್ಮದ್, ವಿ.ಎಸ್ ಉಗ್ರಪ್ಪ, ವಿ.ಆರ್ ಸುದರ್ಶನ್ ಸೇರಿದಂತೆ ಹಲವರ ಆಗಮನ
9:06 AM
Aug 15, 2021
ಸರ್ಜಿಕಲ್ ಸ್ಟ್ರೈಕ್ ಹಾಗೈ ವೈಮಾನಿಕ ದಾಳಿಗಳನ್ನು ನಡೆಸುವ ಮೂಲಕ ನಾವು ನಮ್ಮ ಶತ್ರುಗಳಿಗೆ ಹೊಸ ಭಾರತದ ಉದಯದ ಸಂದೇಶವನ್ನು ನೀಡಿದ್ದೇವೆ, ಭಾರತವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಕೂಡ ಇದು ತಿಳಿಸುತ್ತದೆ-ಮೋದಿ
9:03 AM
Aug 15, 2021
ನಮ್ಮ ದೇಶ ಪ್ರಮುಖ ತಿರುವು ಪಡೆದಿದೆ, ಈ ದಶಕದಲ್ಲಿ ನಾವು ದೇಶದಲ್ಲಿ ಕ್ರೀಡೆಯಲ್ಲಿ ಪ್ರತಿಭೆ, ತಂತ್ರಜ್ಙಾನ ಮತ್ತು ವೃತ್ತಿಪರತೆಯನ್ನು ತರಲು ಮತ್ತಷ್ಟು ವೇಗವನ್ನು ಹೆಚ್ಚಿಸಬೇಕಿದೆ. ಭಾರತದ ಹೆಣ್ಣು ಮಕ್ಕಳು ಭರ್ಜರಿ ಪ್ರದರ್ಶನ ನೀಡುತ್ತಿರುವುದು ಹೆಮ್ಮೆಯ ವಿಷಯ, ಅದು ಬೋರ್ಡ್ ಪರೀಕ್ಷೆಯೇ ಆಗಿರಬಹುದು ಅಥವಾ ಒಲಿಂಪಿಕ್ಸ್ ಆಗಿರಬಹುದು ಉತ್ತಮ ಪ್ರದರ್ಶನ ನೀಡುತ್ತಿರುವುದು ಗರ್ವವನ್ನು ಹೆಚ್ಚಿಸಿದೆ-ಮೋದಿ
8:56 AM
Aug 15, 2021
ನಾವು 10 ವರ್ಷಗಳ ಸ್ವಾತಂತ್ರ್ಯ ವರ್ಷವನ್ನು ಪೂರೈಸುವ ಮೊದಲು ಪ್ರತಿಜ್ಞೆ ಮಾಡಬೇಕು, ಭಾರತವು ವಿದ್ಯುತ್ ಚಲನಶೀಲನಾ ವ್ಯವಸ್ಥೆಯತ್ತ ಸಾಗಿದೆ, 2030ರ ವೇಳೆಗೆ ಶೂನ್ಯ ಕಾರ್ಬನ್ ಎಮಿಟರ್ ಆಗುವ ಗುರಿಯೊಂದಿಗೆ ಭಾರತೀಯ ರೈಲ್ವೆಯನ್ನು ಶೇ.100ರಷ್ಟು ವಿದ್ಯುದೀಕರಣದ ಕೆಲಸ ನಡೆಯುತ್ತಿದೆ- ಮೋದಿ
8:53 AM
Aug 15, 2021
ದೇಶದ ರಕ್ಷಣೆಯಲ್ಲಿ ತೊಡಗಿರು ಯೋಧರ ಕೈಯನ್ನು ಪ್ರಬಲಗೊಳಿಸುವಲ್ಲಿ, ನಾವು ಯಾವುದೇ ಅವಕಾಶವನ್ನು ಬಿಟುಟ್ಟುಕೊಡುವುದಿಲ್ಲ, ಅವರ ಜತೆ ಸದಾ ನಿಲ್ಲುತ್ತೇವೆ- ಮೋದಿ
8:50 AM
Aug 15, 2021
ಕರ್ನಾಟಕ: 75ನೇ ಸ್ವಾತಂತ್ರ್ಯ ಸಂಭ್ರಮ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದವರೆಗೂ ನಡೆಯಲಿರುವ ಮೆರವಣಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಬಿ.ಕೆ ಹರಿಪ್ರಸಾದ್, ಸಲೀಂ ಅಹಮ್ಮದ್, ವಿ.ಎಸ್ ಉಗ್ರಪ್ಪ, ವಿ.ಆರ್ ಸುದರ್ಶನ್ ಸೇರಿದಂತೆ ಹಲವರ ಆಗಮನ
8:48 AM
Aug 15, 2021
ಮಹಾರಾಷ್ಟ್ರದಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಧ್ವಜಾರೋಹಣ ನೆರವೇರಿಸಿದರು.
8:46 AM
Aug 15, 2021
ಸರ್ಕಾರವು ಮೊದಲ ಡ್ರೈವರ್ ಸೀಟಿನಲ್ಲಿ ಕುಳಿತುಕೊಳ್ಳುತ್ತಿತ್ತು, ಬಹುಶಃ ಆ ಸಮಯದಲ್ಲಿ ಅದು ಬೇಕಾಗಿತ್ತು, ಆದರೆ ಇಂದು ದೇಶ ಬದಲಾಗಿದೆ, ಅನಗತ್ಯ ಕಾನೂನುಗಳು ಮತ್ತು ಕಾರ್ಯವಿಧಾನಗಳ ಜಾಲದಿಂದ ಜನರನ್ನು ಮುಕ್ತಗೊಳಿಸಲು ಕಳೆದ 7 ವರ್ಷಗಳಿಂದ ಪ್ರಯತ್ನಗಳು ಹೆಚ್ಚಾಗಿದೆ. ಇಲ್ಲಿಯವರೆಗೆ ಹಲವು ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ-ಮೋದಿ
8:44 AM
Aug 15, 2021
ಎಲ್ಲಾ ಸೇವೆಯು ಕೊನೆಯ ವ್ಯಕ್ತಿಯವರೆಗೂ ತಲುಪುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ. ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಜನರ ಜೀವನದಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ನಿಲ್ಲಿಸಬೇಕಿದೆ- ಮೋದಿ
8:42 AM
Aug 15, 2021
ದೇಶದಲ್ಲಿ ಎಲ್ಲಾ ಸೈನಿಕ ಶಾಲೆಗಳಲ್ಲಿ ಹೆಣ್ಣುಮಕ್ಕಳು ಕೂಡ ಕಲಿಯಲಿದ್ದಾರೆ- ಮೋದಿ
8:42 AM
Aug 15, 2021
ದೇಶದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳನ್ನು ತರಲು ರಾಜಕೀಯ ಇಚ್ಛಾಶಕ್ತಿಯ ಅಗತ್ಯವಿದೆ. ಭಾರತದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇಲ್ಲ ಎಂಬುದನ್ನು ಜಗತ್ತು ನೋಡುತ್ತಿದೆ. ಸುಧಾರಣೆಗಳನ್ನು ತರಲು ಉತ್ತಮ ಮತ್ತು ಚುರುಕಾದ ಆಡಳಿತದ ಅಗತ್ಯವಿದೆ. ಭಾರತವು ಆಡಳಿತದ ಹೊಸ ಅಅಧ್ಯಾಯವನ್ನು ಬರೆಯುತ್ತಿದೆ ಎಂಬುದಕ್ಕೆ ಜಗತ್ತು ಸಾಕ್ಷಿಯಾಗಲಿದೆ-ಮೋದಿ
8:38 AM
Aug 15, 2021
ಆಧುನಿಕ ಮೌಲಸೌಕರ್ಯದ ಜತೆಗೆ ಭಾರತವು ಮೂಲಸೌಕರ್ಯ ನಿರ್ಮಾಣದಲ್ಲಿ ಆಧುನಿಕತೆ ವಿಧಾನವನ್ನು ಅಳವಡಿಸಿಕೊಳ್ಳಬೇಕು. ನಾವು ಶೀಘ್ರದಲ್ಲೇ ಪ್ರಧಾನಮಂತ್ರಿ ಗತಿ ಶಕ್ತಿ ರಾಷ್ಟ್ರೀಯ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯು ಭಾರತವನ್ನು ಪರಿವರ್ತಿಸುತ್ತದೆ ಹಾಗೂ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ-ಮೋದಿ
8:34 AM
Aug 15, 2021
200 ವರ್ಷಗಳ ಮೊದಲು ನಮ್ಮಲ್ಲಿ ಒಂದು ಕಾನೂನಿತ್ತು, ಅದರಿಂದಾಗಿ ಜನರಿಗೆ ನಕ್ಷೆ ಮಾಡುವ ಸ್ವಾತಂತ್ರ್ಯ ಇರಲಿಲ್ಲ, ನಕ್ಷಾ ಮಾಡಲು ಜನರು ಸರ್ಕಾರವನ್ನು ಕೇಳಬೇಕಿತ್ತು, ನಕ್ಷೆ ಕಳೆದು ಹೋದರೂ ಸರ್ಕಾರಕ್ಕೆ ತಿಳಿಸಬೇಕಿತ್ತು, ಆದರೆ ಪ್ರತಿಯೊಬ್ಬರ ಮೊಬೈಲ್‌ನಲ್ಲಿ ಮ್ಯಾಪ್‌ಗಳಿವೆ ಹಾಗಾದರೆ ದೇಶ ಹೇಗೆ ಬದಲಾವಣೆ ಕಂಡುಕೊಂಡಿದೆ ಎಂಬುದರ ಬಗ್ಗೆ ಗಮನಿಸಬೇಕಿದೆ, ಬಾಹ್ಯಾಕಾಶ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ- ಮೋದಿ
8:32 AM
Aug 15, 2021
ಕಳೆದ 2 ವರ್ಷಗಳಲ್ಲಿ ಜಲಜೀವನ್ ಮಿಷನ್‌ನಿಂದ 4.5 ಕೋಟಿ ಮನೆಗಳಿಗೆ ನೀರು ಒದಗಿಸಲಾಗಿದೆ- ಮೋದಿ
8:30 AM
Aug 15, 2021
ಸಣ್ಣ ರೈತರನ್ನು ಮನ್ನಲೆಗೆ ತರುವ ಪ್ರಯತ್ನವಾಗುತ್ತಿದೆ, ಭಾರತದ 70 ಪ್ರದೇಶಗಳಿಗೆ ಕಿಸಾನ್ ರೈಲು ತೆರಳುತ್ತಿದೆ-ಮೋದಿ
8:28 AM
Aug 15, 2021
ನೀವು ಉತ್ಪಾದಿಸುವ ಎಲ್ಲಾ ವಸ್ತುಗಳು ಭಾರತದ ರಾಯಭಾರಿ, ಹೌದು ಇದು ಮೇಡ್ ಇನ್ ಇಂಡಿಯಾ ಇದು ನಮಗೆ ಬೇಕು ಎಂದು ಹೇಳುವ ಸಮಯ ಬಂದೇ ಬರುತ್ತದೆ-ಮೋದಿ
8:27 AM
Aug 15, 2021
ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಅವರು ಧ್ವಜಾರೋಹಣ ನೆರವೇರಿಸಿದರು
ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌಹಾಣ್ ಅವರು ಧ್ವಜಾರೋಹಣ ನೆರವೇರಿಸಿದರು.
8:26 AM
Aug 15, 2021
ಮಾಣಿಕ್ ಶಾ ಪರೆಡ್ ಗ್ರೌಂಡ್ 75 ನೇ ಸ್ವಾತಂತ್ರ್ಯ ಸಂಭ್ರಮ ಕ್ಕೆ ಸಜ್ಜು, ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ 75 ನೇ ಸ್ವಾತಂತ್ರ್ಯ ಸಂಭ್ರಮ , SOP ಮಾರ್ಗಸೂಚಿಗಳಂತೆ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ, ಬೆಳಗ್ಗೆ 8:55 ಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮನ, 9ಗಂಟೆಗೆ ಮುಖ್ಯಮಂತ್ರಿಗಳಿಂದ ರಾಷ್ಟ್ರ ಧ್ವಜಾರೋಹಣ, ಧ್ವಜಾರೋಹಣ ಬಳಿಕ ಬಸವರಾಜ್ ಬೊಮ್ಮಾಯಿ ತೆರೆದ ಜೀಪಿನಲ್ಲಿ ಪರೆಡ್ ವೀಕ್ಷಣೆ ನಂತರ ರಾಷ್ಟ್ರ ಗೀತೆ, ಗೌರವರಕ್ಷೆ ಸ್ವೀಕರಿಸಲು KSRP,CRPF,BSF,CAR,KSISF, TRAFFIC POLICE, ಸೇರಿದಂತೆ ಇನ್ನಿತರ ತಂಡಗಳು ಭಾಗಿಯಾಗಿ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಮಾಣಿಕ್ ಶಾ ಪೆರೆಡ್ ಗ್ರೌಂಡ್ ಸುತ್ತ ಕಟ್ಟೆಚ್ಚರ.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+