ಮನೆ ಮನೆ ಮೇಲೆ ತಿರಂಗಾ, ಪ್ರಮಾಣ ಪತ್ರ ಡೌನ್ ಲೋಡ್ ಮಾಡ್ಕೊಳ್ಳಿ!
ನವದೆಹಲಿ, ಆಗಸ್ಟ್ 15: ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ದೇಶದಾದ್ಯಂತ ಮನೆ ಮನೆ ತ್ರಿವರ್ಣ ಧ್ವಜ ಹಾರಿಸಿ, ಜನತೆ ಸಂಭ್ರಮಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿದ್ದು, 76ನೇ ವರ್ಷದ ಸಂಭ್ರಮಾಚರಣೆಗೂ ಮುನ್ನ ದೇಶದ ಜನತೆಗೆ ತ್ರಿವರ್ಣ ಧ್ವಜಾರೋಹಣದ ಮಹತ್ವ ತಿಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಯಶಸ್ವಿಯಾಗಿದೆ.
ಹರ್ ಘರ್ ತಿರಂಗಾ ಹೆಸರಿನ ಅಭಿಯಾನವನ್ನು ಆಗಸ್ಟ್ 13 ರಿಂದ 15ರ ತನಕ ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜಾರಿಗೊಳಿಸಲಾಗಿತ್ತು. ಆದರೆ, ಅನೇಕರಿಗೆ ತಮ್ಮ ಮನೆ ಮೇಲೆ ತ್ರಿವರ್ಣ ಬಾವುಟ ಹಾರಿಸಲು ಸಾಧ್ಯವಾಗದ ಕಾರಣ, ವರ್ಚ್ಯುಯಲ್ ಆಗಿ ಬಾವುಟ ಹಾರಾಟ ಮಾಡಿ ಸಂಭ್ರಮಿಸಲು ಅವಕಾಶ ಒದಗಿಸಲಾಗಿದೆ.
ಹರ್ ಘರ್ ತಿರಂಗಾ ಅಭಿಯಾನ ಯಶಸ್ಸಿಗಾಗಿ ಪ್ರತ್ಯೇಕ ವೆಬ್ ತಾಣವನ್ನು ಸರ್ಕಾರ ರೂಪಿಸಿ, ಜನತೆಗೆ ನೀಡಿದ್ದು, ಭಾರತದ ರಾಷ್ಟ್ರಧ್ವಜವನ್ನು ವರ್ಚ್ಯುಯಲ್ ಆಗಿ ಕೋಟ್ಯಂತರ ಮಾಡಿ ಹಾರಿಸಿ ಸಂಭ್ರಮಿಸಿದ್ದಾರೆ. ವಿವಿಧ ವೇದಿಕೆಗಳಲ್ಲಿ ತ್ರಿವರ್ಣ ಧ್ವಜ ರಾರಾಜಿಸುವಂರಾಗಿದೆ. ಈ ರೀತಿ ವರ್ಚ್ಯುಯಲ್ ಅಭಿಯಾನದಲ್ಲಿ ಪಾಲ್ಗೊಂಡವರು ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು. ಇದಕ್ಕಾಗಿ ವೆಬ್ ಸೈಟ್ ನಲ್ಲಿ ಹಾರಾಡುವ ತಿರಂಗಾದ ಜೊತೆಗೆ ಒಂದು ಸೆಲ್ಫಿ ಸಾಕು.

- ಹರ್ ಘರ್ ತಿರಂಗಾ ಪ್ರಮಾಣ ಪತ್ರ ಡೌನ್ ಲೋಡ್ ಮಾಡಿಕೊಳ್ಳುವುದು ಹೇಗೆ?
- ಹರ್ ಘರ್ ತಿರಂಗಾ ವೆಬ್ ತಾಣಕ್ಕೆ ಭೇಟಿ ಕೊಡಿ
- ವೆಬ್ ತಾಣದ ಮುಖಪುಟದಲ್ಲಿ ಕಾಣುವ Pin A Flag ಕ್ಲಿಕ್ ಮಾಡಿ
- ಇದಕ್ಕೂ ಮುನ್ನ ನಿಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ
- ನಂತರ Next ಕ್ಲಿಕ್ ಮಾಡಿ
- ನಿಮ್ಮ location ತಿಳಿಯಲು ಅನುಮತಿ ಕೋರಲಾಗುತ್ತದೆ. ಮ್ಯಾಪ್ ನೋಡಿ ನೀವು ನೆಲೆಸಿದ ಸ್ಥಳವನ್ನು ಸರಿಯಾಗಿ ಮಾರ್ಕ್ ಮಾಡಿ.
- ಬಾವುಟವನ್ನು ಪಿನ್ ಮಾಡಿ, ಪಾಪ್ ಅಪ್ ಮೂಲಕ ಅಭಿಯಾನದಲ್ಲಿ ಪಾಲ್ಗೊಂಡಿದ್ದಕ್ಕೆ ಧನ್ಯವಾದ ಎಂಬ ಸಂದೇಶ ಬರಲಿದೆ.
- ಡೌನ್ ಲೋಡ್ ಕ್ಲಿಕ್ ಮಾಡಿ ಸೇವ್ ಮಾಡಿಕೊಳ್ಳಿ. ಇದು PNG ಮಾದರಿಯಲ್ಲಿರಲಿ.
ದೇಶದ 75 ನೇ ಸ್ವಾತಂತ್ರ್ಯದ ವಾರ್ಷಿಕೋತ್ಸವವನ್ನು ಗುರುತಿಸಲು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿತ್ತು. ಭಾರತೀಯ ಜನರು ರಾಷ್ಟ್ರಧ್ವಜವನ್ನು ಮನೆ ತಂದು 'ಹರ್ ಘರ್ ತಿರಂಗ' ಅಭಿಯಾನದ ಭಾಗವಾಗಲು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.

ಈ ಕಾರ್ಯಕ್ರಮವು ಎಲ್ಲೆಡೆ ಭಾರತೀಯರನ್ನು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಪ್ರೇರೇಪಿಸುತ್ತದೆ. ಕಾರ್ಯಕ್ರಮದ ಉದ್ದೇಶವು ರಾಷ್ಟ್ರಧ್ವಜದೊಂದಿಗಿನ ಸಂಬಂಧವನ್ನು ಕೇವಲ ಔಪಚಾರಿಕ ಅಥವಾ ಸಾಂಸ್ಥಿಕವಾಗಿ ಇಟ್ಟುಕೊಳ್ಳುವುದಕ್ಕಿಂತ ಹೆಚ್ಚಾಗಿ ವೈಯಕ್ತಿಕವಾಗಿ ಸಂಭ್ರಮಿಸುವುದಾಗಿದೆ.
ಹಾಗೆ ನೋಡಿದರೆ, ಆಜಾದಿ ಕಾ ಅಮೃತ್ ಮಹೋತ್ಸವದ ಅಧಿಕೃತ ಆಚರಣೆಯು ಮಾರ್ಚ್ 12, 2021 ರಂದು ಪ್ರಾರಂಭವಾಯಿತು, ಇದು ನಮ್ಮ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವಕ್ಕೆ 75 ವಾರಗಳ ಕೌಂಟ್ಡೌನ್ ಅನ್ನು ಪ್ರಾರಂಭಿಸಿತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications