ಮ್ಯೂಸಿಕ್ ಬ್ಯಾಂಡ್ಗಳು ಸ್ವಾತಂತ್ರ್ಯ ದಿನದಂದು ದೇಶಭಕ್ತಿ ಗೀತೆಗಳನ್ನು ಮಾತ್ರ ನುಡಿಸಬೇಕು: ಕೇಂದ್ರ
ನವದೆಹಲಿ, ಆಗಸ್ಟ್. 04: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಕೇಂದ್ರವು ವಿಶೇಷ ಸೂಚನೆಗಳನ್ನು ಜಾರಿ ಮಾಡಿದೆ. ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ ಮನೆಗಳಲ್ಲಿ ಮ್ಯೂಸಿಕ್ ಬ್ಯಾಂಡ್ಗಳಿಗೆ "ದೇಶಭಕ್ತಿಯ ಸಂಗೀತವನ್ನು ಮಾತ್ರ ನುಡಿಸಲು" ಸೂಚಿಸಲಾಗಿದೆ. ಸಾಂಪ್ರದಾಯಿಕ 'ಅಟ್-ಹೋಮ್' ಕಾರ್ಯಕ್ರಮಗಳಲ್ಲಿ ಚಲನಚಿತ್ರಗಳ ಹಾಡುಗಳನ್ನು ಮಾತ್ರ ನುಡಿಸಬಾರದು ಎಂದು ತಿಳಿಸಿದೆ.
"ರಾಜ್ಯಪಾಲರು, ಲೆಫ್ಟಿನೆಂಟ್ ಗವರ್ನರ್ ಹೌಸ್ನಲ್ಲಿರುವ ಬ್ಯಾಂಡ್ಗೆ ವಿಶೇಷ ಗಮನವನ್ನು ನೀಡಬಹುದು. ಇದು ದೇಶಭಕ್ತಿಯ ಗೀತೆಗಳನ್ನು ಪ್ಲೇ ಮಾಡಬೇಕು. ಚಲನಚಿತ್ರಗಳ ಹಾಡುಗಳಲ್ಲ. ಶಾಲಾ ಬ್ಯಾಂಡ್ಗಳ ನಡುವೆ ಸ್ಪರ್ಧೆಯ ವ್ಯವಸ್ಥೆಯನ್ನು ಮಾಡಬೇಕು.ಇದರಿಂದಾಗಿ ವಿಜೇತರು 'ಅಟ್ ಹೋಮ್' ಸ್ವಾಗತದ ಸಮಯದಲ್ಲಿ ಗವರ್ನರ್ ಭವನದಲ್ಲಿ ಪ್ರದರ್ಶನ ನೀಡುತ್ತಾರೆ" ಎಂದು ತಿಳಿಸಲಾಗಿದೆ.

"ಗವರ್ನರ್, ಲೆಫ್ಟಿನೆಂಟ್ ಗವರ್ನರ್ 'ಅಟ್ ಹೋಮ್' ಆಮಂತ್ರಣ ಕಾರ್ಡ್ ಅನ್ನು ಆಹ್ವಾನಿತರು ತಮ್ಮ ಮನೆಗಳಲ್ಲಿ ಸ್ಮರಣಿಕೆಗಳನ್ನಾಗಿ ಉಳಿಸಿಕೊಳ್ಳುವ ರೀತಿಯಲ್ಲಿ ರಚಿಸಬೇಕು. ಇದನ್ನು ಜೀವನದಲ್ಲಿನ ವಿಶೇಷ ಸಂದರ್ಭವೆಂದು ಗುರುತಿಸಬೇಕು" ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ (MHA) ಸೂಚನೆಯಲ್ಲಿ ತಿಳಿಸಲಾಗಿದೆ.
ಅಟ್-ಹೋಮ್ ಕಾರ್ಯವು ಸಾಮಾನ್ಯ ಪ್ರೋಟೋಕಾಲ್ ಆಧಾರಿತ ಆಹ್ವಾನಿತರನ್ನು ಹೊರತುಪಡಿಸಿ ವೈವಿಧ್ಯಮಯ ಆಹ್ವಾನಿತರನ್ನು ಪ್ರತಿನಿಧಿಸುತ್ತದೆ. ಈ ವರ್ಷ, ಸಮಾಜಕ್ಕೆ ಅನುಕರಣೀಯ ಕೊಡುಗೆಗಳನ್ನು ನೀಡಿದ ವಿವಿಧ ಕ್ಷೇತ್ರಗಳಲ್ಲಿನ ಸಾಧಕರು ಸ್ವಾತಂತ್ರ್ಯ ದಿನದ ಕಾರ್ಯಕ್ರಮದ ಭಾಗವಾಗಲಿದ್ದಾರೆ ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸಾಮಾಜಿಕ ಮಾಧ್ಯಮದಾದ್ಯಂತ ದೇಶಭಕ್ತಿ, ರಾಷ್ಟ್ರೀಯ ಏಕೀಕರಣ ಸಂದೇಶಗಳು ಮತ್ತು ದೇಶಭಕ್ತಿಯ ಹಾಡುಗಳನ್ನು ಪ್ರಚಾರ ಮಾಡಲು ಮತ್ತು ಪರಸ್ಪರ ತಿಳುವಳಿಕೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ನಿರ್ದೇಶಿಸಿದೆ.

ಭಾರತವು ತನ್ನ 77 ನೇ ಸ್ವಾತಂತ್ರ್ಯ ದಿನವನ್ನು 15 ಆಗಸ್ಟ್ 2023 ರಂದು ಆಚರಿಸಲಿದೆ. ಪ್ರತಿ ವರ್ಷ ಸ್ವಾತಂತ್ರ್ಯ ದಿನದಂದು, ಪ್ರಧಾನ ಮಂತ್ರಿ ಭಾರತದ ಕೆಂಪು ಕೋಟೆಯ ಸ್ಮಾರಕದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ ಮತ್ತು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಇದಾದ ನಂತರ ಮಿಲಿಟರಿ ಪರೇಡ್ ನಡೆಯುತ್ತದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications