Independence Day: ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ
ಬೆಂಗಳೂರು, ಆಗಸ್ಟ್ 15: ರಾಜ್ಯದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ 2024ರ ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಕಾರ್ಯಕ್ರಮಗಳು ನಡೆಯಲಿದೆ. ಬೆಳಗ್ಗೆ 8.58ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಧ್ವಜಾರೋಹಣ ಬಳಿಕ ತೆರೆದ ಜೀಪ್ನಲ್ಲಿ ಪೆರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾರಂಭದಲ್ಲಿ ರಾಜ್ಯ ಸಂಪುಟದ ಎಲ್ಲಾ ಸಚಿವರು, ರಾಜ್ಯ ಎಲ್ಲಾ ಶಾಸಕರು, ಅಧಿಕಾರಿಗಳು ಹಾಗೂ ರಾಜ್ಯದ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಲಿದ್ದಾರೆ.

ಇನ್ನು ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಗ್ರೌಂಡ್ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸಾವಿರಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. 10 ಡಿಸಿಪಿ, 17 ಎಸಿಪಿ, 42 ಇನ್ಸ್ಪೆಕ್ಟರ್, 112 ಪಿಎಸ್ಐ, 62 ಎಎಸ್ಐ, 511 ಕಾನ್ಸ್ಸ್ಟೇಬಲ್ಗಳು, 72 ಮಹಿಳಾ ಸಿಬ್ಬಂದಿ, ಹಾಗೂ 129 ಮಂದಿ ಮಫ್ತಿಯಲ್ಲಿ ಸಿಬ್ಬಂದಿಯನ್ನು ಭದ್ರತೆಗೆ ನೇಮಕ ಮಾಡಲಾಗಿದೆ.
ಇನ್ನು 27 ಜನರಿಂದ ಮಾಣಿಕ್ ಷಾ ಮೈದಾನದ ಸಿಸಿಟಿವಿ ಪರಿಶೀಲನೆ ನಡೆಯಲಿದ್ದು, ಹೆಚ್ಚುವರಿಯಾಗಿ ಹತ್ತು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಮಾಣಿಕ್ ಷಾ ಮೈದಾನದ ಪ್ರತಿ ಗೇಟ್ನಲ್ಲೂ ಪೊಲೀಸರು ತಪಾಸಣೆ ನಡೆಸಲಿದ್ದು, ಏನಾದರೂ ಅನುಮಾನ ಬಂದರೆ ಅಂತಹ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಿದ್ದಾರೆ. ಜೊತೆಗೆ ಅಂಬ್ಯುಲೆನ್ಸ್ಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ವಾಹನಗಳ ನಿಯೋಜನೆ ಮಾಡಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications