ಭಾರತದಲ್ಲಿ 74 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾ ಲಸಿಕೆ
ನವದೆಹಲಿ, ಫೆಬ್ರವರಿ.11: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 4.13 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕಳೆದ 27 ದಿನಗಳಲ್ಲಿ 74 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ದೇಶಾದ್ಯಂತ ಇದುವರೆಗೂ 74,30,866 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಯುತ್ತಿದೆ. ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. 5,790,832 ಆರೋಗ್ಯ ಸಿಬ್ಬಂದಿ ಮತ್ತು 1,640,034 ಕಾರ್ಮಿಕರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 7,52,501
ಗುಜರಾತ್ - 6,43,438
ಮಹಾರಾಷ್ಟ್ರ - 6,00,456
ರಾಜಸ್ಥಾನ - 5,69,717
ಮಧ್ಯಪ್ರದೇಶ - 4,85,593
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications