Lok Sabha Election 2024: 'ಮೈತ್ರಿಕೂಟ' ಗೆದ್ದರೆ ಕಾಂಗ್ರೆಸ್ನ 'ಪ್ರಧಾನಿ ಅಭ್ಯರ್ಥಿ' ಬಹಿರಂಗಪಡಿಸಿದ ಶಶಿ ತರೂರ್
ಬೆಂಗಳೂರು, ಅಕ್ಟೋಬರ್ 17: ಮುಂಬರಲಿರುವ 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ವಿರೋಧ ಪಕ್ಷಗಳೆಲ್ಲ ಸೇರಿ ಮಾಡಿಕೊಂಡ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಯಾರು ಪ್ರಧಾನಿ ಆಗುತ್ತಾರೆ ಎಂದು ಕಾಂಗ್ರಸ್ ಹಿರಿಯ ನಾಯಕ ಶಶಿ ತರೂರ್ ಬಹಿರಂಗಪಡಿಸಿದ್ದಾರೆ.
ಈ ಬಾರಿಯ (2024) ಸಾರ್ವತ್ರಿಕ ಚುನಾವಣೆ ಫಲಿತಾಂಶವು ಆಶ್ಚರ್ಯಕರವಾಗಿರಬಹುದು ಎನ್ನುವ ಮೂಲಕ ಇಂಡಿಯಾ ಮೈತ್ರಿ ಕೂಟ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವನ್ನು ಸೋಲಿಸುವ ಮೂಲಕ ಕೇಂದ್ರದಲ್ಲಿ ಇಂಡಿಯಾ ಬಣ ಅಧಿಕಾರಕ್ಕೆ ಬರುವ ಸಾಧ್ಯತೆಗಳಿವೆ ಎಂದು ಪಿಟಿಐ ವರದಿ ಮಾಡಿದೆ.

ಅಂದುಕೊಂಡಂತೆ ಇಂಡಿಯಾ ಮೈತ್ರಿಕೂಟವು ಭಾರತದಲ್ಲಿ ಅಧಿಕಾರಕ್ಕೆ ಬಂದರೆ, ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅಥವಾ ಈಗಿರುವ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾರತದ ಪ್ರಧಾನಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಬಹುದು ಎಂದು ಶಶಿ ತರೂರ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಮಂಗಳವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಫಲಿತಾಂಶಕ್ಕಾಗಿ ಕಾದು ನೋಡಬೇಕಿದೆ. ಮೈತ್ರಿ ಬಣ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್ ಸಮ್ಮಿಶ್ರದ ಭಾಗವಾಗಿರುವ ಕಾರಣ ಆ ಪಕ್ಷಗಳ ನಾಯಕರು ಒಟ್ಟಾಗಿ ಸೇರಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕಿರುತ್ತದೆ ಎಂದು ಅವರು ತಿಳಿಸಿದರು.

ಸಮರ್ಥವಾಗಿ ಜವಾಬ್ದಾರಿ ನಿಭಾಯಿಸಿದ ಕಾಂಗ್ರೆಸ್
ನನ್ನ ಊಹೆಯ ಪ್ರಕಾರ ಮೈತ್ರಿ ಬಣದಲ್ಲಿ ಹಳೆಯ ಪಕ್ಷವಾದ ಕಾಂಗ್ರೆಸ್ ನಾಯಕರು ಅದರಲ್ಲೂ ದಲಿತ ನಾಯಕರೊಬ್ಬರು ಪ್ರಧಾನಿ ಹುದ್ದೆಗೆ ಆಯ್ಕೆ ಆಗಲೂಬಹುದು. ಇಲ್ಲವೇ ವರ್ಷಗಳ ಕಾಲ ಆಡಳಿತ ನಡೆಸಿದ ಪಕ್ಷ ನಾಯಕ ರಾಹುಲ್ ಗಾಂಧಿಯವರು ಪ್ರಧಾನಿ ಅಭ್ಯರ್ಥಿ ಆಯ್ಕೆಗಳು ನಡೆಯುವ ಸಾಧ್ಯತೆಗಳಿವೆ. ಕಾರಣ ರಾಹುಲ್ ಗಾಂಧಿಯವರ ಕುಟುಂಬವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ ಉದಾಹರಣೆಗಳು ಇವೆ ಎಂದರು.
ಬಿಹಾರದ ನಿತೀಶ್ ಕುಮಾರ್ ಜೆಡಿಯು ನೇತೃತ್ವದ ಸರ್ಕಾರವು ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ಗಢದಲ್ಲಿ ನಡೆಯಲಿರುವ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ತಿಂಗಳುಗಳ ಮೊದಲೇ ಬಿಹಾರ ಜಾತಿ ಗಣತಿಯನ್ನು ವಿಚಾರ ಪ್ರಸ್ತಾಪಿಸಿದ್ದರು. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಅಸ್ತ್ರ ಪ್ರಯೋಗಿಸಿದ್ದರು. ಇದು ಸಹ ಲೋಕಸಭಾ ಚುನಾವಣೆಯಲ್ಲಿ ಪುನಃ ಬಳಕೆ ಆಗಲಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ












Click it and Unblock the Notifications