Terrorist Encounter: ಭಾರತ ಸೇನೆಯಿಂದ ಉಗ್ರನ ಎನ್ಕೌಂಟರ್: ಇಬ್ಬರಿಗೆ ಶೋಧ, ಅರಣ್ಯದಲ್ಲಿ ಸೇನಾ ಕಾರ್ಯಾಚರಣೆ
ನವದೆಹಲಿ, ಮೇ 13: ಕದನ ವಿರಾಮ ಘೋಷಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಮಧ್ಯದ ಯುದ್ಧಕ್ಕೆ ಬ್ರೇಕ್ ಬಿದ್ದಿದೆ. ಇದರ ಬೆನ್ನಲ್ಲೆ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಮುಂದುವರಿಸಿದೆ. ಹೇಗೆಂದರೆ, ಪಹಲ್ಗಾಮ್ನಲ್ಲಿ ದಾಳಿ ಮಾಡಿ ನಾಗರಿಕರನ್ನು ಹತ್ಯೆಗೈದ ಲಷ್ಕರ್ ಸಂಘಟನೆಯ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರೆಸಿದೆ. ಮಂಗಳವಾರ LeT ಸಂಘಟನೆಯ ಉಗ್ರನೊಬ್ಬನ್ನು ಭಾರತ ಭರ್ಜರಿ ಭೇಟೆ ಆಡಿದೆ. ಇನ್ನಿಬ್ಬರು ಉಗ್ರರಿಗಾಗಿ ಕಾಡಿನ ಪ್ರದೇಶದಲ್ಲಿ ಶೋಧ ಕಾರ್ಯ ಮುಂದುವರಿಸಿದೆ.
ಹೌದು, ಕದನ ವಿರಾಮ ಬಳಿಕ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿಯವರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಆದರೆ ಉಗ್ರರ ವಿರುದ್ಧ ಕೈಗೊಂಡಿದ್ದ ಕಾರ್ಯಾಚರಣೆಯನ್ನು ಭಾರತೀಯ ಸೇನೆ ಮುಂದುವರಿಸಿದೆ. ಇದರ ಪರಿಣಾಮವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ಓರ್ವ ಉಗ್ರನನ್ನು ಭಾರತದ ಸೌನಿಕರು ಎನ್ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ. ಇನ್ನಿಬ್ಬರಿಗಾಗಿ ಶೋಪಿಯಾನ್ ನ ಕೆಲ್ಲಾರ್ ಕಾಡಿನಲ್ಲಿ ಸೈನಿಕರ ತಲಾಷ್ ನಡೆಸುತ್ತಿದ್ದಾರೆ.

ಉಗ್ರರು ಅಡಗಿ ಕುಳಿತಿದ್ದ ಪ್ರದೇಶ ಪತ್ತೆ ಮಾಡಿ ಓರ್ವನಿಗೆ ಹೆಡೆಮುರಿ ಕಟ್ಟಿದ್ದ ಸೈನಿಕರು, ಶಂಕಿತ ಉಗ್ರರ ಸ್ಥಳಗಳನ್ನು ಸುತ್ತುವರಿದಿದ್ದಾರೆ. ಈ ಮೂಲಕ ಪಾಕಿಸ್ತಾನ ಬೆಂಬಲಿತ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರಿದಿದೆ ಎನ್ನಬಹುದು.
ಉಗ್ರರ ವಿರುದ್ಧ ಕಾರ್ಯಾಚರಣೆ ನಿಲ್ಲಲ್ಲ
ಯುದ್ಧ ಪೂರ್ಣಗೊಂಡಿಲ್ಲ, ಸದ್ಯಕ್ಕೆ ನಿಂತಿದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡದ ಬೆನ್ನಲ್ಲೆ ಭದ್ರತಾ ಪಡೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಈ ವೇಳೆ ಒಬ್ಬನನ್ನು ಹತ್ಯೆ ಮಾಡಲಾಗಿದೆ. ಪಹಲ್ಗಾಮ್ ಉಗ್ರರನ್ನು ಹೊಡೆದುರುಳಿಸುವವರಗೆ ಈ ಕಾರ್ಯಾಚರಣೆ ನಿಲ್ಲುವುದು ಅನುಮಾನ.
ನೆನ್ನೆ ಕದನ ವಿರಾಮ ಬೆನ್ನಲ್ಲೆ ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಅದಾದ ಬಳಿಕ ಗಡಿಯಲ್ಲಿ ಮತ್ತೆ ಪಾಕಿಸ್ತಾನ ಶೆಲ್ ದಾಳಿ ನಡೆಸಿದ್ದು ಗಮನಕ್ಕೆ ಬಂದಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನ ಗಡಿ ಭಾಗಗಳಲ್ಲಿ ಪಾಕಿಸ್ತಾನಿ ಶೇಲ್ ದಾಳಿಯನ್ನು ವಿಫಲಗೊಳಿಸಲಾಗಿದೆ. ಶೆಲ್ ಗಳ ಅವೇಷಗಳು ಲಭ್ಯವಾಗಿವೆ.
ಪಾಕ್ನಿಂದ ನರಿ ಬುದ್ಧಿ ಪ್ರದರ್ಶನ
ಇಂದು ರಜೌರಿ ಗಡಿಯಲ್ಲಿ ಜೀವಂತ ಶೆಲ್ ಸಿಕ್ಕಿದೆ. ಸ್ಪೋಟಿಸದೇ ವಿಫಲವಾಗಿ ಬಿದ್ದಿದ್ದ ಪಾಕಿಸ್ತಾನಿ ಶೆಲ್ ಅನ್ನು ಭಾರತೀಯ ಸೇನೆ ನಿಷ್ಕ್ರೀಯಗೊಳಿಸಿದೆ. ನಾಗರಿಕರನ್ನು ಗುರಿಯಾಗಿಸಿಕೊಂಡು ಈ ಶೆಲ್ ದಾಳಿ ನಡೆಸಲಾಗಿತ್ತು. ಯುದ್ಧ ಆರಂಭದಲ್ಲಿ ಶಾಂತಿಮಂತ್ರ ಜಪಿಸಿದ್ಧ ಪಾಕ್ ಮತ್ತೆ ತನ್ನ ಕೆಟ್ಟ ಬುದ್ಧಿ ಪ್ರದರ್ಶಿಸಿದೆ. ಕದನ ವಿರಾಮ ಬಳಿಕವು ಗಡಿಯಲ್ಲಿ ವಿಫಲ ದಾಳಿ ಯತ್ನ ನಡೆಸಿದೆ.
ಸದ್ಯ ಭಾರತ ಆಕ್ಟ್ ಆಫ್ ವಾರ್ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಗಡಿಯಲ್ಲಿ ಎಲ್ಲಿಯಾದರೂ ಉಗ್ರರಿಂದ, ಪಾಕಿಸ್ತಾನದಿಂದ ಒಂದೇ ಒಂದು ದಾಳಿ, ಬಂದೂಕಿನ ಶಬ್ಧ ಕೇಳಿ ಬಂದರೂ ಅದನ್ನು ದಾಳಿ ಎಂದು ಪರಿಗಣಿಸಿ ಯುದ್ಧ ಮಾಡಲಾಗುವು. ನಿಮ್ಮ ಅಣುವಸ್ತ್ರ ಬೆದರಿಕೆಗೆ ಭಾರತ ಜಗ್ಗಲ್ಲ ಎಂದು ಪ್ರದಾನಿ ಗುಡುಗಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications