Happy New Year 2025: ಹೊಸ ಕನಸು, ಭರವಸೆಯೊಂದಿಗೆ ಹೊಸ ವರ್ಷ ಸ್ವಾಗತಿಸಿದ ಭಾರತ
ಹಲವು ಸಿಹಿ-ಕಹಿ ನೆನಪುಗಳ ಜೊತೆ 2024ರ ಹಳೆ ವರ್ಷಕ್ಕೆ ವಿದಾಯ ಹೇಳುತ್ತಾ ಹೊಸ ಕನಸು, ಭರವಸೆಗಳನ್ನು ಹೊತ್ತು 2025ರ ಹೊಸ ವರ್ಷಕ್ಕೆ ಭಾರತೀಯರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಜನ ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಭಾರತ ಮಾತ್ರವಲ್ಲದೆ ಆಸ್ಟ್ರೇಲಿಯಾ, ಜಪಾನ್, ನ್ಯೂಜಿಲೆಂಡ್ ಸೇರಿದಂತೆ ಹಲವು ದೇಶಗಳು ಈಗಾಗಲೇ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಿವೆ.
ಆಸ್ಟ್ರೇಲಿಯಾ ಸಿಡ್ನಿಯಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ನಡೆಯಲಿರುವ ವಿಶ್ವ ಪ್ರಸಿದ್ಧ ಪಟಾಕಿ ಪ್ರದರ್ಶವನ್ನು ಸಾವಿರಾರು ಜನ ಕಣ್ತುಂಬಿಕೊಂಡರು. ಜಪಾನ್, ಚೀನಾ, ದಕ್ಷಿಣ ಕೊರಿಯಾ ಮತ್ತು ಉತ್ತರ ಕೊರಿಯಾ ಕೂಡ 2025ರ ಹೊಸ ವರ್ಷವನ್ನು ಸ್ವಾಗತಿಸಿದವು.

ಜಪಾನ್ನಲ್ಲಿ, 108 ಬಾರಿ ದೇವಾಲಯದ ಗಂಟೆಗಳನ್ನು ಹೊಡೆಯುವುದು, ಜೋಯಾ ನೋ ಕೇನ್ ಎಂದು ಕರೆಯಲ್ಪಡುವ ಆಚರಣೆಯ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲಾಯಿತು.
ಭಾರತದಲ್ಲಿ ಸಂಭ್ರಮಾಚರಣೆ
ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಹಲವು ನಗರಗಳಲ್ಲಿ ಹೊಸ ವರ್ಷಾಚರಣೆಗೆ ಅದ್ದೂರಿ ತಯಾರಿ ಮಾಡಿಕೊಳ್ಳಲಾಗಿತ್ತು. ಪ್ರಮುಖ ಪಟ್ಟಣಗಳಲ್ಲಿ ಸಾವಿರಾರು ಜನ ಗುಂಪು ಸೇರಿ ಹೊಸ ವರ್ಷವನ್ನು ಬರಮಾಡಿಕೊಂಡರು. ದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ, ಹೈದರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಪ್ರಮುಖ ನಗರಗಳು ಹೊಸ ವರ್ಷವನ್ನು ಸ್ವಾಗತಿಸಲು ದೀಪಾಲಂಕಾರದ ಜೊತೆ ಸಜ್ಜಾಗಿದ್ದವು.
ಡಿಜೆ, ಹಾಡು, ಕುಣಿತ ಸಾಮಾನ್ಯವಾಗಿತ್ತು. ಯುವಕ ಯುವತಿಯರು ಸಂಭ್ರಮದಿಂದ ಪಾಲ್ಗೊಂಡು ಹಾಡುಗಳಿಗೆ ಹೆಜ್ಜೆ ಹಾಕಿದರು. ಸರಿಯಾಗಿ 12 ಗಂಟೆಗೆ ಪಟಾಕಿ ಸಿಡಿಸುವ ಜೊತೆಗೆ ಹೊಸ ವರ್ಷವನ್ನು ಸ್ವಾಗತಿಸಿದರು. ಬಳಿಕ ಪರಸ್ಪರ ಶುಭಾಶಯ ಕೋರಿ ಸಂಭ್ರಮಿಸಿದರು.
ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೊಸ ವರ್ಷವನ್ನು ಸ್ವಾಗತಿಸಲು ಮದುವಣಗಿತ್ತಿಯಂತೆ ಸಜ್ಜಾಗಿತ್ತು. ಸಾವಿರಾರು ಯುವಕ ಯುವತಿಯರು ಒಟ್ಟಿಗೆ ಸೇರಿ ಹೊಸ ವರ್ಷವನ್ನು ಸ್ವಾಗತಿಸಿದರು. ಸರಿಯಾಗಿ 12 ಗಂಟೆಗೆ ಪಟಾಕಿಯನ್ನು ಸಿಡಿಸಿ ಸಂಭ್ರಮಿಸಲಾಯಿತು.
ಬೆಂಗಳೂರು ಮಾತ್ರವಲ್ಲದೆ ತುಮಕೂರು, ಕೋಲಾರ, ಚಿಕ್ಕಮಗಳೂರು, ಮಂಗಳೂರು, ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಹೊಸ ವರ್ಷಾಚರಣೆ ಸಂಭ್ರಮ ಜೋರಾಗಿತ್ತು. ಗುಂಪಾಗಿ ಸೇರಿದ ಯುವ ಜನತೆ ಕೇಕ್ ಕತ್ತರಿಸಿ, ಸಿಹಿ ಹಂಚಿ ಹೊಸ ವರ್ಷದ ಶುಭಾಶಯ ಕೋರಿದರು. ಬಳಿಕ ಹಾಡು ಕುಣಿತ ಕೂಡ ಜೋರಾಗಿತ್ತು.
2024ರಲ್ಲಿ ಜಗತ್ತು ಅನೇಕ ಆತಂಕಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ. ರಷ್ಯಾ ಉಕ್ರೇನ್ ಯುದ್ಧ, ಇಸ್ರೇಲ್ ಸಂಘರ್ಷ ಜಗತ್ತನ್ನು ಆತಂಕಕ್ಕೆ ದೂಡಿವೆ. 2025ರ ವರ್ಷದಲ್ಲಿ ಜಗತ್ತಿನದ ಯುದ್ದದ ಕಾರ್ಮೋಡ ಸರಿದು, ಶಾಂತಿಯ ಬೆಳಕು ಮೂಡಲಿ, ಜಗತ್ತು ಅಭಿವೃತ್ತಿಯತ್ತ ಮುನ್ನಡೆಯಲಿ ಎಂದು ಆಶಿಸುತ್ತಾ ಹೊಸ ವರ್ಷವನ್ನು ಸ್ವಾಗತಿಸೋಣ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications