ದಿಢೀರನೆ ಕುಸಿತ ಕಂಡ ಈರುಳ್ಳಿ ಬೆಲೆ, ಈಗೆಷ್ಟಿದೆ?
ನವದೆಹಲಿ, ಅಕ್ಟೋಬರ್ 3: ಏಕಾಏಕಿ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಈಗ ಕುಸಿತ ಕಂಡಿದೆ.
ಬೆಲೆ ಏರಿಕೆ ನಿಯಂತ್ರಣಕ್ಕೆ ತರುವ ಸಲುವಾಗಿ ಕೇಂದ್ರ ಸರ್ಕಾರ ರಫ್ತು ನಿಷೇಧಿಸಿದ ಪರಿಣಾಮ ಬೆಲೆ ಕಡಿಮೆಯಾಗಿದೆ.
ಸೆಪ್ಟೆಂಬರ್ ವರೆಗೂ ಪ್ರತಿ ಕೆಜಿ ಈರುಳ್ಳಿಯ ಬೆಲೆ ರೂ.51 ಇತ್ತು. ಇದೀಗ ಈರುಳ್ಳಿ ಬೆಲೆಯಲ್ಲಿ ಕುಸಿತ ಕಂಡು ಬಂದ ಹಿನ್ನಲೆಯಲ್ಲಿ ಗ್ರಾಹಕರ ಮುಖದಲ್ಲಿ ಸಂತಸ ಕಂಡು ಬಂದಿದೆ.
ಏಷ್ಯಾದ ಅತಿದೊಡ್ಡ ಸಗಟು ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದಲ್ಲಿ ನಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ರೂ.30ಕ್ಕೆ ಇಳಿಕೆಯಾಗಿದೆ.
ಕೇಂದ್ರ ಸರ್ಕಾರ ಕಳೆದ ಭಾನುವಾರ ಈರುಳ್ಳಿ ರಫ್ತು ನಿಷೇಧಿಸಿತ್ತು. ಜೊತೆಗೆ ಮಿತಿಗಿಂತಲೂ ಹೆಚ್ಚು ಪ್ರಮಾಣದಲ್ಲಿ ದಾಸ್ತಾನು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತ್ತು.
ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇತ್ತೀಚೆಗೆ ಎದುರಾದ ಪ್ರವಾಹ ಪರಿಸ್ಥಿತಿಯಿಂದಾಗಿ ಈರುಳ್ಳಿ ಪೂರೈಕೆಯಲ್ಲಿ ಅಡಚಣೆಯುಂಟಾಗಿತ್ತು.
ಆಗಸ್ಟ್ ತಿಂಗಳಿನಿಂದಲೂ ಈರುಳ್ಳಿ ದರದಲ್ಲಿ ಭಾರಿ ಏರಿಕೆ ಕಂಡು ಬಂದಿತ್ತು. ಕೆಲವೆಡೆ ಅಪಾರ ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಂಡಿದ್ದರಿಂದ ಬೆಲೆ ಹೆಚ್ಚಳವಾಗಿದೆ ಎಂದೂ ಕೂಡ ಹೇಳಲಾಗಿತ್ತು.

ಎಲ್ಲಾ ಬಗೆಯ ಈರುಳ್ಳಿ ರಫ್ತು ನಿಷೇಧ
ಎಲ್ಲಾ ಬಗೆಯ ಈರುಳ್ಳಿ ರಫ್ತನ್ನು ಕೇಂದ್ರ ಸರ್ಕಾರ ನಿಷೇಧಿಸಿರುವ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ಸ್ವಲ್ಪ ಸ್ವಲ್ಪವಾಗಿಯೇ ಇಳಿಕೆ ಕಾಣುತ್ತಿದೆ.
ಈರುಳ್ಳಿಯು ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯಬೇಕು, ಇಲ್ಲಿರುವ ಬೇಡಿಕೆಗೆ ತಕ್ಕ ಹಾಗೆ ಮಾರಾಟವು ಕೂಡ ಇರಬೇಕು ಎನ್ನುವ ಕಾರಣಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ರಫ್ತು-ಆಮದು ಸಂಗತಿಗಳನ್ನು ನೋಡಿಕೊಳ್ಳುವರ್ಯಾರು?
ಡಿಜಿಎಫ್ ಟಿಯು ವಾಣಿಜ್ಯ ಸಚಿವಾಲಯದ ಭಾಗವಾಗಿದ್ದು, ರಫ್ತು- ಆಮದು ಸಂಬಂಧಿತ ಸಂಗತಿಗಳನ್ನು ನೋಡಿಕೊಳ್ಳುತ್ತದೆ. ಸೆಪ್ಟೆಂಬರ್ ಹದಿಮೂರನೇ ತಾರೀಕು ಡಿಜಿಎಫ್ ಟಿಯಿಂದ ಕನಿಷ್ಠ ರಫ್ತು ಬೆಲೆಯನ್ನು ಎಂಟು ನೂರಾ ಐವತ್ತು ಅಮೆರಿಕನ್ ಡಾಲರ್ ಗೆ ನಿಗದಿ ಪಡಿಸಿತ್ತು. ಆ ಮೂಲಕ ರಫ್ತಿನ ಮೇಲೆ ಕಡಿವಾಣ ಬೀಳಬಹುದು ಎಂಬ ಲೆಕ್ಕಾಚಾರ ಇತ್ತು.

ಒಂದು ಕೆಜಿ ಈರುಳ್ಳಿ ಬೆಲೆ 70ರೂ ತಲುಪಿತ್ತು
ಈ ರೀತಿ ಕನಿಷ್ಠ ಬೆಲೆ ನಿಗದಿ ಮಾಡಿದರೆ ಅದಕ್ಕಿಂತ ಕಡಿಮೆ ಬೆಲೆಗೆ ರಫ್ತು ಮಾಡುವಂತಿಲ್ಲ. ದೆಹಲಿ ಹಾಗೂ ದೇಶದ ಇತರ ಭಾಗದಲ್ಲಿ ಕೇಜಿ ಈರುಳ್ಳಿ ಬೆಲೆ ಅರವತ್ತರಿಂದ ಎಂಬತ್ತು ರುಪಾಯಿವರೆಗೂ ಆಗಿತ್ತು. ಈರುಳ್ಳಿ ಬೆಳೆಯುವಂಥ ಮಹಾರಾಷ್ಟ್ರದಂಥ ರಾಜ್ಯಗಳಲ್ಲಿ ನೆರೆ ಸಮಸ್ಯೆ ಆಗಿ, ಈರುಳ್ಳಿ ಉತ್ಪಾದನೆಯಲ್ಲಿ ಕುಸಿತವಾಗಿದ್ದರಿಂದ ಈ ಸ್ಥಿತಿ ಏರ್ಪಟ್ಟಿತು ಎನ್ನಲಾಗಿದೆ.

ಒಂದು ಕೆಜಿ ಈರುಳ್ಳಿಗೆ 30 ರೂ
ಈಗ ಒಂದು ಕೆಜಿ ಈರುಳ್ಳಿ ಬೆಲೆ 30ರೂ.ಗೆ ಇಳಿಕಯಾಗಿದೆ. ಸೆಪ್ಟೆಂಬರ್ ವರೆಗೂ ಪ್ರತಿ ಕೆಜಿ ಈರುಳ್ಳಿಯ ಬೆಲೆ ರೂ.51 ಇತ್ತು. ಇದೀಗ ಈರುಳ್ಳಿ ಬೆಲೆಯಲ್ಲಿ ಕುಸಿತ ಕಂಡು ಬಂದ ಹಿನ್ನಲೆಯಲ್ಲಿ ಗ್ರಾಹಕರ ಮುಖದಲ್ಲಿ ಸಂತಸ ಕಂಡು ಬಂದಿದೆ. ಏಷ್ಯಾದ ಅತಿದೊಡ್ಡ ಸಗಟು ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದಲ್ಲಿ ನಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ರೂ.30ಕ್ಕೆ ಇಳಿಕೆಯಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications