ಪಾಕಿಸ್ತಾನ್ದ 16 ಯೂಟ್ಯೂಬ್ ಚಾನಲ್ ಬ್ಯಾನ್ ಮಾಡಿದ ಭಾರತ
ದೆಹಲಿ, ಏಪ್ರಿಲ್ 28: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಹಿನ್ನೆಲೆ ಪಾಪಿ ಪಾಕಿಸ್ತಾನಕ್ಕೆ ಭಾರತ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಪಾಕಿಸ್ತಾನದ ಮೇಲೆ ಯುದ್ದದ ಅಗತ್ಯವಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಪಾಕ್ ಮಾಧ್ಯಮಗಳಲ್ಲಿ ಫುಲ್ ಫೇಮಸ್ ಆಗಿದ್ರು. ಕೆಲ ಚಾನೆಲ್ಗಳಲ್ಲಿ ಸಿದ್ದರಾಮಯ್ಯ ಸುದ್ದಿಯನ್ನೇ ಪದೇ ಪದೇ ಪ್ರಸಾರ ಮಾಡಿದ್ರು. ಇದೀಗ ಸಿದ್ದರಾಮಯ್ಯ ಅವರ ಸುದ್ದಿ ಪ್ರಸಾರ ಮಾಡಿದ ನ್ಯೂಸ್ ಚಾನೆಲ್ನಲ್ಲೇ ಭಾರತ ಸರ್ಕಾರ ಬ್ಯಾನ್ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಕೆಲವೇ ದಿನಗಳ ನಂತರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಹಲ್ಗಾಮ್ ದಾಳಿ ಕುರಿತು ತಪ್ಪು ಮಾಹಿತಿ ಹರಡುತ್ತಿದ್ದ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್ಗಳನ್ನು ಭಾರತ ನಿಷೇಧಿಸಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿದು ಬಂದಿದೆ. ಜಿಯೋ ನ್ಯೂಸ್ನಲ್ಲಿ ಯುದ್ಧ ಬೇಡ ಎಂದಿದ್ದ ಸಿದ್ದರಾಮಯ್ಯ ಕುರಿತ ಸುದ್ದಿ ಪ್ರಸಾರ ಮಾಡಲಾಗಿತ್ತು.

ಜಿಯೋ ನ್ಯೂಸ್, ಡಾನ್, ರಫ್ತಾರ್, ಬೋಲ್ ನ್ಯೂಸ್, ಎಆರ್ವೈ ನ್ಯೂಸ್, ಸಮಾ ಟಿವಿ, ಸುನೋ ನ್ಯೂಸ್ನಂತಹ ಪ್ರಮುಖ ಸುದ್ದಿ ಸಂಸ್ಥೆಗಳ ಯೂಟ್ಯೂಬ್ ಚಾನೆಲ್ಗಳನ್ನು ಭಾರತ ಬಂದ್ ಮಾಡಿದೆ ಎನ್ನಲಾಗ್ತಿದೆ. ಮುನೀಬ್ ಫಾರೂಕ್, ಉಮರ್ ಚೀಮಾ, ಅಸ್ಮಾ ಶಿರಾಜಿ ಮತ್ತು ಇರ್ಷಾದ್ ಭಟ್ಟಿ ಸೇರಿದಂತೆ ಪ್ರಸಿದ್ಧ ಪತ್ರಕರ್ತರ ಯೂಟ್ಯೂಬ್ ಚಾನೆಲ್ಗಳನ್ನು ನಿರ್ಬಂಧಿಸಲಾಗಿದೆ. ಉಜೈರ್ ಕ್ರಿಕೆಟ್, ದಿ ಪಾಕಿಸ್ತಾನ್ ರೆಫರೆನ್ಸ್, ರಾಜಿ ನಾಮಾ ಮತ್ತು ಸಮಾ ಸ್ಪೋರ್ಟ್ಸ್ ಸೇರಿದಂತೆ ಇತರರು ನಿಷೇಧಿತ ಖಾತೆ ಸೇರಿವೆ ಎಂದು ತಿಳಿದು ಬಂದಿದೆ.
ಇನ್ನೂ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಅವರಿಗೆ ಸೇರಿರುವ ಯೂಟ್ಯೂಬ್ ಚಾನೆಲ್ ಕೂಡ ಬ್ಯಾನ್ ಮಾಡಲಾಗಿದೆ. ಪಾಕಿಸ್ತಾನದ ಈ 16 ಯೂಟ್ಯೂಬ್ ಚಾನೆಲ್ಗಳು ಪ್ರಚೋದನಕಾರಿ ಹಾಗೂ ಕೋಮು ಸೂಕ್ಷ್ಮ ವಿಷಯವನ್ನು ಹರಡುತ್ತಿವೆ. ಅಲ್ಲದೇ ಭಾರತದ ವಿರುದ್ಧ ಸುಳ್ಳು ಹಾಗೂ ತಪ್ಪು ನಿರೂಪಣೆಗಳನ್ನು ಪ್ರಚಾರ ಮಾಡುತ್ತಿವೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಈ ಚಾನೆಲ್ಗಳನ್ನು ಇನ್ನು ಮುಂದೆ ಭಾರತದಲ್ಲಿ ಪ್ರವೇಶಿಸಲು ಸಾಧ್ಯವಿಲ್ಲ ಮತ್ತು ಭಾರತ ಮತ್ತು ಅದರ ಭದ್ರತಾ ಪಡೆಗಳ ಬಗ್ಗೆ ದಾರಿತಪ್ಪಿಸುವ ಮಾಹಿತಿಯನ್ನು ಪ್ರಸಾರ ಮಾಡುವುದು ಕಂಡುಬಂದರೆ, ಇತರ ಚಾನೆಲ್ಗಳನ್ನು ಸಹ ತೆಗೆದುಹಾಕಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೂಟ್ಯೂಬ್ ಚಾನೆಲ್ಗಳು ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮವೆಂದು ಪರಿಗಣಿಸಲಾದ ವಿಷಯವನ್ನು ಹರಡುತ್ತಿವೆ. ಜೊತೆಗೆ ಭಾರತ ಹಾಗೂ ಸೇನೆ ಮತ್ತು ಭದ್ರತಾ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಮತ್ತು ದಾರಿ ತಪ್ಪಿಸುವ ನಿರೂಪಣೆಗಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿವೆ ಎಂದು ವರದಿ ಆಗಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications