ದ್ವೇಷ, ನಕಲಿ ಸುದ್ದಿ: 16 ಯೂಟ್ಯೂಬ್ ಚಾನೆಲ್ ನಿರ್ಬಂಧ
ನವದೆಹಲಿ, ಏಪ್ರಿಲ್ 25: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಆರು ಯೂಟ್ಯೂಬ್ ಚಾನೆಲ್ಗಳು ಮತ್ತು ಫೇಸ್ಬುಕ್ ಖಾತೆ ಸೇರಿದಂತೆ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸೋಮವಾರ ನಿರ್ಬಂಧಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ನಿರ್ಬಂಧಿಸಲಾದ ಯೂಟ್ಯೂಬ್ ಚಾನೆಲ್ಗಳು ಮತ್ತು ಫೇಸ್ಬುಕ್ ಖಾತೆಯು 68 ಕೋಟಿಗೂ ಹೆಚ್ಚು ವೀಕ್ಷಕರನ್ನು ಹೊಂದಿದೆ. ಭಾರತದಲ್ಲಿ ಆತಂಕ ಸೃಷ್ಟಿ ಮಾಡಲು, ಕೋಮು ಸೌಹಾರ್ದತೆಯನ್ನು ಪ್ರಚೋದಿಸಲು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರಲು ಸುಳ್ಳು ಸುದ್ದಿಯನ್ನು ಹರಡುತ್ತಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿದ ಹೇಳಿಕೆ ತಿಳಿಸಿದೆ.
"ಐಟಿ ನಿಯಮಗಳು, 2021 ರ ನಿಯಮ 18 ರ ಅಡಿಯಲ್ಲಿ ಅಗತ್ಯವಿರುವಂತೆ ಯಾವುದೇ ಡಿಜಿಟಲ್ ಸುದ್ದಿ ಪ್ರಕಾಶಕರು ಸಚಿವಾಲಯಕ್ಕೆ ಮಾಹಿತಿಯನ್ನು ಒದಗಿಸಿಲ್ಲ," ಎಂದು ಹೇಳಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ.

ಯೂಟ್ಯೂಬ್ ಚಾನೆಲ್ಗಳಲ್ಲಿ ಏನು ಪ್ರಕಟವಾಗಿದೆ?
ನಿರ್ಬಂಧಿಸಲಾದ ಕೆಲವು ಭಾರತ ಮೂಲದ ಯೂಟ್ಯೂಬ್ ಚಾನೆಲ್ಗಳು ಪ್ರಕಟಿಸಿದ ವಿಷಯವು ನಿರ್ದಿಷ್ಟ ಸಮುದಾಯದ ಸದಸ್ಯರನ್ನು ಭಯೋತ್ಪಾದಕರು ಎಂದು ಉಲ್ಲೇಖಿಸಿದೆ. ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷವನ್ನು ಪ್ರಚೋದಿಸುತ್ತದೆ ಎಂದು ಸಚಿವಾಲಯ ಹೇಳಿದೆ.
"ಇಂತಹ ವಿಷಯವು ಕೋಮು ಸೌಹಾರ್ದತೆಯನ್ನು ಉಂಟುಮಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಸಾಮರ್ಥ್ಯವನ್ನು ಹೊಂದಿದೆ ಎಂದು ಕಂಡುಬಂದಿದೆ," ಎಂದು ಅದು ಹೇಳಿದೆ. ಭಾರತ ಮೂಲದ ಅನೇಕ ಯೂಟ್ಯೂಬ್ ಚಾನೆಲ್ಗಳು ಸಮಾಜದ ವಿವಿಧ ವರ್ಗಗಳಲ್ಲಿ ಭೀತಿಯನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿರುವ ದೃಢೀಕರಿಸದ ಸುದ್ದಿ ಮತ್ತು ವೀಡಿಯೊಗಳನ್ನು ಪ್ರಕಟಿಸುತ್ತಿವೆ ಎಂದು ಸಚಿವಾಲಯ ಹೇಳಿದೆ.
"ಉದಾಹರಣೆಗೆ ಕೋವಿಡ್-19 ಕಾರಣದಿಂದಾಗಿ ಪ್ಯಾನ್-ಇಂಡಿಯಾ ಲಾಕ್ಡೌನ್ ಘೋಷಣೆಗೆ ಸಂಬಂಧಿಸಿದ ಸುಳ್ಳು ಸುದ್ದಿಗಳು ಇದೆ. ಆ ಮೂಲಕ ವಲಸೆ ಕಾರ್ಮಿಕರಿಗೆ ಬೆದರಿಕೆ, ಮತ್ತು ಕೆಲವು ಧಾರ್ಮಿಕ ಸಮುದಾಯಗಳಿಗೆ ಬೆದರಿಕೆಗಳನ್ನು ಹಾಕಲಾಗಿದೆ ಎಂದು ಕಪೋಲಕಲ್ಪಿತ ಸುದ್ದಿ ಮಾಡಲಾಗಿದೆ. ಅಂತಹ ವಿಷಯವು ದೇಶದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಹಾನಿಕಾರಕ," ಎಂದು ಸಚಿವಾಲಯ ಉಲ್ಲೇಖ ಮಾಡಿದೆ.
ಸಚಿವಾಲಯದ ಪ್ರಕಾರ, ಪಾಕಿಸ್ತಾನದಲ್ಲಿ ನಿರ್ಬಂಧಿಸಲಾದ ಯೂಟ್ಯೂಬ್ ಚಾನೆಲ್ಗಳು ಉಕ್ರೇನ್ ಯುದ್ಧದ ಪರಿಸ್ಥಿತಿಯ ನಡುವೆ ಸೇನೆ, ಜಮ್ಮು ಮತ್ತು ಕಾಶ್ಮೀರ ಮತ್ತು ವಿದೇಶಿ ಸಂಬಂಧಗಳಂತಹ ವಿವಿಧ ವಿಷಯಗಳ ಕುರಿತು ಭಾರತದ ಬಗ್ಗೆ ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಲು ಸಂಘಟಿತ ರೀತಿಯಲ್ಲಿ ಬಳಸಲಾಗಿದೆ ಎಂದು ಕಂಡುಬಂದಿದೆ. "ಭಾರತದ ರಾಷ್ಟ್ರೀಯ ಭದ್ರತೆ, ಸಾರ್ವಭೌಮತೆ ಮತ್ತು ಸಮಗ್ರತೆ ಮತ್ತು ವಿದೇಶದೊಂದಿಗೆ ಭಾರತದ ಸ್ನೇಹ ಸಂಬಂಧಗಳ ದೃಷ್ಟಿಕೋನದಿಂದ ಈ ಚಾನಲ್ಗಳ ವಿಷಯವು ಸಂಪೂರ್ಣವಾಗಿ ಸುಳ್ಳು ಮತ್ತು ಸೂಕ್ಷ್ಮವಾಗಿದೆ ಎಂದು ಗಮನಿಸಲಾಗಿದೆ," ಎಂದು ಸಚಿವಾಲಯ ಹೇಳಿದೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು












Click it and Unblock the Notifications