ಚೆನ್ನೈ ಮೂಲದ ಸುಂದರ್ ಪಿಚೈ ಗೂಗಲ್ ನೂತನ ಸಿಇಒ
ನವದೆಹಲಿ, ಆಗಸ್ಟ್ 11 : ಭಾರತೀಯ ಮೂಲದ ಸುಂದರ್ ಪಿಚೈ ಅವರು ಗೂಗನ್ನ ನೂತನ ಸಿಇಒ ಆಗಿ ಆಯ್ಕೆಯಾಗಿದ್ದಾರೆ. ಸುಂದರ್ ಮೂಲತಃ ಚೆನ್ನೈನವರಾಗಿದ್ದು ಎರಡು ವರ್ಷಗಳ ಹಿಂದೆ ಗೂಗಲ್ ಸೇರಿದ್ದರು.
ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಮಂಗಳವಾರ ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ 'ಆಲ್ಫಬೆಟ್' ಕಂಪನಿಯನ್ನು ಆರಂಭಿಸಿದೆ.

43 ವರ್ಷದ ಸುಂದರ್ ಪಿಚೈ ಅವರು ಚೆನ್ನೈನವರು. ಸುಂದರ್ ಪಿಚೈ ಅವರು ಗೂಗಲ್ನ ಪ್ರಮುಖ ರುವಾರಿಯಾಗಲಿದ್ದಾರೆ. ಇದರಿಂದ ಗೂಗಲ್ನಲ್ಲಿ ವಿಶೇಷ ಅವಕಾಶಗಳತ್ತ ಗಮನ ಹರಿಸಲು ಸಹಕಾರಿಯಾಗಿದೆ ಎಂದು ಲ್ಯಾರಿ ಪೇಜ್ ಹೇಳಿದ್ದಾರೆ. [ಟ್ರಾಫಿಕ್ ಸಿಗ್ನಲ್ ಲೈಟಿಗೆ ಗೂಗಲ್ ಡೂಡ್ಲ್ ನಮನ]
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಮೈಕ್ರೋಸಾಫ್ಟ್ ಸಿಇಓ ಸತ್ಯ ನಡೆಲ್ಲಾ ಅವರು ಸುಂದರ್ ಪಿಚೈ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
Congrats @sundarpichai well deserved!
— Satya Nadella (@satyanadella) August 10, 2015 ಆ್ಯಪಲ್ ಸಿಇಒ ಟಿಮ್ ಕುಕ್ ಅವರು ಸಹ ಸುಂದರ್ ಅವರನ್ನು ಅಭಿನಂದಿಸಿ ಟ್ವಿಟ್ ಮಾಡಿದ್ದಾರೆ.
@sundarpichai Congratulations on your promotion!
— Tim Cook (@tim_cook) August 11, 2015 -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications