ವೊಡಾಫೋನ್ ಪರವಾದ ಅಂತರರಾಷ್ಟ್ರೀಯ ನ್ಯಾಯಮಂಡಳಿ ತೀರ್ಪನ್ನು ಪ್ರಶ್ನಿಸಿದ ಭಾರತ
ನವದೆಹಲಿ, ಡಿಸೆಂಬರ್ 24: ಸಿಂಗಾಪುರದಲ್ಲಿ ಭಾರತೀಯ ಆದಾಯ ತೆರಿಗೆ ಅಧಿಕಾರಿಗಳಿಂದ 20,000 ಕೋಟಿ ರೂ.ಗಳ ಬೇಡಿಕೆಯನ್ನು ಒಳಗೊಂಡ ಪ್ರಕರಣದಲ್ಲಿ, ಬ್ರಿಟಿಷ್ ಟೆಲಿಕಾಂ ದೈತ್ಯ ವೊಡಾಫೋನ್ ಗ್ರೂಪ್ ಪರವಾಗಿ ಅಂತರರಾಷ್ಟ್ರೀಯ ನ್ಯಾಯಮಂಡಳಿಯ ತೀರ್ಪನ್ನು ಭಾರತ ಪ್ರಶ್ನಿಸಿದೆ ಎಂದು ಮೂಲಗಳು ತಿಳಿಸಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರವು, 20,000 ಕೋಟಿ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ನಿರ್ಧಾರವನ್ನು ಪ್ರಶ್ನಿಸಿದೆ.
ಅಂತಾರಾಷ್ಟ್ರೀಯ ನ್ಯಾಯಾಧಿಕರಣದ ತೀರ್ಪು ಸಾರ್ವಭೌಮ ಹಕ್ಕು ಹೊಂದಿರುವ ಸಂಸತ್ ಅಂಗೀಕರಿಸಿರುವ ಕಾನೂನಿನ ವಿರುದ್ಧ ಹೋಗುವುದಕ್ಕೆ ಸಾಧ್ಯವಿಲ್ಲ ಎಂದು ಸಾಲಿಸಿಟರ್ ಜನರಲ್ ಅಭಿಪ್ರಾಯಪಟ್ಟಿದ್ದು, ಸರ್ಕಾರಕ್ಕೆ ವೊಡೋಫೋನ್ ಪರವಾಗಿ ಬಂದಿರುವ ನಿರ್ಧಾರವನ್ನು ಪ್ರಶ್ನಿಸುವಂತೆ ಸಲಹೆ ನೀಡಿತ್ತು.

ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಧಿಕರಣ ಈ ಹಿಂದೆ ನೀಡಿದ್ದ ತೀರ್ಪಿನಲ್ಲಿ ವೊಡೋಫೋನ್ ಸಂಸ್ಥೆಯ ಮೇಲೆ ಭಾರತ ಸರ್ಕಾರ ಹೊರಿಸಿರುವ ತೆರಿಗೆ ಭಾರ, ಬಡ್ಡಿ ಹಾಗೂ ದಂಡದ ಮೊತ್ತ ಭಾರತ ಹಾಗೂ ನೆದರ್ಲ್ಯಾಂಡ್ ನ ನಡುವಿನ ಹೂಡಿಕೆ ಒಪ್ಪಂದವನ್ನು ಉಲ್ಲಂಘಿಸುತ್ತದೆ ಎಂದು ತೀರ್ಪು ನೀಡಿತ್ತು. ಪರಿಣಾಮ ಭಾರತದಲ್ಲಿ ಹೂಡಿಕೆ ಮಾಡಿರುವ ನೆದರ್ಲ್ಯಾಂಡ್ ಮೂಲದ ಸಂಸ್ಥೆಗೆ 20,000 ಕೋಟಿ ರೂಪಾಯಿ ತೆರಿಗೆ ಮೊತ್ತದ ಭಾರ ಕಡಿಮೆಯಾಗುವ ಸಂಭವವಿತ್ತು.
ಜೊತೆಗೆ ಇತ್ತೀಚೆಗಷ್ಟೇ ವೊಡಾಫೋನ್ ಪ್ರಕರಣದ ನ್ಯಾಯಮಂಡಳಿ ಭಾರತಕ್ಕೆ 4.3 ಮಿಲಿಯನ್ ಪೌಂಡ್ಗಳನ್ನು ಮತ್ತು 3,000 ಯೂರೋಗಳನ್ನು ಕಾನೂನು ವೆಚ್ಚವಾಗಿ ಮರುಪಾವತಿಸುವಂತೆ ನಿರ್ದೇಶಿಸಿದೆ. ಸರ್ಕಾರದ ಒಟ್ಟು ಹೊಣೆಗಾರಿಕೆಯು ಒಟ್ಟು 85 ಕೋಟಿ ರೂ.ಗಳಾಗಿದ್ದು, ಅದರಲ್ಲಿ 45 ಕೋಟಿ ರೂ.ಗಳನ್ನು ತೆರಿಗೆ ವಿಧಿಸಲು ಮರುಪಾವತಿಸಬೇಕಾಗಿತ್ತು
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications