ವೊಡಾಫೋನ್ ಪರವಾದ ಅಂತರರಾಷ್ಟ್ರೀಯ ನ್ಯಾಯಮಂಡಳಿ ತೀರ್ಪನ್ನು ಪ್ರಶ್ನಿಸಿದ ಭಾರತ
ನವದೆಹಲಿ, ಡಿಸೆಂಬರ್ 24: ಸಿಂಗಾಪುರದಲ್ಲಿ ಭಾರತೀಯ ಆದಾಯ ತೆರಿಗೆ ಅಧಿಕಾರಿಗಳಿಂದ 20,000 ಕೋಟಿ ರೂ.ಗಳ ಬೇಡಿಕೆಯನ್ನು ಒಳಗೊಂಡ ಪ್ರಕರಣದಲ್ಲಿ, ಬ್ರಿಟಿಷ್ ಟೆಲಿಕಾಂ ದೈತ್ಯ ವೊಡಾಫೋನ್ ಗ್ರೂಪ್ ಪರವಾಗಿ ಅಂತರರಾಷ್ಟ್ರೀಯ ನ್ಯಾಯಮಂಡಳಿಯ ತೀರ್ಪನ್ನು ಭಾರತ ಪ್ರಶ್ನಿಸಿದೆ ಎಂದು ಮೂಲಗಳು ತಿಳಿಸಿದೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರವು, 20,000 ಕೋಟಿ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ನಿರ್ಧಾರವನ್ನು ಪ್ರಶ್ನಿಸಿದೆ.
ಅಂತಾರಾಷ್ಟ್ರೀಯ ನ್ಯಾಯಾಧಿಕರಣದ ತೀರ್ಪು ಸಾರ್ವಭೌಮ ಹಕ್ಕು ಹೊಂದಿರುವ ಸಂಸತ್ ಅಂಗೀಕರಿಸಿರುವ ಕಾನೂನಿನ ವಿರುದ್ಧ ಹೋಗುವುದಕ್ಕೆ ಸಾಧ್ಯವಿಲ್ಲ ಎಂದು ಸಾಲಿಸಿಟರ್ ಜನರಲ್ ಅಭಿಪ್ರಾಯಪಟ್ಟಿದ್ದು, ಸರ್ಕಾರಕ್ಕೆ ವೊಡೋಫೋನ್ ಪರವಾಗಿ ಬಂದಿರುವ ನಿರ್ಧಾರವನ್ನು ಪ್ರಶ್ನಿಸುವಂತೆ ಸಲಹೆ ನೀಡಿತ್ತು.

ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಧಿಕರಣ ಈ ಹಿಂದೆ ನೀಡಿದ್ದ ತೀರ್ಪಿನಲ್ಲಿ ವೊಡೋಫೋನ್ ಸಂಸ್ಥೆಯ ಮೇಲೆ ಭಾರತ ಸರ್ಕಾರ ಹೊರಿಸಿರುವ ತೆರಿಗೆ ಭಾರ, ಬಡ್ಡಿ ಹಾಗೂ ದಂಡದ ಮೊತ್ತ ಭಾರತ ಹಾಗೂ ನೆದರ್ಲ್ಯಾಂಡ್ ನ ನಡುವಿನ ಹೂಡಿಕೆ ಒಪ್ಪಂದವನ್ನು ಉಲ್ಲಂಘಿಸುತ್ತದೆ ಎಂದು ತೀರ್ಪು ನೀಡಿತ್ತು. ಪರಿಣಾಮ ಭಾರತದಲ್ಲಿ ಹೂಡಿಕೆ ಮಾಡಿರುವ ನೆದರ್ಲ್ಯಾಂಡ್ ಮೂಲದ ಸಂಸ್ಥೆಗೆ 20,000 ಕೋಟಿ ರೂಪಾಯಿ ತೆರಿಗೆ ಮೊತ್ತದ ಭಾರ ಕಡಿಮೆಯಾಗುವ ಸಂಭವವಿತ್ತು.
ಜೊತೆಗೆ ಇತ್ತೀಚೆಗಷ್ಟೇ ವೊಡಾಫೋನ್ ಪ್ರಕರಣದ ನ್ಯಾಯಮಂಡಳಿ ಭಾರತಕ್ಕೆ 4.3 ಮಿಲಿಯನ್ ಪೌಂಡ್ಗಳನ್ನು ಮತ್ತು 3,000 ಯೂರೋಗಳನ್ನು ಕಾನೂನು ವೆಚ್ಚವಾಗಿ ಮರುಪಾವತಿಸುವಂತೆ ನಿರ್ದೇಶಿಸಿದೆ. ಸರ್ಕಾರದ ಒಟ್ಟು ಹೊಣೆಗಾರಿಕೆಯು ಒಟ್ಟು 85 ಕೋಟಿ ರೂ.ಗಳಾಗಿದ್ದು, ಅದರಲ್ಲಿ 45 ಕೋಟಿ ರೂ.ಗಳನ್ನು ತೆರಿಗೆ ವಿಧಿಸಲು ಮರುಪಾವತಿಸಬೇಕಾಗಿತ್ತು
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications