ಪ್ಯಾಂಗಾಂಗ್ ಸರೋವರದಿಂದ ಸೇನೆ ಹಿಂದೆಗೆತ ಸಂಪೂರ್ಣ: ಭಾರತ-ಚೀನಾ ನಾಳೆ ಮತ್ತೆ ಮಾತುಕತೆ
ನವದೆಹಲಿ, ಫೆಬ್ರವರಿ 19: ಪ್ಯಾಂಗಾಂಗ್ ತ್ಸೊ ಸರೋವರದ ಎರಡೂ ತೀರಗಳಲ್ಲಿನ ಉಭಯ ದೇಶಗಳ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಭಾರತ ಮತ್ತು ಚೀನಾ ನಡುವೆ ನಡೆದಿದ್ದ ಒಪ್ಪಂದಕ್ಕೆ ಅನುಗುಣವಾಗಿ ಎಲ್ಲ ಸೈನಿಕರನ್ನೂ ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ. ಅದರ ಬೆನ್ನಲ್ಲೇ ಭಾರತ-ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ 10ನೇ ಸುತ್ತಿನ ಸಭೆ ಶನಿವಾರ ನಡೆಯಲಿದೆ.
ಪೂರ್ವ ಲಡಾಖ್ನಲ್ಲಿ ಒಂಬತ್ತು ತಿಂಗಳಿನಿಂದ ಉಂಟಾಗಿರುವ ಉಭಯ ದೇಶಗಳ ನಡುವಿನ ಸೇನಾ ಬಿಕ್ಕಟ್ಟನ್ನು ತಿಳಿಗೊಳಿಸುವ ಮೊದಲ ಪ್ರಯತ್ನ ಯಶಸ್ವಿಯಾಗಿದೆ. ಕಳೆದ ತಿಂಗಳು ಕಾರ್ಪ್ಸ್ ಕಮಾಂಡರ್ ಮಟ್ಟದಲ್ಲಿ ನಡೆದ ಒಂಬತ್ತನೇ ಸುತ್ತಿನ ಮಾತುಕತೆಯ ವೇಳೆ ಪ್ಯಾಂಗಾಂಗ್ ತ್ಸೊ ಸರೋವರದ ಉತ್ತರ ಮತ್ತು ದಕ್ಷಿಣ ತೀರಗಳಲ್ಲಿನ ತಮ್ಮ ತಮ್ಮ ಪಡೆಗಳನ್ನು ವಾಪಸ್ ಕರೆಸಿಕೊಳ್ಳಲು ಹಾಗೂ ಅಲ್ಲಿ ಈ ಒಂಬತ್ತು ತಿಂಗಳಲ್ಲಿ ನಿರ್ಮಿಸಿದ ಎಲ್ಲ ಕಟ್ಟಡ ರಚನೆಗಳನ್ನು ನಾಶಪಡಿಸಲು ಒಪ್ಪಂದಕ್ಕೆ ಬರಲಾಗಿತ್ತು.
ಪ್ಯಾಂಗಾಂಗ್ನ ದಕ್ಷಿಣ ತೀರದ ಚುಷುಲ್ ಸಮೀಪ ಇರುವ ಮೊಲ್ಡೊದಲ್ಲಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಾತುಕತೆ ಆರಂಭವಾಗಲಿದೆ. ಈ ಸಭೆ ಎಷ್ಟು ಸಮಯದವರೆಗೂ ನಡೆಯಲಿದೆ ಎನ್ನುವುದು ತಿಳಿದಿಲ್ಲ. ಕಳೆದ ಬಾರಿಯ ಸಭೆ ಬೆಳಿಗ್ಗೆ ಆರಂಭವಾಗಿ ಮಧ್ಯರಾತ್ರಿಯವರೆಗೂ ನಡೆದಿತ್ತು.

ಸಭೆ ಯಶಸ್ವಿಯಾದ ಬಳಿಕ ಹಂತ ಹಂತವಾಗಿ ಸರೋವರದ ತೀರಗಳಿಂದ ನಿರ್ದಿಷ್ಟ ಪ್ರದೇಶದವರೆಗೂ ಸೇನೆಗಳು, ಟ್ಯಾಂಕ್ ಹಾಗೂ ಇತರೆ ಸಾಧನಗಳನ್ನು ಹಿಂದಕ್ಕೆಕರೆಸಿಕೊಳ್ಳಲು ಎರಡೂ ದೇಶಗಳು ಒಪ್ಪಿಗೆ ಸೂಚಿಸಿದ್ದವು.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ











Click it and Unblock the Notifications