India-EU Trade Pact: ಭಾರತ & ಯುರೋಪ್ ನಡುವೆ ಮಹತ್ವದ ಆರ್ಥಿಕ ಒಪ್ಪಂದ, ಭರ್ಜರಿ ಲಾಭದ ನಿರೀಕ್ಷೆ
ಭಾರತ ಮತ್ತು ಯುರೋಪ್ ಒಕ್ಕೂಟದ ನಡುವೆ ಮಹತ್ವದ ವ್ಯಾಪಾರ ಮಾತುಕತೆ ಇದೀಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಜಗತ್ತಿನ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರಗಳ ಪೈಕಿ ಭಾರತ ಕೂಡ ಒಂದಾಗಿದ್ದು, ಜಗತ್ತಿನ ಶ್ರೀಮಂತ ದೇಶಗಳನ್ನೇ ಹೆಚ್ಚಾಗಿ ಹೊಂದಿರುವ ಯುರೋಪ್ ಒಕ್ಕೂಟದ ಜೊತೆಯಲ್ಲಿ ಇದೀಗ ಮಹತ್ವದ ಮಾತುಕತೆ ನಡೆಯುತ್ತಿದೆ. ದಾವೋಸ್ ಶೃಂಗಸಭೆಯಲ್ಲಿ ಈ ಕುರಿತು ಗಂಭೀರ ಚರ್ಚೆ ಆರಂಭ ಆಗಿದ್ದು, ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಭಾರತಕ್ಕೆ ವ್ಯಾಪಾರದ ದೃಷ್ಟಿಯಿಂದ ಯುರೋಪ್ ಒಕ್ಕೂಟದ ಜೊತೆಗೆ ಒಪ್ಪಂದ ಮಾಡಿಕೊಳ್ಳುವುದು ಬಹುಮುಖ್ಯ, ಏಕೆಂದರೆ ಯುರೋಪ್ ಒಕ್ಕೂಟ ಭಾರತದ ಜೊತೆಗೆ ವ್ಯಾಪಾರ ನಡೆಸಲು ತೆರಿಗೆಯಲ್ಲಿ ವಿನಾಯಿತಿ ನೀಡುತ್ತಾ ಬಂದಿದೆ. ಹೀಗಾಗಿಯೇ 2025ರ ಆರ್ಥಿಕ ವರ್ಷದಲ್ಲಿ ಭಾರತ ಮತ್ತು ಯುರೋಪ್ ಒಕ್ಕೂಟದ ನಡುವೆ ಬರೋಬ್ಬರಿ 76 ಬಿಲಿಯನ್ ಡಾಲರ್ ಮೊತ್ತದ ವ್ಯಾಪಾರ ನಡೆದಿದೆ.

ಈ ಹಂತದಲ್ಲಿ ಕಡಿಮೆ ತೆರಿಗೆ ಕೂಡ ಭಾರತಕ್ಕೆ ಸಹಾಯಕವಾಗಿದೆ. ಹೀಗಿದ್ದಾಗ ಯುರೋಪ್ ಒಕ್ಕೂಟದ ಜೊತೆ ಭಾರತ ಅಂತಿಮ ಹಂತದ ಮಾತುಕತೆಯಲ್ಲಿ ಇದ್ದು, ಭಾರತದಿಂದ ರಫ್ತು ಮಾಡುವ ವಸ್ತುಗಳಿಗೆ ಉತ್ತಮ ಬೆಲೆ ಸಿಗುತ್ತಿದೆ. ಇದೇ ಸಮಯದಲ್ಲಿ ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ವ್ಯಾಪಾರ ಮಾತುಕತೆ ಮಹತ್ವದ ಹಂತ ತಲುಪುತ್ತಿದೆ, ಎಂದು ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ತಿಳಿಸಿದ್ದಾರೆ.
ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಆಗಮನ
ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲೇ ಈ ವಿಚಾರವನ್ನು ಉರ್ಸುಲಾ ಅವರು ತಿಳಿಸಿದ್ದು ಸಾಕಷ್ಟು ಪ್ರಾಮುಖ್ಯತೆ ಪಡೆದಿದೆ. ವ್ಯಾಪಾರದಲ್ಲಿ ನ್ಯಾಯಯುತ ಸುಂಕ, ಉತ್ತಮ ಪಾಲುದಾರಿಕೆ ಮತ್ತು ಒತ್ತಡ ರಹಿತ ವ್ಯಾಪಾರ ನೀತಿಯನ್ನು ಅವರು ಪಸ್ತಾಪಿಸಿದ್ದಾರೆ. ಈ ಮೂಲಕ ಭಾರತದ ಜೊತೆಯಲ್ಲಿ ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಿರುವುದು ಲಾಭದಾಯಕ ಆಗಲಿದ್ದು, ಆ ಹಿನ್ನೆಲೆ ಮಾತುಕತೆ ಅಂತಿಮ ಹಂತವನ್ನು ತಲುಪುತ್ತಿದೆ ಎಂದಿದ್ದಾರೆ.
ಮತ್ತೊಂದು ಪ್ರಮುಖ ವಿಚಾರ ಏನೆಂದರೆ ಈ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಯುರೋಪ್ ಒಕ್ಕೂಟದ ಅಧ್ಯಕ್ಷರಾದ ಉರ್ಸುಲಾ ಅವರು ವಿಶೇಷ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಉರ್ಸುಲಾ ಜೊತೆ ಯುರೋಪ್ ಒಕ್ಕೂಟದ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಅವರು ಕೂಡ ಮುಖ್ಯ ಅತಿಥಿಯಾಗಿ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅದಕ್ಕೂ ಮೊದಲೇ ಭಾರತ & ಯುರೋಪ್ ಒಕ್ಕೂಟದ ನಡುವೆ ಆರ್ಥಿಕ ಒಪ್ಪಂದ ಏರ್ಪಡುವ ನಿರೀಕ್ಷೆ ಮೂಡಿದೆ.
ಭಾರತಕ್ಕೆ ಯುರೋಪ್ ಲಾಭದಾಯ ಮಾರುಕಟ್ಟೆ
ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನ ಹಿನ್ನೆಲೆ ಜನವರಿ 25 ಭಾನುವಾರದಿಂದ 27 ಮಂಗಳವಾರ ತನಕ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಯುರೋಪ್ ಒಕ್ಕೂಟದ ಅಧ್ಯಕ್ಷೆ ಉರ್ಸುಲಾ & ಯುರೋಪ್ ಒಕ್ಕೂಟದ ಅಧ್ಯಕ್ಷ ಆಂಟೋನಿಯೊ ಕೋಸ್ಟಾ. ಭಾರತದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಈ ಇಬ್ಬರೂ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದರ ಜೊತೆಯಲ್ಲೇ ಹಲವು ವಿಶೇಷ ಸಭೆಗಳು ಕೂಡ ನಡೆಯಲಿದ್ದು, ವ್ಯಾಪಾರ ಮಾತುಕತೆ ಕೂಡ ಅಂತಿಮ ರೂಪ ಪಡೆಯಲಿದೆ.
ಅತ್ತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಭಾರಿ ದೊಡ್ಡ ಪ್ರಮಾಣದಲ್ಲಿ ತೆರಿಗೆ ಹೇರಿಕೆ ಮಾಡುತ್ತಿರುವ ನಡುವೆ, ಯುರೋಪ್ ಒಕ್ಕೂಟದ ಜೊತೆಗೆ ಭಾರತ ಇದೀಗ ಉತ್ತಮ ಬಾಂಧವ್ಯ ಉಳಿಸಿಕೊಂಡು ವ್ಯಾಪಾರ ಮುಂದುವರಿಸುವ ಅನಿವಾರ್ಯತೆ ಇದೆ. ಭಾರತದ ವಸ್ತುಗಳಿಗೆ ಯುರೋಪ್ ಅತಿದೊಡ್ಡ, ಲಾಭದಾಯಕ ಮಾರುಕಟ್ಟೆಯನ್ನು ಹಲವು ವರ್ಷಗಳಿಂದಲೂ ಒದಗಿಸುತ್ತಾ ಬಂದಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications