ದಾವೂದ್ ಬೇಟೆಗೆ, 'ಡಿ ಕಂಪೆನಿ' ಸರ್ವನಾಶಕ್ಕೆ ಸ್ಪೆಷಲ್ 50 ಟೀಮ್
ದೆಹಲಿ, ಸೆಪ್ಟೆಂಬರ್ 3: ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಪತ್ತೆ ಹಚ್ಚುವುದಕ್ಕೆ, ಅವನ ವ್ಯವಹಾರಗಳನ್ನು ಸರ್ವನಾಶ ಮಾಡುವುದಕ್ಕೆ 50 ಮಂದಿಯ ತಂಡವನ್ನು ರಚಿಸಲು ತೀರ್ಮಾನಿಸಲಾಗಿದೆ.
ಆ ತಂಡದಲ್ಲಿ ಗುಪ್ತಚರ ದಳ ಹಾಗೂ 'ರಾ' ಅಧಿಕಾರಿಗಳು ಕೆಲಸ ಮಾಡುತ್ತಾರೆ. ಕರಾಚಿಯಲ್ಲಿರುವ ದಾವೂದ್ ಇಬ್ರಾಹಿಂನ ಬೇಟೆ ಶತಾಯಗತಾಯ ಆಗಬೇಕು ಎಂದು ನಿರ್ಧರಿಸಿದ್ದು, ಇತ್ತೀಚೆಗೆ ನಡೆದ ರಕ್ಷಣಾ ಪರಿಶೀಲನಾ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.

ತನ್ನ ಜೀವಕ್ಕೆ ಅಪಾಯ ಇದೆ ಎಂಬ ಬಲವಾದ ಗುಮಾನಿಯಿಂದ ದಾವೂದ್ ಇಬ್ರಾಹಿಂ ಆರು ಬುಲೆಟ್ ಪ್ರೂಫ್ ವಾಹನ ಖರೀದಿಸಲು ತೀರ್ಮಾನಿಸಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದು.[ಬುಲೆಟ್ ಪ್ರೂಫ್ ವಾಹನ ಶಾಪಿಂಗ್ ಮಾಡಿದ ದಾವೂದ್ ಇಬ್ರಾಹಿಂ!]
ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ ಐ ಕೂಡ ದಾವೂದ್ ಇಬ್ರಾಹಿಂ ಮೇಲೆ ದಾಳಿಗಳಗಬಹುದು ಎಂಬ ಸೂಚನೆ ನೀಡಿ, ಎಚ್ಚರವಾಗಿರಲು ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆತನ ಹಸ್ತಾಂತರಕ್ಕೆ ಪಾಕಿಸ್ತಾನಕ್ಕೆ ಮಾಡಿದ ಮನವಿಗಳಿಂದ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ್ ದಾವೂದ್ ನ ಚಟುವಟಿಕೆಗಳ ಮೇಲೆ ಕಣ್ಣಿಡುವುದು ಈ ಆಪರೇಷನ್ ಉದ್ದೇಶ. ಇಡೀ ಆಪರೇಷನ್ ಉಸ್ತುವಾರಿಯನ್ನು ಎನ್ ಎಸ್ ಎನ ಅಜಿತ್ ದೋವಲ್ ನೋಡಿಕೊಳ್ಳುತ್ತಾರೆ. ದಾವೂದ್ ನ ಬಲೆಗೆ ಕೆಡವಲು ಬ್ಲೂಪ್ರಿಂಟ್ ಸಿದ್ಧವಾಗುತ್ತಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.[ದಾವೂದ್ ಮನೆ ವಿಳಾಸ: 9 ರಲ್ಲಿ 6 ಮಾತ್ರ ಸರಿಯಿದೆ : ಯುಎನ್]
ಒಂದು ಕಡೆ 50 ಮಂದಿಯ ತಂಡ ದಾವೂದ್ ಬೇಟೆಯಲ್ಲಿ ತೊಡಗಿದರೆ, ಮತ್ತೊಂದು ಕಡೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರುವುದನ್ನು ಭಾರತ ಸರ್ಕಾರ ಮುಂದುವರಿಸಲಿದೆ. ಹಸ್ತಾಂತರದ ಬೇಡಿಕೆ, ಕಾನೂನಾತ್ಮಕ ಮನವಿಯನ್ನು ಪಾಕಿಸ್ತಾನಕ್ಕೆ ಕಳಿಸುವ ಜೊತೆಗೆ ದಾವೂದ್ ನನ್ನು ವಶಕ್ಕೆ ಪಡೆಯುವುದಕ್ಕೆ ಅಂತಾರಾಷ್ಟ್ರೀಯ ಸಮುದಾಯದ ನೆರವು ಕೇಳುವುದಕ್ಕೂ ನಿರ್ಧರಿಸಲಾಗಿದೆ.
ಈ ಮಧ್ಯೆ ಪಾಕಿಸ್ತಾನದಲ್ಲಿ ದಾವೂದ್ ಗೆ ನೀಡಿರುವ ರಕ್ಷಣೆ ಹೆಚ್ಚಿಸಲಾಗಿದೆ. ಹೊರಗೆ ಹೆಚ್ಚು ಸುತ್ತಾಡಬಾರದು ಎಂಬ ಸೂಚನೆ ಇರುವುದರಿಂದ ಕರಾಚಿಯಲ್ಲಿರುವ ಬಂಗಲೆ ಬಿಟ್ಟು ಆತ ಕದಲುತ್ತಿಲ್ಲ. ಆತನ ಸಹಚರ ಛೋಟಾ ಶಕೀಲ್ ಸೇರಿದಂತೆ ಇತರರಿಗೂ ಇದೇ ಸೂಚನೆ ನೀಡಲಾಗಿದೆ. ಸದ್ಯಕ್ಕೆ ದಾವೂದ್ ನ ದುಬೈ ವ್ಯವಹಾರಗಳ ಬಗ್ಗೆ ನಿಗಾ ಇಡಲಾಗಿದೆ ಎಂದು ಗುಪ್ತಚರ ಅಧಿಕಾರಿಗಳು ತಿಳಿಸಿದ್ದಾರೆ.[ಕರಾಚಿಯ ಕ್ಲಿಫ್ಟನ್ ಉಪನಗರದಲ್ಲೇ ದಾವೂದ್ ನೆಲೆ]
ದೊಡ್ಡ ಮಟ್ಟದ ಆತನ ವ್ಯವಹಾರಗಳು ನಡೆಯುತ್ತಿರುವುದು ದುಬೈನಲ್ಲಿ, ಆತನಿಗೆ ಅಲ್ಲಿರುವ ಸಂಪರ್ಕಗಳಿಂದ, ಅವನ ಕಡೆಯ ಜನರಿಂದ. ಒಂದು ವೇಳೆ ಅಲ್ಲಿಯ ನೆಟ್ ವರ್ಕ್ ಗಳನ್ನು ಮುರಿಯುವುದಕ್ಕೆ ಭಾರತ ಯಶಸ್ವಿಯಾಗಿಬಿಟ್ಟರೆ ದಾವೂದ್ ಇಬ್ರಾಹಿಂ ಶಕ್ತಿ ಕುಂದಿದಂತೆಯೇ ಎಂದು ಅಧಿಕಾರಿಗಳು ಹೇಳುತ್ತಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications